ಈ ಪುಟವನ್ನು ಪ್ರಕಟಿಸಲಾಗಿದೆ

೧೨೪ | ಜಾಗರ
ಉಪಯೋಗ ಇದೆ. ಆದರೆ, ಅಳತೆ ಮೀರಿದಾಗ, ಗ೦ಭೀರವಾದ ವಿಷಯದ ನಿರ್ವಹಣ ಮಾಡುವಾಗ ಚಮತ್ಕಾರ ಆಭಾಸವಾಗುತ್ತದೆ. ಚಮತ್ಕಾರವನ್ನೆ ಲಕ್ಷ ವಾಗಿರಿಸಿದರೆ, ಕಲಾವಿದ ಅದರಿಂದ ಬರಬಹುದಾದ ಕ್ಷಣಿಕ ಪರಿಣಾಮಕ್ಕೆ ಸೆರೆಯಾಗಿ ಉಚ್ಚ ಕಲಾಸೃಷ್ಟಿಯನ್ನು ತಲುಪಲು ವಿಫಲನಾಗುತ್ತಾನೆ ಎಂಬ ಅಂಶದ ಅರಿವು ಎಲ್ಲ ಕಲಾವಿದರಿಗೂ ಬೇಕಾದದ್ದೆ. ತಾನೇ ಸೃಷ್ಟಿಸುತ್ತ, ಜನರ ಮುಂದೆ ಅಲ್ಲಲ್ಲೆ ತನ್ನ ಕಲೆಯನ್ನು ಪ್ರದರ್ಶಿಸುವ ಯಕ್ಷಗಾನ ಕಲಾಕಾರನಿಗಂತೂ ಈ ಅರಿವು ಬಹು ಮುಖ್ಯವಾದದ್ದು.
ಹಾಗೆಯೇ ಶ್ರೀ ಪೆರ್ಲ ಕೃಷ್ಣ ಭಟ್ಟರು, 'ಕಲೆಯ ಸ್ವಧರ್ಮವನ್ನು ರಕ್ಷಿಸಬೇಕು' ಎಂಬ ಒಂದು ಅರ್ಥಗರ್ಭಿತವಾದ ಸೂತ್ರವನ್ನು ಮಂಡಿಸಿ, ಬಹಳಷ್ಟು ನಿರೀಕ್ಷೆಯನ್ನು ನಿರ್ಮಿಸುತ್ತಾರೆ. ಆದರೆ ಅದರ ಸೋದಾಹರಣ ವಿವೇಚನೆಗೆ ಅವರು ಮುಂದಾಗಿಲ್ಲ. ಇದರಿಂದ ಅವರ ಪ್ರಬಂಧದಲ್ಲಿ ಉತ್ಕೃಷ್ಟವಾಗಿ ಬೆಳೆಯಬಹುದಾ ಗಿದ್ದ ಒಂದು ಅಂಶ ಕಾಣಿಸಿಕೊಂಡು. ಮಾಯವಾಗಿ ಬಿಟ್ಟಿದೆ. ಹೀಗೆ ಅಧ್ಯಕ್ಷ ಭಾಷಣದಲ್ಲ, ಪ್ರಬಂಧಗಳಲ್ಲಿ ವಿವರಣೆ ಕಡಿಮೆ ಆಗಿ, ಕೆಲವೊಂದು ಮುಖ್ಯ ಅಂಶಗಳು ಇನ್ನಷ್ಟು ಗಮನಾರ್ಹವಾಗಬಹುದಾದ ಅವಕಾಶ ಉಳಿದು ಬಿಟ್ಟಿದೆ. ಈ ದೃಷ್ಟಿಯಿಂದ ತೋಳ್ಳಾಡಿಯವರ ಪ್ರತಿಕ್ರಿಯೆಯೇ ತಾನು ಹೇಳಬೇಕಾದ್ದನ್ನು ಬಿಗಿಯಾಗಿ ಹೇಳುತ್ತದೆ.
ಇಡಿಯ ಗೋಷ್ಠಿಯಲ್ಲಿ ಒಟ್ಟಾಗಿ ಕಂಡ ಒಂದು ಮುಖ್ಯ ಒಲವು ಎಂದರೆ, ಅರ್ಥಗಾರಿಕೆ ಎಂಬಲ್ಲಿ ತಾಳಮದ್ದಳೆಯ ಕಡೆಗೇ ಇದ್ದ ಒತ್ತು, ಲಕ್ಷ್ಯ ಆಟದ ಪ್ರಸ್ತಾಪ ಬಂದಿದೆ ನಿಜ. ಆದರೆ ಒಟ್ಟು ಧೋರಣೆ - ತಾಳಮದ್ದಳೆಯ ಅರ್ಥಗಾರಿಕೆ ಎಂಬ ಗೃಹೀತದ ಮೇಲೆಯೇ, (ಬಹುಶಃ ತಾಳಮದ್ದಳೆಯಲ್ಲಿ ವಾಚಸ್ಪತಿ ಎಂದು ಖ್ಯಾತಿ ಪಡೆದ ದಿ| ಪೊಳಲಿ ಶಾಸ್ತ್ರಿಗಳ ಸಂಸ್ಮರಣಾರ್ಥ ಜರಗಿದ ಗೋಷ್ಟಿ ಎಂಬ ಒಂದು ಅಂಶ- ಸಂಗತಿ - ಈ ಗೋಷ್ಟಿಯ ಮೇಲೆ ಅಜ್ಞಾತ ಪ್ರಭಾವ ಬೀರಿ, ಹೀಗಾಗಿರಬಹುದೇ?)
ಅರ್ಥಗಾರಿಕೆಯ ದೃಷ್ಟಿಯಿಂದ, ಈ ಗೋಷ್ಟಿಯಲ್ಲಿ ಚರ್ಚೆಗೆ ಬರಬಹು ದಾಗಿದ್ದ ಕೆಲವು ಅಂಶಗಳೆಂದರೆ (೧) ಅರ್ಥದಲ್ಲಿ ಇದಿರಾಳಿಯ ಮಾತಿಗೆ ಸಂದರ್ಭ ಕೊಡುವ ಕ್ರಮ (ಮುಂದಿನ ಎತ್ತುಗಡೆಗೆ ಕೊಡುವ ಮುಖ್ಯ, Catch words) ಅದರ ಬಳಕೆ ಅದರಿಂದಾಗುವ ಕೆಲವು ಗೊಂದಲಗಳು, (೨) ಪ್ರಸಂಗದ ಪದ್ಯಗಳ ಆಯ್ಕೆ (Editing) ಯ ಪ್ರಶ್ನೆ (೩) ಬಿಟ್ಟ ಪದ್ಯಗಳ ಅರ್ಥಗಳನ್ನು ಹೇಳಬೇಕಾದ, ಬಿಡಬೇಕಾದ ಸಂದರ್ಭಗಳು. (೪) ಕೆಲವು ಪದ್ಯಗಳಿಗೆ ಅರ್ಥವನ್ನು ತೀರ ಸಂಕ್ಷೇಪ ವಾಗಿ ಹೇಳಬೇಕಾಗಿರುವ ಸನ್ನಿವೇಶಗಳು (ಮಾತಿಗಿಂತಲೂ ಮೌನ ಪ್ರಧಾನವಾಗು ವುದಿದೆ ಎಂಬುದನ್ನು ಶ್ರೀ ಶಂಭುಹೆಗ್ಡೆ ಒಂದೆಡೆ ಹೇಳಿದ್ದಾರೆ. ಈ ಎಲ್ಲದರ ಬಗೆಗೆ ವಿವೇಚನೆ ನಡೆಯಬಹುದಾಗಿತ್ತು.