ಜಗತ್ರಯದ ಹೊಲೆಯನೆಲ್ಲವನು ಉದಕ



Pages   (key to Page Status)   

ಜಗತ್ರಯದ ಹೊ[ಲೆ]ಯನೆಲ್ಲವನು ಉದಕ ಒಳಕೊಂಬುವುದು. ಉದಕದ ಪೂರ್ವಾಶ್ರಯವ ಕಳೆವಡಾರಳವಲ್ಲ. ಅದೆಂತೆಂದಡೆ; ಯದಾ ಪೃಥ್ವೀಶ್ಮಶಾನಂ ಚ ತದಾ ಜಲಂ ನಿರ್ಮಲಿನಕಂ ಮಹಾಲಿಂಗಂ ತು ಪೂಜಾನಾಂ ವಿಶೇಷಂ ಪಾಕಂ ಭವೇತ್ ಎಂದುದಾಗಿ. ಅದಕ್ಕೆ ಮತ್ತೆಯು; ಪ್ರಥಮಂ ಮಾಂಸತೋಯಾನಾಂ ದ್ವಿತೀಯಂ ಮಾಂಸಗೋರಸಃ ತೃತೀಯಂ ಮಾಂಸನಾರೀಣಾಂ ಕಸ್ಯ ಶೀಲಂ ವಿಧೀಯತೇ ಎಂದುದಾಗಿ
ಯಥಾ ಉದಕದಿಂದಲಿ ಅಗ್ನಿಯಿಂದಲಿ ಪಾಕವಾದ ದ್ರವ್ಯಪದಾರ್ಥಂಗಳೆಲ್ಲವು ಜೀವಮಯವೆಂದು ಹೇಳುತಿರ್ದವಾಗಿ
ಆ ದೋಷದಿಂದಲಾದ ಭೋಜನವನು ಲಿಂಗಕ್ಕೆ ಸಮರ್ಪಿಸಲಾಗದು. ಅದೆಂತೆಂದಡೆ; ಭೂಮಿದ್ರ್ರವ್ಯಂ ಯಥಾ ಮಾಂಸಂ ಪ್ರಾಣಿದ್ರವ್ಯಂ ಯಥಾ ಮಧು ಸರ್ವಭೂತಮಯಂ ಜೀವಂ ಜೀವಂ ಜೀವೇನ ಭಕ್ಷಿತಂ ಎಂದುದಾಗಿ ಇಂಥ ಉದಕದ ಪೂರ್ವಾಶ್ರಯವು
ಬೋನದ ಪೂರ್ವಾಶ್ರಯವು
ಹೇಗೆ ಹೋಹುದಯ್ಯಾ ಎಂದಡೆ: ಉದಕದ ಪೂರ್ವಾಶ್ರಯವು ಜಂಗಮದ ಪಾದತೀರ್ಥ ಮುಖದಿಂದ ಹೋಯಿತ್ತು
ಬೋನದ ಪೂರ್ವಾಶ್ರಯವು ಜಂಗಮದ ಪ್ರಸಾದದ ಮುಖದಿಂದ ಹೊಯಿತ್ತು. ಇದು ಕಾರಣ
ಈ ವರ್ಮ ಸಕೀಲವು ಪ್ರಭುದೇವರ ವಳಿ ಬಸವಣ್ಣನ ವಂಶಕ್ಕಲ್ಲದೆ ಮತ್ತಾರಿಗೂ ಅಳವಡದು ಕಾಣಾ ಕೂಡಲಸಂಗಮದೇವಾ.