ಖೇಚರಪವನದಂತೆ ಜಾತಿಯೋಗಿಯ ನಿಲುವು



Pages   (key to Page Status)   


ಖೇಚರಪವನದಂತೆ ಜಾತಿಯೋಗಿಯ ನಿಲುವು ! ಮಾತಿನೊಳು ಧಾತು ನುಂಗಿ ಉಗುಳದಿನ್ನೆಂತೊ ? ಭೂಚಕ್ರವಳಯವನು ಆಚಾರ್ಯ ರಚಿಸಿದ. ಗ್ರಾಮವೆಲ್ಲವ ಸುಟ್ಟು
ನೇಮ ನಾಮವ ನುಂಗಿ ಗ್ರಾಮದ ಪ್ರಭುವನೆ ನುಂಗಿ
`ಗುಹೇಶ್ವರ ಗುಹೇಶ್ವರ' ಎನುತ ನಿರ್ವಯಲಾಗಿತ್ತು.