Pages   (key to Page Status)   

ಎನ್ನ ಆಪತ್ತು, ಸುಖ-ದುಃಖವನಿನ್ನಾರಿಗೆ ಹೇಳುವೆ ಶರಣಸ್ಥಲದವರಿಗೆ ಹೇಳಿದಡೆ ಮಚ್ಚರ !
ಸವತಿ-ಸಕ್ಕರೆ, ಬೇವು-ಬೆಲ್ಲ ಉಂಟೆ! ಇನ್ನಾರಿಗೆ ಹೇಳುವೆ! ಕೂಡಲಸಂಗಮದೇವಾ,
ಜಂಗಮವಾಗಿ ಬಂದು ಎನ್ನ ಮನದ ಸೂತಕವ ಕಳೆಯಾ.