ನಿತ್ಯ ತೃಪ್ತನಿಗೆ ಹಸಿವಿನ



Pages   (key to Page Status)   


ನಿತ್ಯ ತೃಪ್ತನಿಗೆ ಹಸಿವಿನ ಭಯವುಂಟೇ?. ಸತ್ಯ ಜ್ಞಾನಿಗೆ ಅಜ್ಞಾನದ ಭಯವುಂಟೇ?. ವಾತ ಪಿತ್ತ ಶ್ಲೇಷ್ಮ ನಷ್ಟವಾದವಂಗೆ ತಾಪತ್ರಯಾದಿಗಳ ಭಯವುಂಟೇ?. ಸ್ವಯಂಜ್ಯೋತಿಯ ಬೆಳಗನುಳ್ಳಾತನು ಚಂದ್ರಸೂರ್ಯಾದಿಗಳ ಬೆಳಗನಾಶ್ರಯಿಸುವನೆ?. ನಿಜದಿಂದ ತನ್ನ ತಾನರಿದು
ತಾನು ತಾನಾದತನು
ಮಾಯಾದ ಗಜಬಜೆಯ ಹುಸಿಗೆ ಬೆದರುವನೆ ಮಹಾಶರಣನು?
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.