ಅಮೃತಸಾಗರದೊಳಗಿರ್ದು ಆಕಳ ಚಿಂತೆ



Pages   (key to Page Status)   


ಅಮೃತಸಾಗರದೊಳಗಿರ್ದು ಆಕಳ ಚಿಂತೆ ಏಕೆ ? ಮೇರುಮಧ್ಯದೊಳಗಿರ್ದು ಜರಗ ತೊಳೆವ ಚಿಂತೆ ಏಕೆ ? ಗುರುವಿನೊಳಗಿರ್ದು ತತ್ವವಿದ್ಯೆಯ ಚಿಂತೆ ಏಕೆ ? ಪ್ರಸಾದದೊಳಗಿರ್ದು ಮುಕ್ತಿಯ ಚಿಂತೆ ಏಕೆ ? ಕರಸ್ಥಲದೊಳಗೆ ಲಿಂಗವಿರ್ದ ಬಳಿಕ
ಮತ್ತಾವ ಚಿಂತೆ ಏಕೆ ಹೇಳಾ ಗುಹೇಶ್ವರಾ ?