ಈ ಪುಟವನ್ನು ಪ್ರಕಟಿಸಲಾಗಿದೆ

4 ೯೪ / ಜಾಗರ
ಮಾತಾಡುತ್ತಿರುವವನು ಯಾರು, ಯಾರಲ್ಲಿ, ಅವರಿಬ್ಬರ ಸಂಬಂಧ, ವಿಭಿನ್ನತೆಗಳೇನು ಒಬ್ಬನಿಗೆ ಇನ್ನೊಬ್ಬರ ಕುರಿತು ಎಂತಹ ಭಾವ ಇದೆ, ಪಾತ್ರದ ಎತ್ತರ ಎಂತಹದ್ದು, ಯಾಕಾಗಿ ಮಾತಾಡುತ್ತಿರುವುದು, ಸ್ಥಾಯಿ ಮತ್ತು ಸಂಚಾರಿ ಭಾವಗಳು ಯಾವುವು ಎಂಬುವುಗಳನ್ನು ಏಕಕಾಲದಲ್ಲಿ ಗ್ರಹಿಸಿ ಮಾತಾಡುವುದು, ಕೇವಲ ಪಾಂಡಿತ್ಯದಿಂದ ಸಿದ್ಧಿಸುವುದಲ್ಲ. ಸಶಕ್ತ ಪ್ರತಿಭೆಗೆ ಮಾತ್ರ ಸಾಧ್ಯವಾಗುವಂತಹದು. ರಾಮನ ಸಿಟ್ಟು ಬೇರೆ, ರಾವಣನ ಸಿಟ್ಟು ಬೇರೆ, ಸತ್ಯಭಾಮೆಯ ಸಿಟ್ಟು ಬೇರೆ. ರಾಮನ ಮಾತಿನ ಲಯ ಕೃಷ್ಣನಿಗೆ ಭೀಮನಿಗೆ ಸಲ್ಲ. ತಂದೆಯ ಮುಂದೆ ತೋಡಿಕೊಳ್ಳುವ ವೀರಭಾವ ಬೇರೆ, ಶತ್ರುಗಳ ಮುಂದೆ ಬೇರೆ ತರ. ಕಿರಾತ, ಚಾರಕ ಪಾತ್ರಗಳು ಶ್ಲೋಕ ಹೇಳದಿದ್ದರೆ ಒಳ್ಳೆಯದು. ಋಷಿಯ ಪಾತ್ರ ಕೊಡುವ ಉಪಮಾನ ರಾಕ್ಷಸ ಪಾತ್ರಕ್ಕೆ ಒಗ್ಗದು. ಉದಾಹರಣೆಗಳು ಪಾತ್ರದ ಮಟ್ಟಕ್ಕೆ ಸರಿಯಾಗಿರಬೇಕು.
ಹೆಗ್ಗಳಿಕೆ, ವರ್ಣನೆ, ವೀರ, ಇದ್ದಾಗ ವೇಗದ ಲಯ, ಆಡಂಬರದ ಭಾಷೆ ಅನುಕೂಲ, ಉಪದೇಶ, ಶಾಂತ ಭಾವ, ದುಃಖ ಬರಿಸುವ ಯತ್ನ ಅನುನಯ - ಇರುವಲ್ಲಿ ಭಾಷೆ ಕೊಮಲವೂ, ಪ್ರಾಸಾದಿಕವೂ ಇರಬೇಕು. ಅರ್ಥಗಾರಿಕೆಯಲ್ಲಿ ರಂಜನೆ, ಸ್ವಚ್ಛವಾದ ಹಾಸ್ಯ, ನವಿರೇಳಿಸುವ ಮಾತು. ಕಚಗುಳಿ ಇಡುವ, ಶಾಕ್ ಕೊಡುವ ಮಾತು, ಇವೆಲ್ಲ ಸಪ್ರಮಾಣವಾಗಿ ಇರಲೇಬೇಕು. ಅರ್ಥಗಾರಿಕೆಯು ವ್ಯಾಖ್ಯಾನವಲ್ಲ, ಕಲಾಭಿವ್ಯಕ್ತಿ.
ತಾಳಮದ್ದಳೆ ಮತ್ತು ಬಯಲಾಟಗಳೆರಡರಲ್ಲೂ ಅರ್ಥಗಾರಿಕೆ ಇದೆ. ಆದರೆ ಎರಡರಲ್ಲಿ ಇದರ ಪ್ರಯೋಗ ತಂತ್ರದಲ್ಲಿ ವ್ಯತ್ಯಾಸವಿದೆ. ತಾಳಮದ್ದಳೆಯಲ್ಲಿ ಗೀತ ದೊಂದಿಗೆ ಮಾತು ಮಾತ್ರ ಮಾಧ್ಯಮ, ಸನ್ನಿವೇಶ ನಿರ್ಮಾಣ, ಚಿತ್ರ ನಿರ್ಮಿತಿ, ತನ್ನ ಮತ್ತು ಇತರ ಪಾತ್ರಗಳ ಬರುವಿಕೆ, ಭಂಗಿ, ಭಾವ ಚಲನಗಳು, ಯುದ್ಧ ಕೊಡುವುದು, ತೆಗೆದುಕೊಳ್ಳುವುದು, ವಿವಿಧ ವಸ್ತು, ಆಯುಧ ಇವೆಲ್ಲ ಮಾತಿನಲ್ಲಿ ಮೂಡಿ ನಿಲ್ಲಬೇಕು. ಉದಾ : ಇದೆ ಕೈಯಲ್ಲಿ ಪಿಡಿದ ಹೊನ್ನ ಹರಿವಾಣದ ರಣ ವೀಳ್ಯ ಇದು ತಾಳಮದ್ದಳೆಗಾದರೆ, ಇದೊ ರಣ ವೀಳ್ಯಾ” ಎಂಬುದು ಆಟದಲ್ಲಿ ಸಾಕು. ಇದೊ ಕಾಲಿಗೆರಗುತ್ತೇನೆ” “ಬಾ ನಿನ್ನನ್ನಪ್ಪಿಕೊಂಡು ಆನಂದಿಸುತ್ತೇನೆ, “ಇದೇನು ಅತ್ತಿತ್ತ ತಿರುಗಾಡುತಿರುವೆ” “ಇದೊ ಎತ್ತಿದ ಬಿಲ್ಲು” ಒರೆಯಿಂದ ಸೆಳೆದ ಖಡ್ಗ” “ಇದೇನು ಗಲ್ಲಕ್ಕೆ ಕೈಕೊಟ್ಟು ಕುಳಿತೆ?” ಮುಂತಾದ ವಾಕ್ಯಗಳು ಚಿತ್ರ ನಿರ್ಮಾಣಕ್ಕೆ ಅವಶ್ಯ.
ತಾಳಮದ್ದಳೆಯ ಭಾಷೆ, ಮತ್ತು ಶೈಲಿಯ ಪ್ರಶ್ನೆಯೂ ಜಟಿಲವಾದುದು. ಇಲ್ಲಿನ ಭಾಷೆ ಗ್ರಾಂಥಿಕ ಸ್ವರೂಪದಲ್ಲಿದ್ದು, ಸಮಕಾಲೀನ ಸಾಹಿತ್ಯದ ದೃಷ್ಟಿಯಿಂದ ತುಸು 'ಹಳೆ' ಭಾಷೆ ಆಗಿರುತ್ತದೆ. ಇದು 'ಅವಾಸ್ತವ' ರ೦ಗಭೂಮಿ, ಪೌರಾಣಿಕಲೋಕ, ಹಾಗಾಗಿ 'ಕೃತಕ'ವೆನಿಸುವ ಸಂವಾದ ಭಾಷೆ 'ರಮ್ಯಾದ್ಭುತ' ಪೌರಾಣಿಕಲೋಕ, ಹಾಗಾಗಿ 'ಕೃತಕ'ವೆನಿಸುವ ಸಂವಾದ ಭಾಷೆ