ಈ ಪುಟವನ್ನು ಪ್ರಕಟಿಸಲಾಗಿದೆ

೯೮ | ಜಾಗರ
ಗಳು ಮೇಲೈಸಿದ ಈ ಕಲಾವಿದರು ಕಾಣಿಸಿಕೊಂಡು ಇವುಗಳನ್ನು ಅರ್ಥಕ್ಕೆ ಅಳ ವಡಿಸಿ ಯಶಸ್ಸು ಗಳಿಸಿದರು.
ಈ ಹಂತದಲ್ಲಿ ಒಣ ಚರ್ಚೆ, ಭೀಕರ ವಾದ, ರಸಭಂಗ, ತಾಳಮದ್ದಳೆಗಳು ಅರ್ಧಕ್ಕೆ ನಿಲ್ಲುವುದು, “ನಾನು ಇವರೊಂದಿಗೆ ಅರ್ಥ ಹೇಳಲಾರೆ” ಎನ್ನುತ್ತ ಕೆಲ ವರು ಎದ್ದು ಹೋಗುವುದು - ಇವೆಲ್ಲ ಕೆಲಮಟ್ಟಿಗೆ ಉಳಿದಿದ್ದವು. ಹಿಂದಿನ ದೋಷಗಳು ಪೂರ್ತಿ ಮರೆಯಾಗಿಲ್ಲ. ಚರ್ಚೆ ತಕರಾರುಗಳು ಅರ್ಥಗಾರಿಕೆಯ ಅನಿವಾರ್ಯ ಅಂಶಗಳಾದವು. ಇದು ಒಂದು ಬಗೆಯ ಅತಿಗೆ ದಾರಿ ಮಾಡಿತು. ಪಕ್ಷ ಪಂಗಡಗಳು ಏರ್ಪಟ್ಟವು. ಒಬ್ಬಬ್ಬರು ಅರ್ಥಧಾರಿಗಳು, dominate ಮಾಡ ತೊಡಗಿದರು. ಪೈಪೋಟಿ ಬಲವಾಯಿತು. “ನಿನ್ನ ಯಾರು ಬಲ?” ಎಂಬುದು ಪ್ರೇಕ್ಷಕರ ರುಚಿ ಕಟ್ಟಾದ ಚಾಪಲ್ಯವಾಯಿತು.

ಇಲ್ಲೆ ಇನ್ನೊಂದು ಬದಲಾವಣೆ ಆರಂಭವಾಯಿತು.ಹಿಂದಿನ ದೋಷಗಳು ಗಳು ಇಲ್ಲೂ ಸ್ವಲ್ಪ ಉಳಿದರೂ ಸುಧಾರಣೆ ಪುನಃ ಬಂತು. ಮಾತಿನ ಮೊನಚು ವ್ಯಂಗ್ಯ, ಧ್ವನಿಶಕ್ತಿ ಹೆಚ್ಚಿದವು. ಉದ್ದುದ್ದ ಮಾತಿನ ಜತೆ, ತುಂಡು ಸಂವಾದ, ಹೊಸ ಮುಖದ ವಾದಗಳೂ ರೂಢಿಗೊಂಡವು. ಪಾತ್ರಗಳಿಗೆ ವೈಚಾರಿಕ ಔನ್ನತ್ಯ, ಪಾಂಡಿತ್ಯ ತುಂಬುವ ಯತ್ನಗಳಾದುವು. ಪ್ರಸ೦ಗಗಳನ್ನು ಆಯ್ದು, ಕತ್ತರಿಸಿ (Edit ಮಾಡಿ) ಬೆಳೆಸಲಾಯಿತು. ಬರ ಬರುತ್ತ ಇದೇ 'ಅತಿ' ಯಾಯಿತು. ತಾಳ ಮದ್ದಳೆಯ ನಾಟಕೀಯತೆ ಮಾಯವಾಗಿ ಅದೊಂದು ಚರ್ಚಾಕೂಟ ವಾಯಿತು. ಹಿಮ್ಮೇಳಕ್ಕೆ ಕೆಲಸ ಕಡಿಮೆಯಾಗಿ, ಒಂದೊಂದು ಪದ್ಯಕ್ಕೆ ತಾಸುಗಟ್ಟಲೆ ಮಾತಾ ಡುವ ಕ್ರಮ ಬೆಳೆಯಿತು. ಒಂದು ರಾತ್ರಿಗೆ ನಲುವತ್ತು, ಐವತ್ತು ಪದ್ಯಗಳಷ್ಟೆ ಕತೆ ಸಾಗತೊಡಗಿತು. ತೊಡಕಿನ ಪ್ರಸಂಗ ಬೆಳಗಿನ ತನಕ ಮುಗಿಯದ ಆಭಾಸ ವಾಯಿತು. (ಇದು ಈಗಲೂ ಇದೆ.) ಬೆಳಗಿನ ಜಾವ ಇರಿಸಿದ ಕಥಾಭಾಗಕ್ಕೆ, ಅದರ ಪಾತ್ರಧಾರಿಗೆ ಅನ್ಯಾಯವಾಗುವುದು ಮಾಮೂಲಾಯಿತು. ಪ್ರಜ್ಞೆಯ ಅಭಾವ, ಮಾತಿನ ಚಟ, ತಾವು ಮಾಡಿದ್ದೇ ಸರಿ ಎಂಬ ಧೋರಣೆ ಇದಕ್ಕೆ ಕಾರಣ. ಹರಿದಾಸರುಗಳ ರಂಗಪ್ರವೇಶ ಇದಕ್ಕೊಂದು ಮುಖ್ಯ ಕಾರಣ. (ಅವರಿಂದ ಪ್ರಯೋಜನವೂ ಆಗಿದೆ ಎಂಬುದನ್ನು ನಾನು ಮರೆತಿಲ್ಲ)

ಜತೆಗೇ ವರ್ತಮಾನ ಪತ್ರಿಕೆಯ ಶಬ್ದಾವಳಿ, ರಾಜಕೀಯ, ಸಾಮಾಜಿಕ ಸಂಗತಿಗಳು, ಪಾತ್ರಧಾರಿಗಳ ವೈಯಕ್ತಿಕ ವಿಚಾರಗಳನ್ನೆಲ್ಲ 'ಶ್ಲೇಷೆ'ಯಿಂದ ತಂದು ಜನರನ್ನು ನಗಿಸುವ ದುಶ್ಚಟ ಬಂತು. ಜನರಂಜನೆಯ ಹೆಸರಲ್ಲಿ ರಸಭಂಗ, ಪುರಾಣದ ವಾತಾವರಣ ಕೆಡಿಸುವ ಚಾಳಿ-ಎಷ್ಟು ಬಲವಾದುವು ಅಂದರೆ, ಜನ ಅದಕ್ಕಾಗಿ ಸೇರಿ ಹಪಹಪಿಸಿದರು. ಇದನ್ನೇ ಮೆಚ್ಚಿ ಹೋ ಹೋ ಅನ್ನುವವರು