Pages   (key to Page Status)   

ಕಲಿತನ ತನಗುಳ್ಳಡೆ ಸೂಜಿ ಬಾಳು ಮೊದಲಾಗಿ ಕಾದಲೆಬೇಕು. ಶರಣಪಥ ತನಗುಳ್ಳಡೆ ಶಿವಭಕ್ತರ ಮನೆಯಲ್ಲಿ ಶಿವರಸವ ಪಂಚಾಮೃತವ ಮಾಡಿಕೊಳ್ಳಬೇಕು. ಭ್ರಾಂತುವಿಡಿದು ಲಿಂಗಕ್ಕೋಗರವನರಸುವ ಪಾತಕರ ಮೆಚ್ಚ ಕೂಡಲಸಂಗಮದೇವ.