ಈ ಪುಟವನ್ನು ಪ್ರಕಟಿಸಲಾಗಿದೆ

೧೮

ಅವಳು ತನನಗೆ ಬರದಿರವದು ಒಳ್ಳೆಯದಾಯಿತು ಎಂದು ತೋರಿದರೂ ಚಪಲಮನಸ್ಸು ಮಾತ್ರ ಅವನ ದರ್ಶನಕ್ಕೆ ತವಕಿಸುತ್ತಿತ್ತು.

ವಾಣಿ ಹೊರಟುಹೋದ ಮೇಲವನಿಗೆ ಹೋಟೆಲಿನಲ್ಲಿ ಊಟ; ಕ್ಲಬ್ಬಿನಲ್ಲಿ ವಾಸ. ಮನೆಗೆ ಬರಬೇಕಾದರೆ ಬಟ್ಟೆ ಬದಲಾಯಿಸುವುದಕ್ಕೆ, ಮತ್ತೆ ರಾತ್ರಿ ನಿದ್ರೆ ಮಾಡುವುದಕ್ಕೆ ಅಷ್ಟೆ. ಕ್ಲಬ್ಬಿನಿಂದ ಕೊನೆಯ ವ್ಯಕ್ತಿ ಹೋಗುವ ತನಕವೂ ಅವನಲ್ಲೇ ಇರುತ್ತಿದ್ದ. ಮತ್ತೆ ಹೋಟೆಲಿಗೆ ಹೋಗಿ ಊಟ ಮಾಡಿ ಮನೆ ತಲಪಬೇಕಾದರೆ ಹನ್ನೊಂದು ಗಂಟೆ ಹೊಡೆದುಹೋಗುತ್ತಿತ್ತು. ಆದರೂ ಹಗಲೆಲ್ಲಾದರೂ ಮನೆಗೆ ಬಂದರೆ ಹಿತ್ತಲ ಕಡೆ ಹೋಗಿ ಇಂದು ಎಲ್ಲಾದರೂ ಇರುವಳೋ ಎಂದು ನೋಡದಿರುತ್ತಿರಲಿಲ್ಲ.

ವಾಣಿ ಹೊಗಿ ಎರಡು ತಿಂಗಳುಗಳಾಗಿದ್ದರೂ ಸದ್ಯದಲ್ಲೇ ಬರುವ ಸೂಚನೆ ಏನೂ ಇರಲಿಲ್ಲ. ಒಂದು ದಿನ ಬೆಳಗ್ಗೆ ಇಂದು ನೀರು ಸೇದುತ್ತಿರುವಾಗ ರತ್ನ ಹಿಂಬೇಲಿಯ ಹತ್ತಿರ ಬಂದ. ವಾಣಿ ಹೊರಟು ಹೋದ ಮೇಲೆ ಅದೇ ಅವರ ಮೊದಲ ಸಾರಿ ಒಬ್ಬರನ್ನೊಬ್ಬರು ನೋಡಿದ್ದು. ಅವಳಿರುವಾಗ ನಿಸ್ಸಂಕೋಚವಾಗಿ ಮಾತಾಡಿಕೊಂಡಿದ್ದ ಅವರಿಗೆ ಆಗ ಮಾತಾಡಲು ಏನೂ ತೋರಲಿಲ್ಲ. ಆದರೂ ಒಂದು ತಾನು ಸುಮ್ಮನಿದ್ದರೆ ಮನದ ಭಾವನೆಗಳಲ್ಲಿ ಬದಲಾಗುವುದೋ ಎಂಬ ಭಯದಿಂದ-' ವಾಣಿ ಯಾವತ್ತು ಬಾರ್ತಾಳೆ ?' ಎಂದು ಕೇಳಿದಳು. ಅವಳ ಆ ಪ್ರಶ್ನೆಗೆ ಪ್ರತ್ಯುತ್ತರ ಕೊಡುವ ಬದಲು ರತ್ನ 'ಆರೋಗ್ಯವಾಗಿರುವೆಯಾ ಇಂದಿರಾ? ಇದೇನು ಇತ್ತೀಚೆಗೆ ನಿನ್ನನ್ನು ಕಾಣುವುದಿಲ್ಲ ?' ಎಂದು ಕೆಳಿದ.

ಅದೇ ಮೊದಲವಳು ಅವನ ಬಾಯಿಂದ ತನ್ನ ಹೆಸರನ್ನು ಕೇಳಿದ್ದು. ಅಂದಿನವರೆಗೂ ಅವಳಿಗೆ ತನ್ನ ಹೆಸರು ಅಷ್ಟೊಂದು ಸುಂದರವೆಂದು ತಿಳಿದಿರಲಿಲ್ಲ.