ಈ ಪುಟವನ್ನು ಪ್ರಕಟಿಸಲಾಗಿದೆ

೧OO | ಜಾಗರ
ರೂಪುಗೊಂಡ ಯಕ್ಷಗಾನ ಕಲೋಜ್ಜಿವಿನೀಸಭಾ. ಇದು ಖ್ಯಾತ ಕಲಾವಿದರಿಂದ ಆಗಾಗ ತಾಳಮದ್ದಳೆಗಳನ್ನು ನಡೆಸುತ್ತಿತ್ತು. ವಿಮರ್ಶೆ ಮಾಡಿ, ತಿದ್ದುವ ಹಿರಿಯ ಕಲಾಪ್ರೇಮಿಗಳಿದ್ದರು. ತಾಳಮದ್ದಳೆಗಳಿಗೆ ಅಧ್ಯಕ್ಷರಿರಬೇಕೆಂಬ ರೂಢಿ ಇದರಿಂದಲೇ ಬಂತು. ಆಗ ಅಧ್ಯಕ್ಷನ ಅವಶ್ಯಕತೆಯೂ ಇತ್ತು.
ತಾಳಮದ್ದಳೆ ರಂಗದಲ್ಲಿ ಹಲವು ಪ್ರಯೋಗಗಳಾಗಿವೆ. ಮೂರು ನಾಲ್ಕು ಕಥಾಭಾಗಗಳಿಂದ ರಸವತ್ತಾದ ಅಂಶಗಳನ್ನು ಆಯ್ದು ಪ್ರಯೋಗಿಸುವುದಿದೆ. ತಾಳ ಮದ್ದಳೆ ಮುಖ್ಯವಾಗಿ ಕನ್ನಡದ ಕಲೆ. ಆದರೂ ಇಂಗ್ಲಿಷ್, ತುಳು, ಕೊ೦ಕಣಿ ಸಂಸ್ಕೃತ, ಹಿಂದಿ ಭಾಷೆಗಳಲ್ಲಿ ಪ್ರಯೋಗಗಳಾಗಿವೆ. ಪೌರಾಣಿಕ ಪ್ರಪಂಚವನ್ನು ಸೃಷ್ಟಿಸುವ ನಿಟ್ಟಿನಲ್ಲಿ ಸಂಸ್ಕೃತ ಅರ್ಥಗಾರಿಕೆ ಸಲೀಸಾದ ಯಶಸ್ಸು ಪಡೆದಿದೆ, ತುಳು, ಕೊಂಕಣಿ ಪ್ರಯೋಗಗಳೂ ಸ್ವಾರಸ್ಯಕರವಾದ ಅನುಭವವನ್ನು ನೀಡಿವೆ. ಪೌರಾಣಿಕ ವಲ್ಲದ ಆಧುನಿಕ ವಸ್ತುಗಳ ವಿನೋದಕ್ಕಾಗಿ ಅಣಕು ತಾಳಮದ್ದಳೆಗಳೂ ಆಗಿವೆ.

೧೦

ಯಶಸ್ವೀ ಅರ್ಥಧಾರಿ ಅನಿಸುವುದು ಸುಲಭದ ಕೆಲಸವೇನೂ ಅಲ್ಲ. ಸಾಕ ಷ್ಟು ಪುರಾಣಜ್ಞಾನ, ಶ್ರುತಿಗೆ ಕೂಡುವ ಪರಿಣಾಮಕಾರಿ ಕಂಠ, ಭಾಷೆಯ ಮೇಲೆ ಹಿಡಿತ, ಪ್ರತಿಭೆ, ಸಂವಾದ, ಚಾತುರ್ಯ, ಸನ್ನಿವೇಶಗಳನ್ನು ಚಿತ್ರಿಸುವ ಶಕ್ತಿ, ರಚನಾ ಕೌಶಲ್ಯ, ವ್ಯಂಗ್ಯದೃಷ್ಟಿ ಭಾವಪರವಶನಾಗುವ ಭಾವಜೀವಿತ್ವ, ಒಳ್ಳೆಯ ಕಲ್ಪನಾಶಕ್ತಿ, ವಾದ ಸಾಮರ್ಥ್ಯ - ಇವೆಲ್ಲ ಸಪ್ರಮಾಣ ಎರಕವಾಗಿ ಇದ್ದರೆ ಅವನು ಒಳ್ಳೆಯ ಅರ್ಥ ಗಾರ, ಅವನು ಏಕಕಾಲದಲ್ಲಿ ಕವಿ, ಮಾತುಗಾರ, ನಾಟಕಕಾರ, ವಿದ್ವಾಂಸ, ನಟ - ಎಲ್ಲವೂ ಆಗಬೇಕು. ಅವನಿಗೆ ಸಂಸ್ಕೃತ ಭಾಷೆಯ ಸಾಮಾನ್ಯ ಜ್ಞಾನವಾದರೂ ಇದ್ದರೆ ಒಳ್ಳೆಯದು. ಪದ್ಯಗಳ ಲಯವನ್ನು, ಹಿಮ್ಮೇಳದ ಸೊಗಸನ್ನು ಸವಿಯಬಲ್ಲ, ಅದ ರಲ್ಲಿ ಮುಳುಗಬಲ್ಲ ಸಾಮರ್ಥ್ಯ ಬೇಕು, ಮುಖ್ಯ ಪ್ರಸಂಗಗಳು ಬಾಯಿಪಾಠ ಬರ ಬೇಕು. ಪ್ರಸಂಗ ಅವನ ಹಸ್ತಪ್ರತಿ (Script) ತಾನೆ? ಕಡಿಮೆ ಪಕ್ಷ ಮುಖ್ಯ ಪ್ರಸಂಗಗಳ ಕತೆಯ ನಡೆ, ಪದ್ಯಗಳ ಅನುಕ್ರಮ ಇವಾದರೂ ತಿಳಿದಿರಬೇಕು.
ಅತಿಯಾದ ವಿದ್ವತ್ತು ಉತ್ತಮ ಅರ್ಥಗಾರಿಕೆಗೆ ತೊಡಕಾಗುವುದಿದೆ. ವಿದ್ವತ್ ಪ್ರದರ್ಶನ, ಅತಿವ್ಯಾಖ್ಯಾನ, ಕೂದಲೆಳೆ ವಾದಗಳು, ಶ್ಲೋಕ, ಚಟ - ಇವು ಅರ್ಥ ವನ್ನು ಕೆಡಿಸುತ್ತವೆ. ಅರ್ಥಧಾರಿ, ಮೊದಲು ಕಲಾವಿದ, ಆ ಬಳಿಕ ವಿದ್ವಾಂಸ ಎಂಬುದನ್ನು ಅವನು ತಿಳಿದಿರಬೇಕು. ಕಲಾಕ್ಷೇತ್ರದ ಚೌಕಟ್ಟಿನ ಒಳಗೆ ಇಲ್ಲಿ ವಿದ್ವತ್ತು ದುಡಿಯಬೇಕು. ಇಲ್ಲಿ ವಿದ್ವತ್ತು ಕಲೆಗೆ ಅಡಿಯಾಳು, ಅರಸಲ್ಲ. ಅಂತಹ ವಿದ್ವಾಂ ಸರಲ್ಲದವರು, ಶ್ರೇಷ್ಠ ಅರ್ಥಗಾರರಾಗಿ ಯಶಸ್ಸು ಕಂಡಿದ್ದಾರೆ. ತಾಳಮದ್ದಳೆಯಲ್ಲಿ