ಈ ಪುಟವನ್ನು ಪ್ರಕಟಿಸಲಾಗಿದೆ
ಅರ್ಥಗಾರಿಕೆ

ಸಾಮ್ಯ, ಅನುವರ್ತಿತ್ವ ಇರಬೇಕೆಂಬ ಪ್ರಬಂಧಕಾರರ ಮಾತು, ಕಲಾದೃಷ್ಟಿಯಿಂದ ನಿಜ, ಮತ್ತು ಅಪೇಕ್ಷಣೀಯ. ಆದರೆ, ಇಲ್ಲಿ ಬರುವ ದೊಡ್ಡ ತೊಡಕೆಂದರೆ, ಭಾಗವತನ ಧೋರಣೆಯ ಮಿತ್ರಿ, ಉದಾಹರಣೆಗೆ : “ರಾಮ ಹರೇ ಪಾಹಿ ರಾಮ” ಎಂಬ ಸುಗ್ರೀವನ ಪದ್ಯಗಳನ್ನು (ವಾಲಿವಧೆ) ಕ್ಷಿಪ್ರಲಯದಿಂದ ಒಬ್ಬ ಭಾಗವತ ಹಾಡಿದಾಗ ಅರ್ಥಧಾರಿ, ಅದಕ್ಕನುವರ್ತಿಯಾದ ಮಾತಿನ ಸರಣಿಯನ್ನು ಅ೦ಗೀಕರಿಸಿದರೆ, ಸನ್ನಿವೇಶ ಕೆಡುತ್ತದೆ. ಹಾಗೆಯೇ ಅಣ್ಣನವರಿಗೆ ನೀತಿಯಾದರೆ' (ಭೀಮ ಕೃಷ್ಣ ಸಂಧಾನ) 'ಹನುಮ ನೀನೆಂದೆಂಬೆ' (ಅರ್ಜುನ - ಶರಸೇತು ಬಂಧನ) 'ಸೃಷ್ಟಿಗರ್ಜುನ ಎಂಬವನೆ' (ಸುಧನ್ವ - ಅರ್ಜುನ ಸಂವಾದ - ಸುಧನ್ವ ಕಾಳಗ) ಇವನ್ನೆಲ್ಲ ವೀರ, ರೌದ್ರದ ಕ್ರಮದಲ್ಲಿ ಹಾಡುವವರಿದ್ದಾರೆ. ಈ ಸಂದರ್ಭಗಳಲ್ಲಿ ಅರ್ಥಧಾರಿಗೆ ದೊಡ್ಡ ಗೊಂದಲ ಉಂಟಾಗುತ್ತದೆ. ಏಕೆಂದರೆ ಈ ಪದ್ಯಗಳಲ್ಲಿ ಅಣಕದ, ನಿಧಾನ ವಾದ “ಪಚಾರಿಕೆ'ಯ ಧೋರಣೆ ಇದೆ. ಹಾಡನ್ನು ಕಲಾದೃಷ್ಟಿಯಿಂದ 'ಅರ್ಥೈಸಿ ಕೊಂಡು' ಹಾಡುವ ಭಾಗವತನ ಹೊಣೆ ದೊಡ್ಡದು.
ಇನ್ನು ಅರ್ಥದಲ್ಲಿ ಉದ್ಧರಣ (Quatations) ಗಳ ಪ್ರಶ್ನೆ, ಅತಿ ಯಾದ ಉದ್ದರಣ ಆಸ್ವಾದನೆಗೆ, ಕಲಾಸೃಷ್ಟಿಗೆ ತೊಡಕೇನೋ ಹೌದು. ಶಂಭು ಹೆಡ್ಡೆ ಇದನ್ನೇ ಹೇಳಿದ್ದಾರೆ. ಆದರೂ ಉದ್ದರಣವೊಂದನ್ನು ಹೇಳುವ ರೀತಿ ಒಟ್ಟು ಅರ್ಥಗಾರಿಕೆಯ ಶಿಲ್ಪಕ್ಕೆ ಎರಕವಾಗಿದ್ದಾಗ, ಉದ್ದರಣೆಯು ಸಾಕಷ್ಟು ಪ್ರಮಾಣದಲ್ಲಿದ್ದರೂ ಅದು ಆಕ್ಷೇಪಾರ್ಹವಾಗಲಾರದು. ಇಲ್ಲಿ ಹೇಳುವ ಓಘ, ರೀತಿ, ಲಯ, ಹೊಂದಾಣಿಕೆ, ಅದಕ್ಕೆ ನೀಡುವ ಅರ್ಥಧಾರಿಯ ಸ್ವಭಾವ ಇವೆಲ್ಲ ಮುಖ್ಯ ಅನಿಸುತ್ತದೆ. ಕುಮಾರವ್ಯಾಸನ ಕೆಲವು ಪದ್ಯಗಳು, ಹಾಗೆ ಇತರ ಕಾವ್ಯ ಗಳ ಭಾಗಗಳು ಇಡೀ ಇಡಿಯಾಗಿ 'ಅರ್ಥ'ಕ್ಕೆ ಬಲು ಚೆನ್ನಾಗಿ ಒದಗಿ ಬರುತ್ತವೆ ಎಂಬುದು ಅನುಭವಸಿದ್ದ. ಬಳಸುವ ರೀತಿ ಅರ್ಥರಚನೆ'ಗೆ ಹೊಂದಬೇಕು, ಅಷ್ಟೆ. ಅರ್ಥಗಾರಿಕೆಯಲ್ಲಿ ಪೌರಾಣಿಕ ವ್ಯಕ್ತಿಗಳ ಘಟನೆಗಳ ಮಂಥನ, ವಿಮರ್ಶೆ, ವಿಚಾರ ವಾಗಿ, ನಂಬಿಯಾರರ ಮತಕ್ಕೂ, ಪೆರ್ಲ ಕೃಷ್ಣ ಭಟ್ಟರ ಮತಕ್ಕೂ ಸ್ಪಷ್ಟ ಭಿನ್ನತೆ ಇದೆ. (ಇಬ್ಬನಿಯಲ್ಲಿ ಮೂಡಿದ ಆಕಾಶದ ಚಿತ್ರ - ಎಂದು ಪದ್ಯ ಅರ್ಥಗಳ ಸಂಬಂಧವಾಗಿ ನಂಬಿಯಾರರ ಹೋಲಿಕೆ ತುಂಬ ಮಾರ್ಮಿಕವಾಗಿದೆ.) “ಅರ್ಥಗಾರಿಕೆಯ ಹಿಂದೆ ವಿಮರ್ಶೆ ಇರಬೇಕು, ಆದರೆ ಅರ್ಥಗಾರಿಕೆ ಎಂದರೆ ವಿಮರ್ಶೆ ಅಲ್ಲ” ಎಂಬ ಮಾತಿಗೆ ಬಹುಶಃ ತತ್ವತಃ ಪೆರ್ಲರದೂ ಆಕ್ಷೇಪವಿಲ್ಲ . ವ್ಯಕ್ತಿ ಸಂದರ್ಭಗಳ ವಿಸ್ತ್ರತ ವಿಮರ್ಶೆಯಿಂದ ಅರ್ಥದ ಕಲಾರೂಪ ಔಚಿತ್ಯಗಳಿಗೆ ಬಾಧಕ ಇಲ್ಲ ಎಂಬುದು ಪೆರ್ಲರ ನಿಲುವು. ವಾದವು ಪಾತ್ರದೊಳಗಿನ ಸಂಬಂಧವನ್ನು ಮೀರಿ ಔಚಿತ್ಯದ ಎಲ್ಲೆಯನ್ನು ದಾಟುವ ಅಪಾಯ, ಅರ್ಥಗಾರಿಕೆಯಲ್ಲಿ ಅಪರಿಹಾರ್ಯ ಎಂಬಷ್ಟು ಕಾಣಿಸಲು ಕಾರಣ ಅದರ ಆಶುಭಾಷಣ ಪದ್ಧತಿ. (ಅಂದರೆ ಅದರ ರೂಪದಲ್ಲೇ ಇದೆ) ಇಂತಹ ವಾದದ ಬಗ್ಗೆ ಎಲ್ಲ ಐದು ಭಾಷೆಗಳಲ್ಲಿ ವ್ಯಕ್ತವಾದ ಆಕ್ಷೇಪ