Pages (key to Page Status)
ಶರಣಸನ್ಮತವಪ್ಪ ನಿಜಗುಣಭರಿತನಪ್ಪಡೆ ಸತ್ವ ರಜ ತಮ ಕ್ರೋಧ ಬಿಡದನ್ನಕ್ಕ ಅನುಭಾವವೆಲ್ಲಿಯದೊ ಆತ್ಮಸ್ತುತಿ ಪರನಿಂದೆಯ ಬಿಡದನ್ನಕ್ಕ ಅರಿಷಡ್ವರ್ಗ ದಶವಾಯು ಬೆರೆಸಿಪ್ಪ ಕಳಂಕವಪ್ಪ ತನುವ ಬಿಡದನ್ನಕ್ಕ. ಸಂಸಾರ ಮಾದಲ್ಲದೆ ಶರಣಸಜ್ಜನಿಕೆ ಸಮಯಾಚಾರ ನಿಜವ್ರತವು ದುರಾಚಾರಿಗಳಿಗಳವಡದು ನಮ್ಮ ಕೂಡಲಸಂಗನ ಶರಣರಿಗಲ್ಲದೆ.