ಈ ಪುಟವನ್ನು ಪ್ರಕಟಿಸಲಾಗಿದೆ
ತಾಳಮದ್ದಳೆ

ಕ್ರಮವನ್ನು ಆರಿಸಿಕೊಂಡು, ಕೆಲವು ಹೆಸರುಗಳನ್ನು ದಿಕ್ಕಚಿಯಾಗಿ ಮಾತ್ರ ಸೂಚಿ ಸಿದ್ದೇನೆ.
ಪ್ರಸಿದ್ಧ ವೇಷಧಾರಿ, ಭಾಷಣಗಾರ ಕುಂಬಳೆ ಸುಂದರರಾವ್ ಓರ್ವ ತುಂಬು ಸಾಮರ್ಥ್ಯದ ಕಲಾವಿದ. ಸಮೃದ್ಧ ಶೈಲಿ, ಚುರುಕಾದ ಮಾತು, ರೋಚಕ ವಾದ ಸಾಹಿತ್ಯ ಸೌಂದರ್ಯವುಳ್ಳ ಮಂಡನೆ, ತೀವ್ರ ಭಾವಾಭಿ ವ್ಯಕ್ತಿ ಇರುವ ಸುಂದರರಾವ್ ಮಾತಿನ ಮೋಡಿಗಾರ, ಕಲ್ಪನಾಶೀಲ ಪ್ರತಿಭಾಶಾಲಿ, ರಸಜ್ಞರಾದ ಇವರ ಮಾತುಗಾರಿಕೆಗೆ ಪ್ರಚಂಡ ಆಕರ್ಷಣೆ ಇದೆ. ಸಂವಾದಚಾತುರಕ್ಕೂ ಇವರು ಸಿದ್ಧಹಸ್ತರು.
ಖ್ಯಾತ ಪ್ರವಚನಕಾರರೂ, ವಿಸ್ತಾರವಾದ ಅಧ್ಯಯನದ ಅನುಭವವುಳ್ಳ ವರೂ ಆದ ತೆಕ್ಕಟ್ಟೆ ಆನಂದ ಮಾಸ್ತರ್ ಅವರು ಯಕ್ಷಗಾನ ರಂಗದಲ್ಲಿ, ಬೇರೆಯೇ ಒಂದು ರೀತಿಯ ಮಾತುಗಾರ, ಪಾದರಸ ಪ್ರತಿಭೆ, ಚುರುಕಾದ ಮಾತು, ಹಾಸ್ಯ ಶೃಂಗಾರಗಳಲ್ಲಿ ವಿಶೇಷ ಪ್ರೌಢಿಮೆ ಇರುವ ಇವರು ಯಾವ ಪಾತ್ರವನ್ನಾದರೂ ನಿರ್ವಹಿಸಬಲ್ಲರು. ಜನಪದ ಜೀವನವನ್ನೂ ಲೋಕಾನುಭವವನ್ನೂ ಇಷ್ಟು ಚೆನ್ನಾಗಿ ಅರ್ಥಕ್ಕೆ ಬೆಳೆಸಬಲ್ಲವರಿಲ್ಲ. ಇವರ ಸಂವಾದ ಕ್ರಮ ಅಸಾಮಾನ್ಯವಾದದ್ದು.
ಗಂಭೀರ ಶೈಲಿ, ತೂಕವಾದ ಸ್ವರಭಾರ, ವ್ಯವಸ್ಥಿತ ವಾಗಿತ್ವದಿಂದ ಅನಾಯಾಸವಾಗಿ ಪಾತ್ರ ನಿರ್ಮಾಣ ಮಾಡಬಲ್ಲ ಉಡುವೆಕೋಡಿ ಸುಬ್ಬಪ್ಪಯ್ಯ ಇಂದಿನ ಇನ್ನೊರ್ವ ಮುಖ್ಯ ಅರ್ಥಧಾರಿ, ಭಾವಪೂರ್ಣವಾಗಿ, ಚೊಕ್ಕವಾಗಿ ಮಾತ ನಾಡುವ ಸುಬ್ಬಪ್ಪಯ್ಯನವರ ಮಾತಿಗೆ ಆಳವಾದ ಪರಿಣಾಮಶಕ್ತಿ ಇದೆ. ನೆನಪಿನಲ್ಲಿ ಉಳಿಯುವ ರೀತಿಯ ಮಾತುಗಾರಿಕೆ ಇವರದು. ಈ ಲೇಖಕನೂ ಒಬ್ಬ ಪ್ರಮುಖ ಅರ್ಥಧಾರಿ.
ವಿಸ್ತ್ರತ ಪೌರಾಣಿಕ ಅನುಭವವುಳ್ಳ, ಪಳಗಿದ ಅರ್ಥಧಾರಿ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿ, ಸ್ತ್ರೀ ಪುರುಷ ಪಾತ್ರಗಳೆರಡರಲ್ಲೂ ಏಕ ಪ್ರಕಾರವಾದ ಹಿಡಿತವುಳ್ಳ ಸಮರ್ಥರು. ಗಂಭೀರ ಕಂಠ, ಸ್ವಚ್ಛ ಪ್ರೌಢಶೈಲಿಯ ಮಾತುಗಾರ, ಪ್ರಮುಖ ವೇಷಧಾರಿ ಕೆ ಗೋವಿಂದ ಭಟ್ಟರೂ ಸ್ತ್ರೀ ಪುರುಷ ಪಾತ್ರಗಳೆರಡರಲ್ಲೂ ಪ್ರಸಿದ್ಧರು.
ಸತ್ವಯುತ ಕಂಠ, ಸಶಕ್ತ ಪ್ರತಿಭೆಯ, ಮಾರೂರು ಮಂಜುನಾಥ ಭಂಡಾರಿ, ಎಲ್ಲ ಬಗೆಯ ಪಾತ್ರಗಳನ್ನು ವಹಿಸಿ ಜನಪ್ರಿಯರಾದ ಓರ್ವ ಹಿರಿಯ ಅರ್ಥಧಾರಿ. ಕಾವ್ಯಾತ್ಮಕ ಶೈಲಿ, ಸೊಗಸಾದ ಮಾತುಗಾರಿಕೆ, ಕುತೂಹಲಕಾರಿಯಾದ ಸಂವಾದ - ತಂತ್ರಗಳಿಂದ ಗಮನ ಸೆಳೆಯುವ ಡಾ| ರಮಾನಂದ ಬನಾರಿ, ಮತ್ತು