Pages   (key to Page Status)   

ದೇವ
ದೇವಾ ಬಿನ್ನಹ ಅವಧಾರು; ವಿಪ್ರ ಮೊದಲು
ಅಂತ್ಯಜ ಕಡೆಯಾಗಿ ಶಿವಭಕ್ತರಾದವರನೆಲ್ಲನೊಂದೆ ಎಂಬೆ. ಹಾರುವ ಮೊದಲು
ಶ್ವಪಚ ಕಡೆಯಾಗಿ ಭವಿಯಾದವರನೆಲ್ಲರನೊಂಬೆ ಎಂಬೆ. ಹೀಂಗೆಂದು ನಂಬೂದೆನ್ನ ಮನ. ಈ ನುಡಿದ ನುಡಿಯೊಳಗೆ ಎಳ್ಳ ಮೊನೆಯಷ್ಟು ಸಂದೇಹವುಳ್ಳಡೆ ಹಲುದೋರೆ ಮೂಗ ಕೊಯಿ
ಕೂಡಲಸಂಗಮದೇವಾ.