Pages   (key to Page Status)   


ಉದಕ ಮಜ್ಜನವಲ್ಲ ಪತ್ರೆ ಪೂಜೆಯಲ್ಲ. ಧೂಪ ಪರಿಮಳವಲ್ಲ
ಕಂಚು ಬೆಳಗಲ್ಲ
ಸಯಧಾನ ಅರ್ಪಿತವಲ್ಲ ! ಅದೆಂತೆಂದಡೆ: ಸಜ್ಜನವೆ ಮಜ್ಜನ
ಸತ್ಯಸದಾಚಾರವೆ ಪತ್ರೆ ಪುಷ್ಪ. ಅಷ್ಟಮದಂಗಳ ಸುಟ್ಟುದೆ ಧೂಪ
ನಯನವೆ ಸ್ವಯಂ ಜ್ಯೋತಿ
ಪರಿಣಾಮವೆ ಅರ್ಪಿತ ಕಾಣಾ ಗುಹೇಶ್ವರಾ.