ಈ ಪುಟವನ್ನು ಪ್ರಕಟಿಸಲಾಗಿದೆ

ನೀರಲಗಿಡ

ಒಬ್ಬ ಹೆಣ್ಣು ಮಗಳು ನೀರು ಹಾಕಿಕೊಂಡಳು. ಆಕೆಗೆ ಬಯಕೆ ಕಾಡಹತ್ತಿದವು. ಆಕೆಯ ಜೀವ ನೀರಲ ಹಣ್ಣು ಬಯಸಿತು. ಗಂಡನು ನೀರಲ ಹಣ್ಣು ತರಲಿಕ್ಕೆ ಹೋದನು.

ನೀರಲಗಿಡವನ್ನೇರಿ ಆತನ ಗಿಡ ಕಡಿಯ ತೊಡಗಿದನು. ಎರಡು ಹಣ್ಣು ಕಡಿದನು. ಗಿಡದಲ್ಲಿ ನಾಗೇಂದ್ರನು ಕಾಣಿಸಿಕೊಂಡು ಈ ಗಿಡ ಕಡಿಯಬೇಡವೆಂದು ಹೇಳಿದನು.

"ನನ್ನ ಹೆಂಡತಿ ಬಯಸಿದ್ದಾಳೆ. ನಾನು ಒಯ್ಯುತ್ತೇನೆ."

"ಒಂದು ಕರಾರಿನ ಮೇಲೆ ನೀರಲ ಹಣ್ಣು ಒಯ್ಯಬಹುದು ನೀನು" ಎಂದನು ನಾಗೇಂದ್ರ. ಆ ಕರಾರಿನಂತೆ ಹೆಣ್ಣು ಹುಟ್ಟಿದರೆ ನಾಗೇಂದ್ರನಿಗೆ ಕೊಡಬೇಕು. ಗಂಡು ಹುಟ್ಟಿದರೆ ಅವನ ಮಗಳನ್ನು ತೆಗೆದುಕೊಳ್ಳಬೇಕು. ಕರಾರಿಗೆ ಸಮ್ಮತಿಸಿ ಗಂಡನು ನೀರಲಹಣ್ಣು ತೆಗೆದುಕೊಂಡು ಒಯ್ದು ಹೆಂಡತಿಗೆ ತಿನ್ನಲು ಕೊಡುತ್ತಾನೆ. ಆಕೆ ನೀರಲಹಣ್ಣು ತಿನ್ನುತ್ತಾಳೆ.

ಒಂಬತ್ತು ತಿಂಗಳು ಒಂಬತ್ತು ದಿನಕ್ಕೆ ಹೆಣ್ಣು ಕೂಸನ್ನು ಹಡೆದಳು. ಈ ಮಗಳನ್ನು ನಾಗೇಂದ್ರನಿಗೆ ಕೊಡಬೇಕಲ್ಲ—ಎಂದು ಗಂಡನಿಗೆ ಮಹಾ ಚಿಂತೆಯಾಯಿತು. ಚಿಂತೆಯಲ್ಲಿ ತಾನೇ ಸಣ್ಣಗಾದನೇ ಹೊರತು ಹೆಂಡತಿಗೆ ಹೇಳಲೇ ಇಲ್ಲ.

ಅವೆಷ್ಟೋ ವರುಷಗಳು ಗತಿಸಿದವು. ಹೆಣ್ಣುಮಗಳು ಬೆಳೆದು ದೊಡ್ಡವಳಾದಳು. ನೆಂಟಸ್ತನದ ಮಾತುಕತೆಗಳು ನಡೆಯತೊಡಗಿದವು. ಕೊಡುವ ಹೆಣ್ಣುಮಗಳಿದ್ದಾಳೆ. ಕೊಡಲಿಕ್ಕೇಬೇಕು—ಎಂದು ಅಪ್ಪನು ಮನಸ್ಸನ್ನು ಕಲ್ಲು ಮಾಡಿಕೊಳ್ಳುತ್ತಾನೆ. ಅದರಂತೆ ಮಗಳನ್ನು ಬೇರೊಂದೂರಿಗೆ ಕೊಟ್ಟು ಲಗ್ನ ಮಾಡುತ್ತಾನೆ. ಲಗ್ನದ ನಿಬ್ಬಣ ಹೊರಡುತ್ತದೆ. ನಾಲ್ಕು ಅಗಸೆಯಿಂದ ನಿಬ್ಬಣ ಹೊರಬೀಳಬೇಕೆಂದರೂ ನಾಗೇಂದ್ರನು ಹೆಡೆತೆಗೆದು ನಿಂತಿರುವನು.

ಇದರಲ್ಲೇನೋ ದೋಷವಿದೆಯೆಂದು ಬೀಗರು ಮಾತಾಡಿಕೊಂಡರು. ದೇವ ದೇವಸ್ಥರಿಗೆ ಸುಳ್ಳು ಹೇಳುವುದು ಬೇಡ ಎಂದು ನೆರೆದ ಜನ ಬುದ್ಧಿ