ಈ ಪುಟವನ್ನು ಪ್ರಕಟಿಸಲಾಗಿದೆ

೧೧೪ | ಜಾಗರ
ಮಹತ್ವದ ಒಂದು ಅಂಶ.
ಅರ್ಥಕ್ಕೆ ಆಕರ, ಆಧಾರಗಳ ಪ್ರಶ್ನೆ ಸಾಕಷ್ಟು ಗೊಂದಲಕ್ಕೆ ಎಡೆಮಾಡ ಬಹುದಾದ ಪ್ರಶ್ನೆ. ಯಾವುದು ಆಧಾರ ಯಾವುದು ಮುಖ್ಯ? ಮೂಲ ಸಂಸ್ಕೃತ ಕಾವ್ಯವೇ ಪ್ರಮಾಣವೇ? ಪರಸ್ಪರ ವಿರೋಧವಾಗಿರುವ, ಕತೆಯ ನೂರು ಬಗೆಯ ರೂಪಗಳು, ಪ್ರಸಂಗದ ಕತೆ, ಕೆಲವೊಂದು ಪಾರಂಪರಿಕ ಕಥಾ ಸರಣಿ - ಇವನ್ನೆಲ್ಲ ಹೇಗೆ ಹೊಂದಿಸೋಣ? ಆಕರ, ಆಧಾರದ ಬಗೆಗೆ ಒಂದು ರೀತಿಯ ಒಪ್ಪಂದ ಬೇಕೆಂದು ನಂಬಿಯಾರ್, ಉಚ್ಚಿಲ್, ಪೆರ್ಲ - ಈ ಮೂವರೂ ಪ್ರತಿಪಾದಿಸಿದ್ದಾರೆ. ನಿಜವಾದ ಕಲಾದೃಷ್ಟಿ ಇರುವಾಗ, ಇಂತಹ ಒಂದು ಒಪ್ಪಂದ ಮನ:ಸ್ಥಿತಿ, ಕಲಾ ವಿದರೊಳಗೆ ತಾನಾಗಿ ಏರ್ಪಡುತ್ತದೆ. ಕತೆಯ ಪರಸ್ಪರ ವಿರೋಧಿ ರೂಪಗಳು ಸಮನ್ವಯ ಹೊಂದುತ್ತವೆ. ನಮಗೆ ಪ್ರಸಂಗ ಮುಖ್ಯ ಪ್ರಮಾಣ, ಅದನ್ನು ಪ್ರಾಮಾಣಿಕವಾಗಿ ಅನುಸರಿಸಬೇಕು. ಅದಕ್ಕೆ ವಿರೋಧವಾಗದಂತೆ ಜಾಣ್ಮೆಯಿಂದ ಇತರ ಕಾವ್ಯ, ಘಟನೆ, ಕಥಾ ಸಂಪ್ರದಾಯದ ಅಂಶವನ್ನು ತರಬೇಕು. ಮೂಲ ಸಂಸ್ಕೃತ ಕಾವ್ಯವನ್ನು ಹೊಂದಿಸುವಾಗಲೂ ಈ ಎಚ್ಚರ ಮುಖ್ಯ. ಒಂದು ಕಡೆ ಮೂಲವನ್ನು ತಂದೊಡನೆ, ಬೇರೆ ಸನ್ನಿವೇಶಕ್ಕೆ ತರಲೇಬೇಕೆಂದೂ ಇಲ್ಲ. ಇಲ್ಲಿ ಕಲಾ ತ್ಮಕ ಸೌಂದರ್ಯದ ಪ್ರಶ್ನೆ ಮುಖ್ಯ ಹೊರತು, ಪೌರಾಣಿಕ ಆಧಾರದ ಗುರು - ಲಘು ವಾದ ಮುಖ್ಯವಲ್ಲ.
ಇದ ಕ್ಕಿಂತ ಮುಖ್ಯವಾದ ಒಂದು ಅಂಶವೆಂದರೆ, ಅರ್ಥಗಾರಿಕೆಯಲ್ಲಿ ಒಬ್ಬನು ಒಂದು ಘಟನೆ, ಆಧಾರವನ್ನು ಎತ್ತಿದರೆ, ಅದು ಯಾವುದೇ ಆಕರದಿಂದ ಇರಬಹುದು - ಅದೇ ಪ್ರಮಾಣ ಅ೦ದರೆ ಅದನ್ನು ತಪ್ಪೆಂದು ವಾದಿಸುವಂತಿಲ್ಲ. ಅದರ ಬಗ್ಗೆ ಯುಕ್ತಿ, ತರ್ಕಗಳನ್ನು ಹೂಡಬಹುದೇ ಹೊರತು, ನೀನು ಹೇಳಿದ ಕತೆ ಆಧಾರವೇ ಅಲ್ಲ ಎಂದು ವಾದಿಸುವಂತಿಲ್ಲ. ಆದುದರಿಂದ ಮೊದಲು ಎತ್ತಿದ್ದೇ ಅದರ ಮಟ್ಟಕ್ಕೆ ಪ್ರಮಾಣ - ಅದು ಯಾವ ಆಕರದಲ್ಲಾದರೂ ಸರಿಯೆ. ಹಾಗೆಂದು ಆ ರಿ ಸಿಕೊ೦ಡ ಕತೆಗೆ, ಪ್ರಸಂಗಕ್ಕೆ ಅದು ತೀರ ಭಿನ್ನವಾಗಬಾರದು. ಉದಾ:- ರಾವಣನನ್ನು ಕೊಂದವನು ಲಕ್ಷ್ಮಣನೆಂದು ಯಾವುದೋ ಒಂದು ಸಂಪ್ರದಾಯದಲ್ಲಿ ಇರಬಹುದಾದರೂ, ಅಂತಹದನ್ನು ಪ್ರಮಾಣ ಎಂದು ಸ್ವೀಕರಿಸಿದರೆ ಈ ಅರ್ಥ ಗಾರಿಕೆಯಲ್ಲಿ ಕೊನೆ ಮೊದಲಿಲ್ಲದ ಗೊಂದಲಕ್ಕೆ ಕಾರಣವಾಗಬಹುದು. ಇಲ್ಲಿ ನಂಬಿ ಯಾ ರರು ಹೇಳಿ ದಂತೆ ಪ್ರಸಂಗದ “ಅಂಗ ಭಂಗ' ಆಗಬಾರದು. ಪ್ರಸಂಗಕ್ಕೆ ಹೊ೦ದುವ೦ತೆ ವಿಭಿನ್ನ ಆಕರಗಳ ಅಂಶಗಳನ್ನು ಸಮನ್ವಯಿಸುವುದೇ ಕಲಾತ್ಮಕ ಅರ್ಥಗಾರಿಕೆಯ ಮುಖ್ಯ ಅಂಶ. ಈ ವಿಚಾರದಲ್ಲಿ ಶೇಣಿ ಅವರೂ, ದೇರಾಜೆ ಅವರೂ ಸಾಧಿಸುವ ಕಲಾತ್ಮಕತೆ ಮಾದರಿ ಆಗಬಲ್ಲದು.
ಶ್ರೀ ನಂಬಿಯಾರರು ಚರ್ಚಿಸಿದ ಒಂದು ಮಹತ್ವದ ಅಂಶ ಎಂದರೆ,