Pages   (key to Page Status)   


ಪರುಷ ಸೋಂಕಲು ಅವಲೋಕದ ಗುಣ ಕೆಟ್ಟು ಚಿನ್ನವಾಗದಿಹುದೆ? ಹಲವು ತೃಣಂಗಳೆಲ್ಲವು ಅಗ್ನಿಯ ಮುಟ್ಟಲು ಭಸ್ಮವಾಗದಿಹವೆ? ಹಳ್ಳಕೊಳ್ಳದ ನೀರೆಲ್ಲಾ ಬಂದು ಅಂಬುಧಿಯನೆಯ್ದಿ ಅಂಬುಧಿಯಪ್ಪುದು ತಪ್ಪದು ನೋಡಾ. ಹಲವು ವರ್ಣದ ಪದಾರ್ಥವನೆಲ್ಲವ ತಂದು ಶಿವಲಿಂಗಾರ್ಪಣವ ಮಾಡಲು ಆ ಪದಾರ್ಥದ ಪೂರ್ವಾಶ್ರಯವಳಿದು ಪ್ರಸಾದವಪ್ಪುದು ತಪ್ಪದು ನೋಡಾ. ಆ ಪ್ರಸಾದವ ಕೊಂಬ ಪ್ರಸಾದಿ ಪವಿತ್ರಕಾಯನು ನೋಡಾ. ಆತನು ಶುದ್ಧ ನಿರ್ಮಲನು ನೋಡಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.