ಗುರುತತ್ವದಲ್ಲಿ ಹುಟ್ಟಿ, ಶಿವತತ್ವದಲ್ಲಿ



Pages   (key to Page Status)   


ಗುರುತತ್ವದಲ್ಲಿ ಹುಟ್ಟಿ
ಶಿವತತ್ವದಲ್ಲಿ ಬೆಳೆದು ಪರತತ್ವದಲ್ಲಿ ಮಗ್ನವಾದ ಶರಣಂಗೆ ಕಾಯವಿಡಿದಡೇನು ? ಕಾಯವಳಿದು ನಿರ್ವಯಲಾದಡೇನು ? ಕಾಯಸಮಾಧಿ ಕರಣಸಮಾಧಿ ಭಾವಸಮಾಧಿಯಾದ ಬಳಿಕ
ಗುಹೇಶ್ವರಲಿಂಗದಲ್ಲಿ ಬಯಲಭ್ರಮೆಯ ಕಳೆದು ಸುಜ್ಞಾನಸಮಾಧಿಯನೆಯ್ದಬಲ್ಲಡೆ ಅದೇ ನಿಜಸಮಾಧಿ ಕೇಳಾ ಸಿದ್ಧರಾಮಯ್ಯಾ.