ಕ್ಷೀರಸಾಗರದೊಳಗಿರ್ದು ಆಕಳ ಚಿಂತೆಯೇಕೆ



Pages   (key to Page Status)   


ಕ್ಷೀರಸಾಗರದೊಳಗಿರ್ದು ಆಕಳ ಚಿಂತೆಯೇಕೆ ? ಮೇರುಮಂದಿರದೊಳಗಿರ್ದು ಜರಗ ತೊಳೆವ ಚಿಂತೆಯೇಕೆ ? ಶ್ರೀಗುರುವಿನೊಳಗಿರ್ದು ತತ್ವವಿದ್ಯೆಯ ಚಿಂತೆಯೇಕೆ ? ಪ್ರಸಾದದೊಳಗಿರ್ದು ಮುಕ್ತಿಯ ಚಿಂತೆಯೇಕೆ ? ಕರಸ್ಥಲಕೆ ಲಿಂಗ ಬಂದ ಬಳಿಕ ಇನ್ನಾವ ಚಿಂತೆ ಹೇಳಾ
ಗುಹೇಶ್ವರಾ.