Pages   (key to Page Status)   


ಎಣ್ಣೆ ಬೇರೆ ಬತ್ತಿ ಬೇರೆ:ಎರಡೂ ಕೂಡಿ ಸೊಡರಾಯಿತ್ತು. ಪುಣ್ಯ ಬೇರೆ ಪಾಪ ಬೇರೆ:ಎರಡೂ ಕೂಡಿ ಒಡಲಾಯಿತ್ತು. ಮಿಗಬಾರದು
ಮಿಗದಿರಬಾರದು
ಒಡಲಿಚ್ಛೆಯ ಸಲಿಸದೆ ನಿಮಿಷವಿರಬಾರದು. ಕಾಯಗುಣವಳಿದು ಮಾಯಾಜ್ಯೋತಿ ವಾಯುವ ಕೂಡುವ ಮುನ್ನ
ಭಕ್ತಿಯ ಮಾಡಬಲ್ಲಡೆ ಆತನೆ ದೇವ ಗುಹೇಶ್ವರಾ.