Pages (key to Page Status)
ಎನ್ನಂತರಂಗವೆಂಬ ಭೂಮಿಯಲ್ಲಿ ಮಹಾಜ್ಞಾನವೆಂಬ ನಿಧಾನ ಭೂಗತವಾಗಿದ್ದಿತ್ತಯ್ಯಾ. ಶ್ರೀಗುರುವೆಂಬ ಅಂಜನಸಿದ್ಧನು ಬಂದು ಎನ್ನ ಅದಕ್ಕೆ ಬಲೆಯನಿಕ್ಕಿ ತನ್ನ ಕರುಣಾಮೃತವೆಂಬ ಮರುಜವಣಿಯ ಹಿಂಡಿ ಆ ನಿಧಾನವನೆನಗೆ ಕರತಳಾಮಳಕವ ಮಾಡಿಕೊಟ್ಟನಯ್ಯಾ. ಗುಹೇಶ್ವರಾ_ನಿಮ್ಮ ಶರಣ ಅನಿಮಿಷನೆಂಬ ಶ್ರೀಗುರು.