ಈ ಪುಟವನ್ನು ಪ್ರಕಟಿಸಲಾಗಿದೆ
ಅರ್ಥಗಾರಿಕೆ

ವೈಚಾರಿಕತೆಯನ್ನು ಕಲೆಯ ಆಧಾರದಲ್ಲಿ ಕೆಡದಂತೆ ಮಾತ್ರ ತರಬಹುದು ಎನ್ನುವ ಶ್ರೀ ಹೆಗ್ಡೆ 'ಆವರಣ'ದ ಒಂದು ಕಲ್ಪನೆಯಿಂದ, ವಿಮರ್ಶೆಯ ಹಲವು ಸಮಸ್ಯೆಗಳಿಗೆ ಸೂಕ್ತವಾದೊಂದು ಉತ್ತರದ ತಳಪಾಯ ತಯಾರಿಸಿದ್ದಾರೆ. ಆದರೆ, ಆವರಣ ನಿರ್ಮಾಣಕ್ಕಾಗಿ ಸಮವಸ್ತ್ರ ಅವಶ್ಯ ಎಂಬ ವಾದ ಒಪ್ಪಿಗೆ ಯಾಗುವಂತ ಹುದಲ್ಲ. ಈಗ ಇರುವ ಸಾಮಾನ್ಯ ಉಡುಪಿನ ವಾಸ್ತವವನ್ನು ಸೀಳಿ ಪ್ರೇಕ್ಷಕ ತಾಳ ಮದ್ದಳೆಯ ಪುರಾಣ ಲೋಕವನ್ನು ಪ್ರವೇಶಿಸುತ್ತಿರುವಲ್ಲಿ, ಇಲ್ಲದ ಕೃತಕ ಆವರಣ ನಿರ್ಮಾಣದ ಉಪದ್ಯಾಪ ಯಾಕೆ? ಪರಿಕರದಿಂದ ಆವರಣ ಸೃಷ್ಟಿ ಇಲ್ಲ ದಿರುವುದೇ ಈ ಮಾಧ್ಯಮದ ಲಕ್ಷಣ.
ಇದಿರಾಳಿಯ ಮಾತನ್ನು ಬಳಸಿ ಬೆಳೆಸಿ, ಎರಡೂ ಪಾತ್ರಗಳ ಚಿತ್ರಣ ಮಾಡುವ ರಸ ತಂತ್ರದ ಪ್ರಸ್ತಾಪ, ತುಂಬ ಪ್ರಸ್ತುತವಾದದ್ದು, ಮಹತ್ವದ್ದು. ದೇರಾಜೆ, ಶೇಣಿ, ಪೆರ್ಲ ಅವರ ಅರ್ಥಗಾರಿಕೆಯಲ್ಲಿ ಈ ತಂತ್ರ ಇದೆ. ಇದಿರಾಳಿ ಯಿಂದ ಪ್ರಶ್ನೆ, ವಾದಗಳ ಧಾಳಿಯ ಭಯದ ಅಡಿಯಲ್ಲಿ, ಕಲಾವಿದನ ಸೃಷ್ಟಿಶೀಲ ಪ್ರತಿಭೆ ಅರಳಲಾರದೆಂಬ ಅವರ ಅನಿಸಿಕೆ, ಹಲವರ ಅನುಭವ. “ರಂಗದ ವಾದ ವೆಂಬುದು ಪ್ರಣಯ ಕಲಹದಂತೆ, ಅದರಿಂದ ಉಂಟಾಗುವ ಸುಖವೇ ಅದಕ್ಕೆ ಲಕ್ಷ್ಮ ವಾಗಿರಬೇಕೆಂದು ಶ್ರೀ ದೇರಾಜೆ ಸೀತಾರಾಮಯ್ಯ ತಾವೇ ವ್ಯಾಖ್ಯಾನಿಸಿದ್ದನ್ನು ಇಲ್ಲಿ ನೆನ ಪಿಸಬೇಕೆನಿಸುತ್ತದೆ. 'ಭಾವ ಮಂದಾಗಿದ್ದು, ಅದಕ್ಕೆ ಅನುವರ್ತಿಯಾದ ಬುದ್ಧಿಯ ವ್ಯವಸಾಯ' ಎಂಬ ಶ್ರೀ ಹೆಗ್ಡೆ ಅವರ ಸೂತ್ರ ಇಲ್ಲಿ ಮುಖ್ಯವೆನಿಸು ತದೆ.
ಅರ್ಥಗಾರಿಕೆಯಲ್ಲಿ ಅತಿವಾದದ ಹಾವಳಿಯ ಗಾಳಿ ಈಗ ಕಡಿಮೆ ಆಗು ತ್ತಿದೆ - ಎಂಬುದನ್ನು ಶ್ರೀ ಶಂಭು ಹೆಗ್ಡೆ ಅವರು ಗುರುತಿಸಿರುವುದು ತುಂಬ ಮಹ ತ್ವದ ಅಂಶ. ಇಂದಿನ ಅರ್ಥಧಾರಿಗಳ ಕಲಾಮಾರ್ಗವಾದ ಪ್ರಧಾನವಾದುದಲ್ಲ, ಹೊಂದಾಣಿಕೆಯದ್ದು, ಒಟ್ಟಂದದ್ದು. ಈ ದೃಷ್ಟಿ ಹಿರಿಯ ಕಲಾವಿದರ ಮೇಲೂ ಸಾಕಷ್ಟು ಪ್ರಭಾವ ಬೀರಿದೆ. ಸಂವಾದ ಪ್ರಧಾನ ವಾದ ಸುಸಂಬದ್ಧವಾದೊಂದು ಅರ್ಥಗಾರಿಕೆಯ ರೀತಿ ಮೂಡಿ ಬರುತ್ತಿರುವ ಇಂದಿನ ಸ್ಥಿತಿಯ ಶ್ರೇಯಸ್ಸು ಹೊಸ ತಲೆಮಾರಿನ ತಾಳಮದ್ದಳೆ ಅರ್ಥಧಾರಿಗಳಿಗೆ, ಕೆಲ ಆಟದ ವೇಷಧಾರಿಗಳಿಗೆ ಸಲ್ಲ ಬೇಕು.
"ಚಮತ್ಕಾರವು ಕಲೆಯಲ್ಲ” ಎಂಬುದು, ಕಲಾನಿರ್ಮಿತಿಯಲ್ಲಿ ಒಪ್ಪಬೇಕಾದ ಒಂದು ಮುಖ್ಯಾಂಶ. ಆದರೆ ಚಮತ್ಕಾರದ ಕಲಾತ್ಮಕವಾದ ಉಪಯೋಗಕ್ಕೆ ಸ್ಥಾನ ಇದೆ. ರಸಸಿದ್ಧಿಗೆ, ಪಾತ್ರನಿರ್ಮಾಣಕ್ಕೆ ಉಪಕರಣವಾಗಿ ಅದನ್ನು ಬಳಸಲು ಸಾಧ್ಯ. ತಿಳಿಯಾದ ಹಾಸ್ಯದ ಸೃಷ್ಟಿಗೆ, ಸಹ ಪಾತ್ರಗಳೊಳಗಿನ ಸಂವಾದಕ್ಕೆ ಖಳ ನಾಯಕನ ಖಳ ಸ್ವಭಾವದ ಚಿತ್ರಣಕ್ಕೆ, ಹೀಗೆ ಹಲವು ಬಗೆಯಿಂದ ಚಮತ್ಕಾರದ