Pages   (key to Page Status)   


ಅಜ ಹರಿ ಸುರ ಮನು ಮುನಿಗಳ ಮರುಳುಮಾಡಿ ಕಾಡಿತ್ತೀ ಮಾಯೆ. ಪತಿವ್ರತೆಯೆಂಬುವರ ಪರಿಯಟಣಗೊಳಿಸಿತ್ತೀ ಮಾಯೆ. ಯತಿಗಳೆಂಬವರ ಎದೆಯೆದೆಯನೊದೆದಿತ್ತೀ ಮಾಯೆ. ಸಚರಾಚರಂಗಳನೆಲ್ಲವ ಜನನ ಮರಣಗಳೆಂಬ ಅಣಲೊಳಗಿಕ್ಕಿ ಆಗಿದಗಿದು ಉಗಿಯಿತ್ತು ನೋಡ ಮಾಯೆ. ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ
ನಿಮ್ಮ ಶರಣರಲ್ಲದವರ ಕೊಂದು ಕೂಗಿಸಿತ್ತು ನೋಡ ಈ ಮಾಯೆ.