Pages   (key to Page Status)   


ದೇವರು ಬಿದ್ದರು ದೇವರು ಬಿದ್ದರು ಎಂದು ಸಾಹಿತ್ಯದ ಕೂಡ ಸಾಯಬೇಕೆಂಬಿರಿ. ಆವಾಗ ಬಿದ್ದಿತ್ತೆಂದರಿಯಿರಿ ಆವಾಗ ಇದ್ದಿತ್ತೆಂದರಿಯಿರಿ
ಆವಾಗ ಇದ್ದಿತ್ತು ಆವಾಗ ಬಿದ್ದಿತ್ತು ಎಂದು ಬಲ್ಲರೆ ನೀವು ಹೇಳಿರೆ ? ``ಅದೃಶ್ಯಭಾವನೋ ನಾಸ್ತಿ ದೃಶ್ಯಮೇವ ವಿನಶ್ಯತಿ ಅವರ್ಣಮಕ್ಷರಂ ಬ್ರಹ್ಮ ಕಥಂ ಧ್ಯಾಯಂತಿ ಯೋಗಿನಃ ಎಂದುದಾಗಿ
ಇದು ಕಾರಣ ಕೂಡಲಚೆನ್ನಸಂಗಯ್ಯನ ಅರಿದಾಗಲಿದ್ದಿತ್ತು ಮರೆದಾಗ ಬಿದ್ದಿತ್ತು.