ನಾನೊಂದು ಕಾರಣ ಮತ್ರ್ಯಕ್ಕೆ


Pages   (key to Page Status)   

ನಾನೊಂದು ಕಾರಣ ಮತ್ರ್ಯಕ್ಕೆ ಬಂದೆನು
ಬಂದ ಬಳಲಿಕೆಯ ಪರಿಹರಿಸಲಿಕ್ಕೆ ಚೆನ್ನಬಸವಣ್ಣ ಬಂದನು
ಇನ್ನು ಬಾರದಂತೆ ಪ್ರಭುದೇವರು ಬಂದರು
ಇದಕ್ಕೆ ಆಜ್ಞಾಕರ್ತೃ ಮಡಿವಾಳ ಮಾಚಿತಂದೆ ಬಂದನು. ನಾನಿನ್ನಾರಿಗಂಜೆನು
ಬದುಕಿದೆನು ಕಾಣಾ ಕೂಡಲಸಂಗಮದೇವಾ.