Pages   (key to Page Status)   


ತನುವೆಂಬ ಏರಿಗೆ ಮನವೆಂಬ ಕಟ್ಟೆಯ ಮಾಡಿ
ಬಲಿದು ಷಡ್ವಿಧಭಕ್ತಿಯೆಂಬ ಸೋಪಾನದಿಂದ ಪರಮಾನಂದವೆಂಬ ಜಲವ ತುಂಬಿ ಕೆರೆಯ ಕಟ್ಟಬಲ್ಲವರನಾರನೂ ಕಾಣೆ ! ನಾನು ಕಟ್ಟಿದ ಕೆರೆ ಸ್ಥಿರವಾಯಿತ್ತು ಗುಹೇಶ್ವರಾ ನಿಮ್ಮಾಣೆ.