ಈ ಪುಟವನ್ನು ಪ್ರಕಟಿಸಲಾಗಿದೆ

೧೦೪ | ಜಾಗರ
ಮಾತಿನ ಪಟ್ಟು, ಗತ್ತುಗಳಿಗೆ ವಿಶಾಲವಾದ ವಿಷಯ ಜ್ಞಾನಕ್ಕೆ ಹೆಸರಾದವರು. ವಿಶಾಲ ಶಿಷ್ಯವರ್ಗ ಹೊಂದಿದ್ದ ಯಕ್ಷಗಾನ ಗುರು ಕೂಡ. ಇವರೊಂದಿಗೆ ಉಲ್ಲೇ ಖಿಸಬೇಕಾದ ಇನ್ನೊಂದು ಹೆಸರು ದಿ| ಬಡೆಕಿಲ ವೆಂಕಟರಮಣ ಭಟ್ಟರದು. ಇವರು ಸಂಸ್ಕೃತ ವಿದ್ವಾಂಸರು, ಕವಿಗಳು, ತಾಳಮದ್ದಳೆ ಕ್ಷೇತ್ರದಲ್ಲಿ ಇವರ ಆಸಕ್ತಿ ಸೀಮಿತ ವಾದರೂ, ಇವರು ಪ್ರಥಮ ಶ್ರೇಣಿಯ ಅರ್ಥಧಾರಿ.
ಪ್ರವಚನಕಾರರಾಗಿಯೂ ಖ್ಯಾತರಾಗಿದ್ದ ದಿ| ಅರ್ಕುಳ ಸುಬ್ರಾಯಾಚಾ ರ್ಯರು ಹಿತ, ಮಿತ, ಸ್ವಾರಸ್ಯ ಮಾತುಗಾರಿಕೆಯ ಅರ್ಥಧಾರಿ. ಈ ಯುಗದ ಇನ್ನೊರ್ವ ಪ್ರಮುಖ ಅರ್ಥಧಾರಿ ಶ್ರೀ ಕುಬಣೂರು ಬಾಲಕೃಷ್ಣ ರಾವ್ ಅವರು, ಕಳೆದ ಸುಮಾರು ಐವತ್ತು ವರ್ಷಗಳಿಂದ ಈ ಕ್ಷೇತ್ರದಲ್ಲಿ ಅರ್ಥಧಾರಿಯಾಗಿಯೂ, ಸಂಘಟಕರಾಗಿಯೂ ದುಡಿದವರು. ತಮ್ಮ ಶರವು ಯಕ್ಷಗಾನ ಸಂಘದ ಮೂಲಕ ತಾಳಮದ್ದಳೆಯನ್ನು ಜನಪ್ರಿಯಗೊಳಿಸಲು, ಪರವೂರುಗಳಲ್ಲೂ ಪ್ರಸಾರ ಪಡಿಸಲು ಶ್ರಮಿಸಿದವರು. ತಾಳಮದ್ದಳೆಯ ಇತಿಹಾಸದಲ್ಲಿ ಇವರದು ವಿಶಿಷ್ಟವಾದ ಒಂದು ಸ್ಥಾನ.
ಸೌಮ್ಯ ಗಂಭೀರ ಮಾತಿನ ವಾಗ್ಮಿ ತುಳು ಕವಿ ದಿ| ಬಡಕಬೈಲು ಪರಮೇಶ್ವ ರಯ್ಯ, ಮುಸ್ಲಿಂ ಮತೀಯರಾಗಿ, ಈ ಕ್ಷೇತ್ರ ಪ್ರವೇಶಿಸಿ ದಾಖಲೆ ನಿರ್ಮಿಸಿದ ದಿ| ಎಫ್ ಎಚ್ ಒಡೆಯರ್ (ಒಡೆಯರ್ ಬಳಗ ಎಂಬ ಮಿತ್ರವೃಂದವನ್ನು ಕಟ್ಟಿದ್ದರು), ದಿ| ಭುಜಬಲಿ ಅತಿಕಾರಿ, ದಿ| ಕಾಳು ತಂತ್ರಿ, ದಿ| ಕೋಣಿ ಅಣ್ಣಪ್ಪ ಕಾರಂತ, ದಿ| ಶಿವಪುರ ಶ್ರೀನಿವಾಸ ಪಂಡಿತ, ಸ್ತ್ರೀಪಾತ್ರಗಳ ಖ್ಯಾತಿಯ, ದಿ| ಸೀತಾರಾಮ ಬಳ್ಳುಕ ರಾಯ, ದಿ| ಕುಂಜಾಲು ರಾಮಕೃಷ್ಣ ರಾವ್ (ಪುತ್ತೂರು ಗುಂಡುರಾಯರೆಂದೇ ಖ್ಯಾತರು), ಪ್ರಸಿದ್ಧ ವೇಷಧಾರಿ ದಿ| ತೆಕ್ಕಟ್ಟೆ ಬಾಬಣ್ಣ ಶ್ಯಾನುಭಾಗ, ಇವರೆಲ್ಲ ಹಿಂದಿನ ತಲೆಮಾರಿನಲ್ಲಿ ಉಲ್ಲೇಖನೀಯರಾದ ಕೆಲವು ಪ್ರಮುಖರು.
ಯಕ್ಷಗಾನ ಕವಿ, ಮತ್ತು ಯಕ್ಷಗಾನ ಶಿಕ್ಷಕರಾಗಿ, ಪ್ರಮುಖ ಅರ್ಥಧಾರಿ ಯೆನಿಸಿ ಬಹುಕಾಲ ಅರ್ಥಹೇಳಿ ಇದೀಗ ನಿವೃತ್ತರಾಗಿರುವ ಕೀರಿಕ್ಕಾಡು ವಿಷ್ಣುಭಟ್, ಮಟ್ಟಿ ಸುಬ್ಬರಾವ್, ದಿ| ಕೊಳಂಬೆ ಪುಟ್ಟಣ್ಣ ಗೌಡ, ಗಂಡುಶೈಲಿಯ ಗತ್ತಿನ ಮಾತುಗಾರರಾದ ಪೊಲ್ಯ ದೇಜಪ್ಪ ಶೆಟ್ಟಿ, ಶೆಡ್ಡೆ ಕೃಷ್ಣ ಮಲ್ಲಿ, ದಿ| ನಾರಾಯಣ ಕೇಕುಣ್ಣಾಯ ಕಂಡತ್ತೋಡಿ, ದಿ| ಪೆರ್ಲ ಗುರು ಕೇಶವ ಭಟ್, ದಿ| ನಾಟಿ ಶಾಂತಿರಾಜಯ್ಯ, ಉತ್ತರಕನ್ನಡದ ಹಿರಿಯ ಅರ್ಥಥಾರಿ ಎನಿಸಿದ್ದ ದಿ| ರಾಜಾರಾಮ ಮಾಸ್ಟರ್ ಇವರೆಲ್ಲ ಹಿಂದಿನ ತಲೆ ಮಾರಿನ ಉಲ್ಲೇಖನೀಯ ಅರ್ಥ ಗಾರರು. ತಾಳಮದ್ದಳೆಯ ಕ್ರಾಂತಿಯುಗದಲ್ಲಿ ಪಾಲುಗಾರರು.
ಇದೇ ಹಂತದಲ್ಲಿ ಮುಂದಿನ ಮಜಲಿನಲ್ಲಿ ಬಲು ದೊಡ್ಡ ಹೆಸರು ಹರಿದಾಸ