Pages   (key to Page Status)   


ತನು ಮನ ಬಳಲದೆ ಉದ್ದಂಡವೃತ್ತಿಯಲ್ಲಿ ಧನವ ಗಳಿಸಿ ತಂದು ಗುರುಲಿಂಗಜಂಗಮಕ್ಕೆ ವೆಚ್ಚಿಸಿ
ದಾಸೋಹವ ಮಾಡಿ
ಭಕ್ತರಾದೆವೆಂಬವರನೆನಗೆ ತೋರದಿರಯ್ಯಾ. ಅದೇಕೆಂದರೆ:ಅವ ಪರಧನ ಚೋರಕ; ಅವ ಪಾಪಿ
ಅವಗೆ ವಿಚಾರಿಸದೆ ಉಪದೇಶವ ಕೊಟ್ಟ ಗುರುವಿಂಗೆ gõ್ಞರವ ನರಕ. ಅವನ ಕಾಯಕವ ವಿಚಾರಿಸದೆ ಅವರ ಮನೆಯಲ್ಲಿ ಹೊಕ್ಕು ಲಿಂಗಾರ್ಚನೆಯ ಮಾಡುವ ಜಂಗಮಕ್ಕೆ ಏಳನೆಯ ಪಾತಕ. ಇಂತಹರ ಬದುಕು
ಹುಲಿ ಕಪಿಲೆಯ ತಿಂದು ಮಿಕ್ಕುದ ನರ ಬಂದು ತಿಂಬಂತೆ ಕಾಣಾ. ಕೂಡಲಚೆನ್ನಸಂಗಮದೇವಾ