ಈ ಪುಟವನ್ನು ಪ್ರಕಟಿಸಲಾಗಿದೆ
ತಾಳಮದ್ದಳೆ

ದಿಗ್ದರ್ಶನ ಇದ್ದರೆ ಹಲವು ಅಸಂಬದ್ಧಗಳನ್ನು, ಅನಾವಶ್ಯಕ ವಿಸ್ತರಣೆಗಳನ್ನು ನಿಲ್ಲಿಸಿ ಕಲೆಯನ್ನು ಶ್ರೀಮಂತಗೊಳಿಸಬಹುದು, ನಾಟಕೀಯತೆ ತುಂಬಿಸಬಹುದು, ಮದ್ದಳೆ ಬಳಿಕ ಒಬ್ಬರಿಗೊಬ್ಬರು ಸೂಚನೆ ಕೊಟ್ಟು, ಸಹಕರಿಸಿ ತಿದ್ದಿಕೊಳ್ಳಬೇಕು, ಸಮರ್ಥ ಭಾಗವತ, ವಾದ್ಯವಾದಕರನ್ನು ಇಂತಹ ಸಮಾಲೋಚನೆಯಲ್ಲಿ ಸೇರಿಸಿ ಕೊಳ್ಳಬೇಕು. ಅವರ ಪಾತ್ರ ಬಹುಮುಖ್ಯ. ನಾವು ಕೆಲವರು ಇಂತಹ ವಿಚಾರ ವಿನಿ ಮಯ ಮಾಡಿ, ಅದು ಎಷ್ಟು ಲಾಭಕರವೆಂದು ಕಂಡು, ಅದನ್ನು ಸಾಧ್ಯವಾದಲ್ಲೆಲ್ಲ ಬಳಕೆಗೆ ತಂದಿದ್ದೇವೆ.
ಇತರ ಭಾರತೀಯ ಭಾಷೆಗಳಿಗೆ ಈ ಪ್ರಕಾರ ವಿಸ್ತರಿಸಲ್ಪಡಬೇಕು. ತಾಳ ಮದ್ದಳೆ ಕುರಿತು ಬಂದಿರುವ ಪ್ರಾಯೋಗಿಕ ವಿಮರ್ಶೆ ತೀರ ಕಡಿಮೆ, ಈ ಕೆಲಸ ಸಾಹಿತಿಗಳಿಗೂ, ಕೆಲವು ಅರ್ಥಧಾರಿಗಳಿಗೂ, ಒಂದು ಒಳ್ಳೆಯ ಕ್ಷೇತ್ರ.
ತಾಳಮದ್ದಳೆಯ ಈ ಅದ್ಭುತ ಕಲಾಪ್ರಕಾರಕ್ಕೆ ನಾಡಿನ ಪತ್ರಿಕೆಗಳಲ್ಲಿ ಸಿಕ್ಕ ಪ್ರಚಾರ ಸಾಲದು. (ಅಥವಾ ನಾವದನ್ನು ಗಳಿಸಲು ಯತ್ನಿಸಿಲ್ಲವೋ ಏನೋ) ನ್ಯಾಯವಾಗಿ ಸಿಗಬೇಕಾದ ಪ್ರಚಾರ ಬಯಸಿದರೆ ತಪ್ಪೇನು?
ತಾಳಮದ್ದಳೆಯ ನಾಳೆ ಆಶಾದಾಯಕವಾಗಿದೆ. ಈಗಿನ ಕಲಾ, ಸಾಹಿತ್ಯ ವಾತಾವರಣ, ಸೌಲಭ್ಯಗಳು ಹಿಂದಿಗಿಂತ ಎಷ್ಟೋ ಅನುಕೂಲಕರ ವಾಗಿದೆ. ಇವನ್ನು ಬೆಳಸಿಕೊಂಡು, ಬೆಳೆಯುವುದು ನಮ್ಮ ಹೊಣೆ,

ಸಮಗ್ರ ಯಕ್ಷಗಾನ ಸಂ: ಕುಶಿ ಹರಿದಾಸ ಭಟ್ಟ

ಗೀತಾ ಬುಕ್ ಹೌಸ್, ಮೈಸೂರು

ಇದರಲ್ಲಿ ಪ್ರಕಟವಾದ ಲೇಖನದ ಪರಿಷ್ಕೃತ ರೂಪ