ಹನ್ನೊಂದನೆಯ ಸಂಧಿ ಸಂಪಾದಿಸಿ
ಪದ್ಯ :-:ಸೂಚನೆ : ಸಂಪಾದಿಸಿ
ಹಿಂದುಳಿದನಾಹವಕ್ಕೆಂದು ಹಂಸಧ್ವಜಂ | ನಂದನನನೆಣ್ಣೆ ಗಾಯ್ದಿರ್ದ ಕೊಪ್ಪರಿಗೆಯೊಳ್ | ತಂದು ಕೆಡಹಿಸಲಚ್ಯತಧ್ಯಾನದಿಂತಂಪುವಡೆದನವನಚ್ಚರಿಯೆನೆ || |
[ಆವರಣದಲ್ಲಿ ಅರ್ಥ];=ಸೂಚನೆ:
|
ಪದ್ಯ :-:ಸೂಚನೆ : ಸಂಪಾದಿಸಿ
ಭೂಹಿತಚರಿತ್ರ ಕೇಳುಳಿಯದೆ ಸಮಸ್ತಭಟ | ರಾಹವಕೆ ಪೊರಮಟ್ಟ ಬಳಿಕ ಹಂಸಧ್ವಜನ | ಮೋಹದ ಕುಮಾರಂ ಸುಧನ್ವನಾಯತಮಾಗಿ ಬಂದು ನಿಜಮಾತೆಯಡಿಗೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೨ : ಸಂಪಾದಿಸಿ
ಕಂದ ಕೇಳ್ ಫಲುಗುಣಂ ಪಾಲಿಪಂ ನಾಲ್ಕಡಿಯ | ದೊಂದು ಹರಿಯಂ ನಿನಗದರ ಚಿಂತೆ ಬೇಡ ಸಾ | ನಂದದಿಂ ಪಾರ್ಥನಂ ರಕ್ಷಿಸುವ ಹರಿಯನೇ ಹಿಡಿವ ಬುದ್ಧಿಯನೆ ಮಾಡು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೩ : ಸಂಪಾದಿಸಿ
ತಾಯೆ ಚಿತ್ತೈಸಾದೊಡೀ ಭಾಷೆಯಂ ಕೃಷ್ಣ | ರಾಯನಂ ತನ್ನೆಡೆಗೆ ಬರಿಸಿಕೊಳ್ವುದಕೊಂದು | ಪಾಯಮಂ ಬಲ್ಲೆನಾಂಕಯ್ಯಂ ಪಿಡಿದೊಡೆ ಮೈ ತಾನೆ ಬಹುದಿಂದ್ರಜನನು | |
[ಆವರಣದಲ್ಲಿ ಅರ್ಥ];=
|
ಪದ್ಯ :-:೪: ಸಂಪಾದಿಸಿ
ಕರುವನೆಳಗಂದಿ ತಾನರ ಕೊಂಡೈತರ್ಪ | ತೆರದಿಂದೆ ಬಂದಪಂ ಮುರಹರಂ ಪಾರ್ಥನೆಡೆ | ಗರಿವೆನಿದು ನಿಶ್ಚಯಂ ಮಗನೆ ನೀನಾ ಹರಿಗೆ ವಿಮುಖನಾದೊಡೆ ತನ್ನನು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೫: ಸಂಪಾದಿಸಿ
ಎಂದೊಡೆಲೆ ತಾಯೆ ಕೇಳ್ ಚಕ್ರಿಗೆ ವಿಮುಖನಾಗಿ | ಬಂದೆನಾದೊಡೆ ನಿನ್ನ ಗರ್ಭದಿಂದುದಯಿಸಿದ | ನಂದನನೆ ಹಂಸಧ್ವಜನ ಕುಮಾರನೆ ಮೇಣು ಹರಿಕಿಂಕರನೆ ವೀರನೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೬: ಸಂಪಾದಿಸಿ
ಅನಿತರೊಳ್ ಕುವಲೆಯೆಂಬುವಳೋರ್ವಳಾ ಸುಧ | ನ್ವನ ಸಹೋದರಿ ತಂದಳಾರತಿಯನನುಜ ಕೇ | ಳನುವರದೊಳಿಂದು ಶೌರಿಗೆ ವಿಮುಖನಾಗಿ ನೀಂ ಬಂದೆಯಾದೊಡೆ ಮಾನವ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೭: ಸಂಪಾದಿಸಿ
ಅರಸ ಕೇಳಾ ಸುಧನ್ವಂ ಬಳಿಕ ಜನನಿಸೋ | ದಿರಯರಂ ಬೀಳ್ಕೊಂಡು ಪೊರಮಟ್ಟು ತನ್ನ ಮಂ | ದಿರದ ಪÉÇರೆಗೈತರಲ್ಕಿದಿರಾಗಿ ಪೊಂದಟ್ಟೆಯೊಳ್ ಸಂಪಗೆಯ ಪೂವನು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೮: ಸಂಪಾದಿಸಿ
ಚಂದ್ರಮಂಡಲ ಸದೃಶ ವದನದೆಳನಗೆಯ ನವ | ಚಂದ್ರಿಕೆಯೆನಲ್ ಮೇಲುದಿನ ದುಕೂಲಂ ಮೆರೆಯೆ | ಚಂದ್ರತಿಲಕದ ರಾಗಮುಂ ಚಿತ್ತದನುರಾಗಮಂ ಸೂಚಿಪಂತೆ ಸೊಗಸೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೯: ಸಂಪಾದಿಸಿ
ಸ್ಫುರಿಸುವೊಳ್ದೊಡೆಯ ಬೆಡಗಿನ ನಡೆಯ ನಿರಿಯ ಸಿಂ | ಗರದುಡಿಯ ತೆಳ್ವಾದಸಿಯ ಪೊಡೆಯ ಚೆಲ್ವುದಳೆ | ದುರದೆಡೆಯ ನಿಂಬುಗೊಂಡಿಟ್ಟೆಡೆಯ ಬಲ್ಮೊಲೆಯ ಪೊಳೆವ ಕಣ್ಮಲರ ಕಡೆಯ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೧೦: ಸಂಪಾದಿಸಿ
ಮುಡಿಯ ಪೊಸಮಲ್ಲಿಗೆಯ ಸೂಸುವೆಳನಗೆಯ ಸವಿ | ನುಡಿಯ ಬಾಯ್ದೆರೆದು ಹೊಳೆಹೊಳೆವ ದಶನದ ಮಿಸುಪ | ಕಡಿಗಣ್ಣ ತೊಳಗುವ ನಖಾವಳಿಯ ಥಳಥಳಿಪ ಕಂಠಮಾಲೆಯ ಮುತ್ತಿನ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೧೧: ಸಂಪಾದಿಸಿ
ಕರಯುಗದೊಳಾಂತ ಪೊಂದಟ್ಟೆಯನದರ ಮೇಲೆ | ಪೆರಪಿರ್ದ ಸಂಪಗೆಯ ಪೂಗಳಂ ತನ್ನ ಮೆ | ಯ್ಯೊರಗೆ ಸರಿಯಾದಪುವೆ ನೋಡೆಂದು ತೋರ್ಪಂತೆ ಕೊಂಡುಬಂದಿದಿರೆ ನಿಂದ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೧೨: ಸಂಪಾದಿಸಿ
ಕಾಂತೆ ಕೇಳಿಂದು ಸಮರದೊಳರ್ಜುನಂಗೆ ಮಾ | ರಾಂತವನ ಬಿಂಕಮಂ ಮುರಿವೆನಾ ಹರೆಬಕಸು | ರಾಂತಕಂ ಬಂದೊಡಾತನ ಮುಂದೆ ತೋರಿಸುವೆನೆನ್ನ ಭುಜವಿಕ್ರಮನು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೧೩: ಸಂಪಾದಿಸಿ
ಯುಕ್ತಮಲ್ಲಿದು ರಮಣ ನಿನಗೆ ಕೇಳ್ ಕಾದುವಾ | ಸಕ್ತಿಯಿಂ ಚಕ್ರಿಗಭಿಮುಖನಾದ ಬಳಿಕಲ್ಲಿ | ಮುಕ್ತಿಯಿಲ್ಲದೆ ಬೇರೆ ಜಯಮುಂಟೆ ಜನಿಸದು ವಿವೇಕಸಂತತಿ ನಿನ್ನೊಳು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೧೪: ಸಂಪಾದಿಸಿ
ಅದರಿಂದಮಾತ್ಮಜವಿವೇಕಮಿಲ್ಲದೊಡೆ ನನ | ಗಿದುವೆ ಜಲದೋದಯದ ಋತುಸಮಯಮೀ ಪದದೊ | ಳುದುಭವಿಸುವುದು ನಿನ್ನ ಭೂಮಿಯೊಳ್ ಬೀಜಮಂ ಬಿತ್ತೊದೊಡೆ ಬೆಳೆ ಬಾಳ್ಕೆಗೆ | |
[ಆವರಣದಲ್ಲಿ ಅರ್ಥ];=
|
ಪದ್ಯ :-:೧೫: ಸಂಪಾದಿಸಿ
ರಮಣಿ ನೀನೆಂಬುದನುನಯಮಪ್ಪುದಾದೊಡಂ | ಸಮಯಮಲ್ಲಿದು ಮೊಳಗುತಿದೆ ಭೇರಿ ಪೊರಮಟ್ಟು | ಸಮರಕಯ್ಯಂ ಪೋದನುಳಿದೆನಾದೊಡೆತಾತನಾಜ್ಞೆಗೊಳಗಾಗದಿರೆನು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೧೬: ಸಂಪಾದಿಸಿ
ಅಂಗಮಿಲ್ಲದನ ಸಮರಂಗಮಂ ಪುಗಲಂಜಿ | ತುಂಗವಿಕ್ರಮವಿಜಯಸಂಗರಕೆಳಸುವೆನೆಂ | ಬಂಗವಣೆಯೆಂತುಂಟೆಂದಂಗನೆ ಬಲಾತ್ಕಾರದಿಂ ಗುರುಕುಚದ್ವಯವನು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೧೭: ಸಂಪಾದಿಸಿ
ಮಿಡಿದೊಡೊಡೆವಂತಮೃತರಸದಿಂದೆ ಮೆರೆವ ಪೊಂ | ಗೊಡಮೊಲೆಯಮವನ ವಕ್ಷಸ್ಥಳದೊಳಿಟ್ಟೊತ್ತಿ | ದೊಡೆ ಹಿಸಿದೊಳಗಣ ತನುಸುಧೆಯೊಸರ್ದುತೊಟ್ಟಿಡುವ ಬಿಂದುಗಳ ಸಾಲಿದೆನಲು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೧೮: ಸಂಪಾದಿಸಿ
ಪ್ರಿಯನ ತನುಚಂದನಮಹೀಜಮಂ ಸುತ್ತಿದ ಫ | ಣಿಯೊ ವಲ್ಲಭಾಂ ಗದಾಲಸ್ತಂಭಮಂ ತೊಡ | ರ್ದಯುಗಸ್ಮ/ಶ್ಮ/ರಕರಿಯ ಸುಂಡಿಲೊ ಕಾಂತಕಾಯಬಲಮಂ ಬಂಧಿಸಿದ ಮದನನ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೧೯: ಸಂಪಾದಿಸಿ
ಕಣ್ಮಲರ್ ಕಾತರಿಸೆ ಮುಡಿ ಪೂಗಳಂ ಸೂಸೆ | ನುಣ್ಮೊಗಂ ಬೇರೊಂದು ಪರಿಯಾಗೆ ನುಡಿ ದಐನ್ಯ | ಮುಣ್ಮೆಹೀನಸ್ವರದೊಳೆಸೆಯೆ ಕೈ ಕಲೆಗಳೊಳ್ ಸೋಂಕೆ ಮೈ ಪುಳಕದಿಂದೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೨೦: ಸಂಪಾದಿಸಿ
ಸತಿಗೆ ಷೋಡಶದ ಋತುಮಯಮೇಕಾದಶೀ | ವ್ರತಮಲಂಘ್ಯಶ್ರಾದ್ಧಮಿನಿತೊಂದುದಿನಮೆ ಸಂ | ಗುಮಾದೊಡೆಂತು ಕರ್ತವ್ಯಮೆನೆ ಪೈತೃಕದ ಶೇಷಾನ್ನಮಾಘ್ರಾಣಿರೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೨೧: ಸಂಪಾದಿಸಿ
ತಾತನಾಜ್ಞೆಯನುಳಿದು ಕೃಷ್ಣದರ್ಶನಕೈದ | ದೀತರಳೆಗಿಂದು ಋತುದಾನಮಂ ಮಾಡಿದೊಡೆ | ಪಾತಕಂ ತನಗಿಲ್ಲಮೆಂದು ನಿಶ್ಚೈಸಿ ಬಳಿಕಾ ಸುಧನ್ವಂ ಮನದೊಳು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೨೨: ಸಂಪಾದಿಸಿ
ನಾಣ್ಮೀಸಲಳಿದವಯವದ ಭೇದಮಂ ಮರೆದು | ಜಾಣ್ಮೆಗಳ ಬಂಧಂಗಳೊಳ್ ಬಳಸಿ ಸೊಗಯಿಸುವ | ಗೋಣ್ಮೊಳಗಿನಿಂಚರಂಗಳನೆಸಗಿ ಮೊನೆವಲ್ಲ ಕರ್ದುಂಕನುಗುರೊತ್ತನು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೨೩: ಸಂಪಾದಿಸಿ
ಒದವಿದ ಸೊಬಗಿನ ಶೃಂಗಾರದಾತುರದ ವೀ | ರದ ಲಲ್ಲೆವಾತಿನ ಕರುಣದ ನಗೆಮೊಗದ ಹಾ | ಸ್ಯದ ನಖಕ್ಷತದ ರೌದ್ರದ ಖಾತುರದ ಭಯದ ಬೆಮರೊಗೆದ ಭೀಭತ್ಸದ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೨೪: ಸಂಪಾದಿಸಿ
ಕೂರುಗುರ್ಗಳ ಗೆರೆಯ ಸೂತ್ರಬಂಧದೊಳೆಸೆವ | ತೋರಮೊಲೆಗಳ ಕುಂಭಸಂಸ್ಥಾಪನಂಗೈಯ್ದು | ಚಾರುತರ ಗಳರವದಮಂತ್ರದಿಂ ರೊಮಾಂಚನದ ಕುಶಾಗ್ರಂಗಳಿಂದೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೨೫: ಸಂಪಾದಿಸಿ
ಪ್ರಕಟಸಿದ ಕಟಿ ತಳ್ಳುವಳ್ಳೆ ಬೆಂಡಾದ ಮೈ ಸುಕಲೆಗಳನಾಂತ ಮೊಲೆ ಕದಡುಲೇಪದ ಬೆಮರ್ | ವಿಕಸಿತಸುಖದೊಳಿದ್ದ ಮನಮೆದ್ದ ರೋಮಾಂಚಮಸವಳಿದ ಕೈ ಮಸುಳ್ದ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೨೬: ಸಂಪಾದಿಸಿ
ಮನ್ವಾದಿಋಷಿಗಳಭಿಮತಮಿದೆಂದರಿದಾ ಸು | ಧ್ವನಂ ಋತುಸ್ನಾತೆಯಂ ಮೀರದೊಡಗೂಡಿ | ತನ್ವಿಯಂ ಬೀಳ್ಕೊಂಡುಸಮರಕನುವಾಗಲಿರಲಿತ್ತ ಕುರುಕುಲದ ನೃಪರ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೨೭: ಸಂಪಾದಿಸಿ
ಪೊರೆಯೊಳಿಹ ಸಚಿವರಂ ನೋಡುತವರೊಳ್ ಸುಮತಿ | ಗರಸಂ ನಿರೊಪಿಸಲವಂ ಕಡುಗಡಿಕರಾದ | ಚರರನಟ್ಟಿದೊಡವರ್ ಬರೆಸೆಳೆದುನಗುತಿಹ ಸುಧನ್ವನಂ ತುಡಿಕಿ ಪಿಡಿದು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೨೮: ಸಂಪಾದಿಸಿ
ಕಟ್ಟುಸಹಿತಾ ಸುಧನ್ವಂ ತಾತನಡಿಗೆ ಪೊಡ | ಮಟ್ಟೊಡೆ ಕೆರಳ್ದೆಲವೊ ಮೂಢಾತ್ಮನೀನೆನ್ನ | ಕಹ್ಟಳೆಯನರಿದು ಕೃಷ್ಣನ ದೀಕ್ಷೆಯಂ ಮರೆದು ರಣದುತ್ಸವವನೆ ತೊರೆದು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೨೯: ಸಂಪಾದಿಸಿ
ಸತಿ ಸಂತತಿಗೆ ಬಯಸಿ ದಿನಗಳೆದುದು ಇನ್ನಿಲ್ಲ ಋತುಸಮಯಮೆಂದೆನಗೆ ಪೇಳ್ದೊಡಲ್ಲಿರ್ದೆನೆನೆ | ಕೃತಕಮಿದು ನೂಕೀತನಂ ಕೃಷ್ಣದರ್ಶನದ ಕಾಲಮೊದಗಿರಲಿತ್ತಲು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೩೦: ಸಂಪಾದಿಸಿ
ಆ ಚರರ ನುಡಿಗೇಳ್ದು ಶಂಖಲಿಖೀತರ್ ಬಂದು | ವಾಚಿಸಿಡರೆಲೆ ಹಂಸಕೇತು ನೀನೇನನಾ | ಳೋಚಿಸುವೆ ನಿನ್ನ ತನಯನ ಮೇಳಣಾಶೆಯಿಂ ಭಾಷೆದಪ್ಪಿದೆಯಾದೊಡೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೩೧: ಸಂಪಾದಿಸಿ
ಬಳಿಕರಸನಾ ಸುಮತಿಯಂ ಕರೆದು ಪೇಳ್ದನೀ | ಖಳನಂ ಕಟಾಹ ಪೂರಿತ ತಪ್ತತೈಲದೊಳ್ | ಮುಳುಗಿಸೆನಲವನೊಡೆಯನಾಜ್ಞೆಯಂ ಮೀರದಾತನ ಕೈಗಳಂ ಕಟ್ಟಿಸಿ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೩೨: ಸಂಪಾದಿಸಿ
ತಾತ ನಿನಗಿಂತಾಗಬಹುದೆ ಲೋಕೈಕ ವಿ | ಖ್ಯಾತನಬಿಮಾನಿ ಹರಿಸೇವಕಂ ನುಂದರಂ | ಮಾತಾಪಿತೃಪ್ರಿಯಂ ಕೋವಿದಂ ಕೋಮಲಂ ಸುಖಿ ಸಕಲಸಜ್ಜನಸಖಂ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೩೩: ಸಂಪಾದಿಸಿ
ಅಂಜಬೇಡೆಲೆ ಸುಮತಿ ನೀನೀಗಳಿದಕೆ ಮನ | ಮಂ ಜರಿವಿಡುವನಲ್ಲ ತಾನಿನ್ನೆಗಂ ಧರ್ಮ | ಮಂ ಜಡಿದು ನಡೆದುದಿಲ್ಲಾಹವದೊಳ ಹಿತರೊಳ್ ಪೊಯ್ದಾಡಿ ಮಡಿವೊಡಲಿದು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೩೪: ಸಂಪಾದಿಸಿ
ಭೋ ಯೆಂದುದಖಿಳ ಪರಿವಾರ ಮಡಿಗಡಿಗೆ ಹಾ | ಹಾ ಯೆಂದು ಮರುಗಿದುದು ನೀನಿಂತಳಿವರೆ ತಾ | ತಾ ಯೆಂದು ಪೊರುಳ್ದುದೊಡೆತನಕೆ ಬೇಸತ್ತು ಸತ್ತಾಯೆಂದು ಸೈಗೆಡೆದುದು || |
[ಆವರಣದಲ್ಲಿ ಅರ್ಥ];=
|
ಪದ್ಯ :-:೩೫: ಸಂಪಾದಿಸಿ
ಹಿಂದೆ ಪ್ರಹ್ಲಾದನಂ ಪಾಲಿಸಿದೆ ಗಡ ದ್ರುಪದ | ನಂದನೆಯ ಮಾನಮಂ ಕಾದೆ ಗಡ ಭಕ್ತರ್ಗೆ | ಬಂದೆಡರನಾವಗಂ ಪರಿಹರಿಪೆ ಗಡ ದೇವ ನಿನ್ನಂ ಪೆಸರ್ಗೊಂಡೊಡೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೩೬: ಸಂಪಾದಿಸಿ
ಜಯಜಯ ಜನಾರ್ದನ ಮುಕುಂದ ಮುರಮರ್ದನ ವಿ | ಜಯಮಿತ್ರ ಗೋವಿಂದ ಪಕ್ಷಿವಾಹನ ಕಮಲ | ನಯನ ಪೀತಾಂಭರ ಘನಶ್ಯಾಮ ಹರಿ ಕೃಷ್ಣ ವೈಕುಂಠ ನಾರಾಯಣ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೩೭: ಸಂಪಾದಿಸಿ
ಅರಸ ಕೇಳಾಶ್ಚರ್ಯಮಂ ನೋಡಲೆವೆ ಸೀವೊಲುರಿಗೊಂಡು ಕಡುಗಾಯ್ದು ತಳಪಳದೆ ಕುದಿದುಕ್ಕಿ ಮೊರೆವುರು ಕಟಾಹತೈಲಂ ಮೈಗೆ ಸೊಗೆಯಿಸುವ ಬಾವನ್ನದಣ್ಪಾಗಿರೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೩೮: ಸಂಪಾದಿಸಿ
ಕಂಡು ಬೆರಗಾದುದೆಲ್ಲಾ ಜನಂ ಸ್ತುತಿಸಿದರ್| ಪುಂಡರೀಕಾಕ್ಷನಂ ಬಳಿಕ ಲಿಖಿತಂ ಖಾತಿ | ಗೊಂಡಿವಂ ಬಲ್ಲನಗ್ನಿಸ್ತಂಭಮಂ ನಾರಿಕೇಳಂಗಳಂ ತರಿಸೆನೆ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೩೯: ಸಂಪಾದಿಸಿ
ನಿಶ್ಚಲಹೃದಯನಾಗಿ ವಿಷ್ಣುನಾಮಂಗಳ ಪು | ನಶ್ಚರಣೆಯಂದವಂ ಸುಖದೊಳಿರುತಿರೆ ಕಂಡು | ಪಶ್ಚಾದ್ವಿವೇಕದಿಂದುರೆ ನೊಂದು ಹರಿಕಿಂಕರದ್ರೋಹಮಂ ಮಾಡಿದ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೪೦: ಸಂಪಾದಿಸಿ
ಆ ತಪ್ತತೈಲದ ಕಟಾಹದೆಡೆ ಲಿಖಿತಂಗೆ | ಶೀತಳಸ್ಥಳಮಾದುದಾ ಸುಧನ್ವನ ಸಂಗ | ಮೇತರತಿಶಯಮೊ ಹರಿಭಕ್ತರಂ ಸಾರ್ದಂಗೆ ತಾಪಮಿರ್ದಪುದೆ ಬಳಿಕ || |
[ಆವರಣದಲ್ಲಿ ಅರ್ಥ];=
|
ಪದ್ಯ :-:೪೧: ಸಂಪಾದಿಸಿ
ಪನ್ನೀರಮಿಂದು ದಿವ್ಯಾಂಬರವನುಟ್ಟು ಬಾ | ವನ್ನದಿಗುರಂ ಗೈಯ್ದು ಕಮಲರ್ಗಳಂ ಸೂಡಿ | ಸನ್ನುತ ಸುಯಕ್ಷಕರ್ದಮವನನುಕರಿಸಿ ಕತ್ತುರಿತಿಲಕವಿಟ್ಟು ಪಣೆಗೆ || |
[ಆವರಣದಲ್ಲಿ ಅರ್ಥ];=
|
ಹೋಗಿ ಸಂಪಾದಿಸಿ
ನೋಡಿ ಸಂಪಾದಿಸಿ
ಜೈಮಿನಿ ಭಾರತ-ಸಂಧಿಗಳು:*1 * 2 *3 * 4 * 5 *6 * 7 * 8 *9 * 10 * 11* 12* 13 * 14 * 15 * 16 *17* 18 * 19* 20 * 21 * 22* 23* 24 * 25* 26* 27* 28* 29* 30* 31* 32* 33* 34 |
ಪರಿವಿಡಿ ಸಂಪಾದಿಸಿ
ಕನ್ನಡ ವಿಕಿಸೋರ್ಸ್ ಸಂಪಾದಿಸಿ
ಹಳಗನ್ನಡ ಸಾಹಿತ್ಯ| ಪಂಪಭಾರತ |ಜೈಮಿನಿ ಭಾರತ |ಕುಮಾರವ್ಯಾಸ ಭಾರತ | ನಾಡಗೀತೆಗಳು | ಜನಪದ ಸಾಹಿತ್ಯ | ಚಲನಚಿತ್ರ ಸಾಹಿತ್ಯ | ಚಲನಚಿತ್ರೇತರ ಸಾಹಿತ್ಯ |ಭಾವಗೀತೆಗಳು | ಭಕ್ತಿಗೀತೆಗಳು | ದಾಸ ಸಾಹಿತ್ಯ | ವಚನ ಸಾಹಿತ್ಯ | ತಾತ್ವಿಕ ಸಾಹಿತ್ಯ | ಭಗವದ್ಗೀತೆ |
ಮಂಕುತಿಮ್ಮನ ಕಗ್ಗ | ಶಿಶು ಸಾಹಿತ್ಯ | ಕವನ ಸಂಕಲನಗಳು | ಸಂಪ್ರದಾಯ ಗೀತೆಗಳು |ಮಂಕುತಿಮ್ಮನ ಕಗ್ಗ| |ಸರ್ವಜ್ಞ |
ಜೀವನ ಚರಿತ್ರೆ|ಸ್ತೋತ್ರಗಳು|ಸಂಸ್ಕೃತ ಸಾಹಿತ್ಯ
ಉಲ್ಲೇಖ ಸಂಪಾದಿಸಿ
- ↑ ಉ(.ದಕ್ಷಿಣಾಮೂರ್ತಿ ಶಾಸ್ತ್ರಿ ಮಕ್ಕಳು ಡಿ.ಸುಬ್ಬಾಶಾತ್ರಿಗಳ ಮಕ್ಕಳಾದ ರಂಗಶೇಷಶಾಸ್ತ್ರಿ ; ದಕ್ಷಿಣಾಮೂರ್ತಿ ಶಾಸ್ತ್ರಿ ; ಇವರಿಂದ ರಚಿತವಾದ ನಡುಗನ್ನಡದಲ್ಲಿರುವ ಸುಮಾರು ೧೯೨೦ರಲ್ಲಿ ಅಚ್ಚಾದ ಜೈಮಿನಿಭಾರತ- ಸಟೀಕಾ ಇದರ ಆಧಾರ. -ಕಳಪೆ ಕಾಗದದ ಪುಸ್ತಕ ಜೀರ್ಣವಾಗಿದ್ದು ಮುದ್ರಣ ವಿವರ ಅಸ್ಪಷ್ಟ)
- ↑ ಜೈಮಿನಿ ಭಾರತ -ಟಿ ಕೃಷ್ನಯ್ಯ ಶೆಟ್ಟಿ & ಸಂನ್ಸ ಬಳೆಪೇಟೆ ಬೆಂಗಳೂರು.