ಈ ಪುಟವನ್ನು ಪ್ರಕಟಿಸಲಾಗಿದೆ
ತಾಳಮದ್ದಳೆ

ತಾಳಮದ್ದಳೆಯ ಎಲ್ಲ ಅರ್ಥಧಾರಿಗಳ ಹೆಸರುಗಳನ್ನು ಉಲ್ಲೇಖಿಸುವುದು ನನ್ನ ಉದ್ದೇಶವೂ ಅಲ್ಲ. ತಾಳಮದ್ದಳೆಯ ಇತಿಹಾಸದ ಮುಖ್ಯ ಪುಟಗಳಲ್ಲಿ ಪ್ರಮುಖ ಅನಿಸುವ ಕೆಲವು ಅರ್ಥಗಾರಿಕೆಯ ಶೈಲಿ, ಪ್ರವೃತ್ತಿ (trend) ಗಳನ್ನು ಗುರುತಿಸಿ, ಆ ನೆಲೆಯಲ್ಲಿ ಕೆಲವು ಮುಖ್ಯ ಹೆಸರುಗಳನ್ನು ಇಲ್ಲಿ ಹೇಳಿದ್ದೇನೆ, ಯಕ್ಷಗಾನ ಬಳಕೆ ಇರುವ ಎಲ್ಲೆಡೆ, ಪ್ರತಿಯೊಂದು ಊರಿನಲ್ಲಿ ಸಮರ್ಥರೆಂದೇ ಹೇಳಬಹುದಾದ ಅರ್ಥಧಾರಿಗಳಿರುತ್ತ. ಸಮಗ್ರ ಯಾದಿಯನ್ನು ರೂಪಿಸುವುದು ಈ ಲೇಖನದ ವ್ಯಾಪ್ತಿಗೆ ಮೀರಿದ ವಿಷಯ.
ನಮಗೆ ಕೇಳಿ ಬರುವ ಹಳೆಯ ಹೆಸರುಗಳೆಂದರೆ ದಿ| ಸಾಬಾಜಿ ಶ್ರೀನಿವಾಸ ಆಚಾರ್ಯ, ದಿ| ಬಪ್ಪನಾಡು ಗೋಪಾಲಕೃಷ್ಣ ಭಟ್ಟ, ದಿ। ಬಳ್ಳಮಜಲು ರಂಗ ಪ್ಪಯ್ಯ, ದಿ| ಪಡ್ರೆ ಶ್ರೀಪತಿ ಶಾಸ್ತ್ರಿ ಇತ್ಯಾದಿ.
1930 - 1960ರ ಅವಧಿಯಲ್ಲಿ ತಾಳಮದ್ದಳೆಯ ರಂಗದಲ್ಲಿ ಮಿಂಚಿದ ಕೆಲವು ಮಹನೀಯರ ಬಗೆಗೆ ಜನ ಇಂದಿಗೂ ಬಹಳ ಆದರದಿಂದ ಸ್ಮರಿಸಿಕೊಳ್ಳು ತ್ತಾರೆ. ಈ ಯುಗದಲ್ಲಿ ತಾಳಮದ್ದಳೆಯ ಮಾತುಗಾರಿಕೆ ಬಹುಮುಖಿಯಾಗಿ ಬೆಳೆ ಯಿತು. ಅರ್ಥಧಾರಿಗೆ ಆಳವಾದ ವಿದ್ವತ್ತು, ತರ್ಕಸಾಮರ್ಥ್ಯವೂ ಅನಿವಾರ್ಯವಾ ಯಿತು. ಈ ಯುಗದಲ್ಲಿ ಬೆಳೆದ ಮಾತುಗಾರಿಕೆ, ಅತಿವಾದವಾಗಿ ಜಗಳಗಳಿಗೆ ಹೋದ ಸಂದರ್ಭಗಳೂ ಇದ್ದವು.
ಸಂಸ್ಕೃತ ವಿದ್ವಾಂಸರೂ, ಪುರಾಣಪ್ರವಚನಕಾರರೂ ಆಗಿದ್ದ ದಿ| ಪೊಳಲಿ ಶಂಕರನಾರಾಯಣ ಶಾಸ್ತ್ರಿಗಳು ರಸಪೂರ್ಣವಾದ ಕಾವ್ಯಾತ್ಮಕವಾದ ಸುಂದರ ಅರ್ಥ ಗಾರಿಕೆಗೆ ಆದರ್ಶವಾಗಿ ಗಣಿಸಲ್ಪಡುತ್ತಾರೆ. ವಿದ್ವತ್ತು, ರಸ, ತರ್ಕ, ಪ್ರತಿಭೆ, ಎಲ್ಲ ಶಾಸ್ತ್ರಿಗಳಲ್ಲಿ ಎರಕವಾಗಿತ್ತು. ಶಾಸ್ತ್ರಿಗಳ ಭೀಷ್ಮ, ಜರಾಸಂಧ, ರಾವಣ, ರಾಮ, ಕೃಷ್ಣ, ಬಲರಾಮ, ಶಲ್ಯ ಮುಂತಾದ ಅರ್ಥಗಳಿಗೆ ವಿಶೇಷ ಪ್ರಸಿದ್ಧಿ ಇದೆ.
ಪ್ರಚಂಡ ಭಾಷಣಗಾರರೂ, ತುಳು ಸಾಹಿತಿ, ಕಾಂಗ್ರೆಸ್ ಧುರೀಣರೂ, ಸ್ವಾತಂತ್ರ್ಯ ಹೋರಾಟಗಾರರೂ ಆಗಿ ಖ್ಯಾತರಾದ ದಿ| ನಾರಾಯಣ ಕಿಲ್ಲೆ ಕಾವ್ಯ ಮತ್ತು ಭಾಷೆಯ ಮೇಲೆ ಹಿಡಿತವಿದ್ದ ಪ್ರಭಾವಿ ವಾಗ್ಮಿ, ಗಂಭೀರ ಅಭಿವ್ಯಕ್ತಿ, ಆಕರ್ಷಕ ಮಂಡನೆಗಳ ವಾಗ್ವೈಭವ ಅವರದು. ಕಿಲ್ಲೆ ಅವರ ಕರ್ಣ, ಕೃಷ್ಣ, ಕೌರವ ಪಾತ್ರಗಳಿಗೆ ವಿಶೇಷ ಖ್ಯಾತಿ.
ಹಿರಿಯ ವಿದ್ವಾಂಸರೂ ಯಕ್ಷಗಾನದ ವಿವಿಧ ಅಂಗಾಂಗಗಳನ್ನು ಅಭ್ಯಸಿ ಸಿದ್ದವರೂ, ಯಕ್ಷಗಾನ ಕವಿಗಳೂ ಆಗಿದ್ದ ದಿ/ ಕೆ ಪಿ ವೆಂಕಪ್ಪ ಶೆಟ್ಟರು (ಫಕೀರ ಶೆಟ್ಟ ರೆಂಬ ಅಡ್ಡ ಹೆಸರಿಂದ ಪ್ರಸಿದ್ಧರು) ಈ ಕ್ಷೇತ್ರದಲ್ಲಿ ವಿಶಿಷ್ಟ ಸ್ಥಾನವಿದ್ದ ದಿಗ್ಗಜ,