ಈ ಪುಟವನ್ನು ಪ್ರಕಟಿಸಲಾಗಿದೆ
ತಾಳಮದ್ದಳೆ / ೯೯

ತು೦ಬ ಇದ್ದಾರೆ. ಪ್ರೇಕ್ಷಕರ ಪ್ರತಿಭಟನೆ ಬಾರದೆ ಇದು ನಿಲ್ಲುವ ಲಕ್ಷಣ ಕಾಣಿಸು ತ್ತಿಲ್ಲ.
ಇದೀಗ, ತಾಳಮದ್ದಳೆ ಪುನಃ ಮಗ್ಗುಲು ಮಗುಚಿದೆ. ಇಂದಿನ ತರುಣ ಅರ್ಥಧಾರಿಗಳು ತಾಳಮದ್ದಳೆ ಕುರಿತು ತಳೆದಿರುವ ಧೋರಣೆಯ ಫಲವಿದು. ಹಿ೦ದಿನ ದೋಷಗಳ ನಿವಾರಣೆ ಆಗಿದೆ, ಆಗುತ್ತಿದೆ. ಹಿಂದಿನ ಸಿದ್ದಿ ಸಾಧನೆಗಳ ಉತ್ತಮ ಅಂಶಗಳನ್ನು ಹೀರಿ ಜತೆಗೆ ಅವಶ್ಯ ಸುಧಾರಣೆ ಮಾಡಿ ಇಂದಿನ ಅರ್ಥಧಾರಿ ಗಳು ಒಳ್ಳೆಯ ಕೆಲಸ ಮಾಡಿದ್ದಾರೆ. ಚುಟುಕಾದ, ಚುರುಕಾದ ಅರ್ಥಗಾರಿಕೆ, ರಸ ದೃಷ್ಟಿ, ಸ್ವಾರಸ್ಯಕರ ಸಂವಾದಗಳು, ಹಿತವಾದ ವೈಚಾರಿಕ ದೃಷ್ಟಿ, ತಕ್ಕಷ್ಟು ಹಾಸ್ಯ, ರಂಜನೆ, ಪ್ರಸಂಗಕ್ಕೆ ನಿಷ್ಠೆ, ಹಿಮ್ಮೇಳಕ್ಕೆ ಸೂಕ್ತ ಮಹತ್ವ ಇವು ಈ ಹಂತದಲ್ಲಿರುವ ವೈಶಿಷ್ಟ್ಯಗಳು, ಅರ್ಥಧಾರಿಗಳೊಳಗೆ ಸಾಮರಸ್ಯ ಇದ್ದು ಗುಂಪುಗಾರಿಕೆ ಇಲ್ಲದ ಕೂಟ ಮನೋವೃತ್ತಿ (Team spirit)ಯ ಒಟ್ಟಂದ (Team work) ಈಗ ಹಿಂದೆಂದೂ ಇಲ್ಲದಷ್ಟು ಇದೆ. ಅರ್ಥಧಾರಿಗಳೊಳಗೆ ಪೂರ್ವ ಸಮಾಲೋಚನೆ, ವಿಚಾರ ವಿನಿಮಯ ಇವೆ. ಇದು 'ಪರೀಕ್ಷೆ' ಅಥವಾ ಜಿದ್ದಾಜಿದ್ದಿಯ ಕ್ಷೇತ್ರವಲ್ಲ, 'ಪ್ರದರ್ಶನ' ನಾಟಕೀಯ ರಸಾವಿಷ್ಕಾರದ ಕ್ಷೇತ್ರವೆಂಬ ಭಾವನೆಲೆಯಾಗಿದೆ. ತಾಳ ಮದ್ದಳೆ ಪರಿಪಕ್ವತೆಯತ್ತ ಸಾಗುತ್ತಿದೆ. ಆಧುನಿಕ ಸಾಹಿತ್ಯದ ಪರಿಚಯ ಇಲ್ಲಿ ನೆರವಾಗಿ ಬಂದಿದೆ.
ನಾನು ಇಲ್ಲಿ ರೂಪಿಸಿದ ಹಂತಗಳು ಕೇವಲ ಅನುಕೂಲತೆಗಾಗಿ ಮಾಡಿ ಕೊಂಡವು. ಒಂದರ ಅಂಶ ಮತ್ತೊಂದರಲ್ಲಿ ಬೆರೆತಿದೆ. ಇದೊಂದು ಪ್ರವಾಹ, ಅದನ್ನು ನಾಲ್ಕು ಕಡೆ ನಿಂತು ನೋಡಿದ್ದೇನೆ ಅಷ್ಟೆ.

ಬಯಲಾಟದಲ್ಲಿ ಜೋಡಾಟ ಇದ್ದಂತೆ, ಹಿಂದೊಮ್ಮೆ * ಜೋಡು ತಾಳ ಮದ್ದಳೆ' ಎಂಬ ಒಂದು ಭಯಂಕರ ಪ್ರಕಾರವಿತ್ತು. ಒಂದೇ ಕಡೆ, ಜೋಡು ಹಿಮ್ಮೇಳ, ಸಮಾನಾಂತರ ಪಾತ್ರವರ್ಗ, ಗೌಜಿ ಗಲಭೆ, ಗದ್ದಲಗಳ ಕಂಬಳ ಅದು. ಯಾರ ಬೊಬ್ಬೆ ಬಲವಾಯಿತೋ ಅವನೇ ಪ್ರಬಲ ಅರ್ಥಧಾರಿ. ಅಂದಿನ ಅಭಿರುಚಿ ಹಾಗಿತ್ತು ಅನ್ನಬೇಕಷ್ಟೆ. ಈಗ ಈ ಕ್ರಮದ ತಾಳಮದ್ದಳೆಗಳಿಲ್ಲ.
ತಾಳಮದ್ದಳೆ ಇತಿಹಾಸದಲ್ಲಿ ಉಲ್ಲೇಖಿಸಬೇಕಾದ ಒ೦ದು ಯತ್ನ, 1930ರ ಸುಮಾರಿಗೆ ಮಂಗಳೂರು ಟ್ರೈನಿಂಗ್ ಶಾಲೆಯ ಪ್ರಮುಖರ ಆಶ್ರಯದಲ್ಲಿ