ಈ ಪುಟವನ್ನು ಪ್ರಕಟಿಸಲಾಗಿದೆ
ಕವಿಯ ಸೋಲು
"ಕೊಳ್ಳೈದೇವರೆ, ಎನ್ನೀ ಪ್ರಾಣವ
ಉಳುಹಿಸಿಕೊಡು ಪತಿದೇವನನು |
ಒಳ್ಳಿತ ಮಾಡೈ, ಕರುಣವ ತೋರೈ
ಕಳೆಯದೆ ಮಂಗಳಸೂತ್ರವನು.
ತಳ್ಳದಿರೆನ್ನನು ದುಸ್ಸಹ ನರಕಕೆ
ದಳ್ಳುರಿ ವೈಧವ್ಯಕೆಯನ್ನು |
ಕೊಳ್ಳೈ ದೇವರೆ ಸಾಧ್ವಿಯ ಜೀವನ
ಕೊಳ್ಳದೆ ಜೀವದ ಪತಿಯನ್ನು.
ಬಾರೈ ದೇವರೆ, ಎನ್ನ ಯ ಬಾಳಿಗೆ
ನಂಬಿಕೆಯೀಗಲೆ ನುಡಿಯುವುದು |
ಆರುವ ದೀಪಕೆ ಆಯುವ ತೈಲವ
ತುಂಬಿಸಿ ಬೆಳಗಿಸಿ ಕರುಣಿವುದು.
ಸತಿಯಳ ಜೀವವು ಕವಡೆಯು ಬಾಳದು
ಉಳಿದರು ಹೋದರು ಜಗವಳದು |
ಪತಿಯೆಂಬುವ ಸೌಭಾಗ್ಯದ ಸೂರ್ಯನು
ಮುಳುಗಲು ಕಲೆ ಮುಸುಕುವುದು.
ಮರಳೆನು ಮನೆಕಡೆ ಎದೆ ನಡುಗುವುದು
ಮುತ್ತೈದೆಯ ಸಾವಿಚ್ಛಿಪೆನು |
ತೊರೆದಿಹೆ ಭಯವನು ಸಾವಳಿಗೇಕೆ?
ಇತ್ತೀ ಕೊಳದಲೆ ಬೀಳುವೆನು."
೫೬