ಈ ಪುಟವನ್ನು ಪ್ರಕಟಿಸಲಾಗಿದೆ
ಅರ್ಥಗಾರಿಕೆ - ೨

ಹೇಳುತ್ತ ಕೊನೆಯಲ್ಲಿ “ದೇವತೆಗಳು ಸಹ ಅಂಜುವರಣ್ಣನ ಠೀವಿ ಪರಾಕ್ರಮಕೆ! ರಾಮ | ದೇವ ನಾವಿಬ್ಬರು ಜೋಡಾದೆವೀ ವಾಲಿ 1 ರಾವಣರಿಂದ ಹೀಗೆ” (ಅಥವಾ “ಜೋಡಾದೆವು ವಾಲಿ | ರಾವಣದನುಜರಿಂದ) ಎನ್ನುತ್ತಾನೆ, ದುಷ್ಟರೂ ಪರದಾರಾಪಹಕಾರರೂ ಆದ ವಾಲಿ ರಾವಣರಿಂದ ಸಜ್ಜನರಾದ ನಮ್ಮಿಬ್ಬರಿಗೆ ಈ ಕಷ್ಟವಾಯಿತು. ನಾವು ಸಮಾನ ದುಃಖಿಗಳು - ಎಂಬುದು ಇದರ ತಾತ್ಪರ್ಯ, ಈ ಮಾತಿಗೆ ಉತ್ತರವಾಗಿ, ರಾಮನು ಸುಗ್ರೀವನಿಗೆ ಧೈರ್ಯ ನೀಡುವ ಪದ್ಯ ಹೀಗಿದೆ : ಕಣ್ಣಾರೆ.. ಕಂಡರೆ ಬಿಡುವೆನೆ ಸೀತೆಯ | ಎನ್ನ ಮನೋಪ್ರೀತೆಯ | ನಿನ್ನಣ್ಣನ ಪಾಡೇನು ವಾಲಿಯ ಕೊಂದೀಗ | ಮಣ್ಣಗೂಡಿಪೆನೆಂದನು | ಈ ಪದಕ್ಕೆ ಅರ್ಥ ಹೇಳುವಾಗ, ರಾಮನ ಪಾತ್ರಧಾರಿಗಳೆಲ್ಲ ಸಾಮಾನ್ಯವಾಗಿ ಸುಗ್ರೀವನ ಮೊದಲಿನ ಮಾತನ್ನು ಆಕ್ಷೇಪಿಸುವುದು ರೂಢಿ, 'ನಾನೂ ನೀನೂ ಸಮಾನ ರೆಂಬುದು ಸರಿಯಲ್ಲ. ನಾನು ಕಣ್ಣಿಂದ ಕಾಣದೆ. ಸೀತಾಪಹಾರ ಆಗಿಹೋಯಿತು. ನಿನಗಾದರೆ ಕಣ್ಣ ಮು೦ದೆಯೇ ನಿನ್ನ ಪತ್ನಿಯ ಅಪಹಾರ ನಡೆಯಿತು' - ಈ ತಾತ್ಪರ್ಯದ ಮಾತನ್ನು ಹೇಳಿ, ಮುಂದೆ ವಾಲಿವಧೆ ಮಾಡುವ ಸಂಕಲ್ಪವನ್ನು ರಾಮನು ಹೇಳುವ ಕ್ರಮ ಇದೆ. ಆದರೆ, ಇಲ್ಲಿ ರಾಮ ಸುಗ್ರೀವನನ್ನು ಆಕ್ಷೇಪಿಸ ಬೇಕೆ? ಪದ್ಯದಲ್ಲಿ ಆ ಧೋರಣೆ, ಧ್ವನಿ ಇದೆಯೆ? ಇದು ವಿಚಾರಣೀಯ.
ರಾಮನು ಸುಗ್ರೀವನನ್ನು ಆಕ್ಷೇಪಿಸುತ್ತಿದ್ದಾನೆ ಎಂದು ಅರ್ಥವಿಸಲು, ಸಂಪ್ರದಾಯದಂತೆ ಕಲ್ಪಿಸಿರುವ ಆಧಾರ “ಕಣ್ಣಾರೆ ಕಂಡರೆ ಬಿಡುವನೆ” - ಎಂಬ ಮೂರು ಶಬ್ದಗಳು ಮಾತ್ರ. ಅಲ್ಲದೆ ಈ ಪದ್ಯವನ್ನು ವೀರಭಾವದಿಂದ ಹೇಳುವ ರೀತಿಯೂ ಕಾರಣ. ಆದರೆ, “ನಾವಿಬ್ಬರು ಜೋಡಾದೆವು” ಎಂಬ ಮಾತು ತನ್ನ ಪ್ರತಿಷ್ಠೆಗೆ ಕುಂದು ಎಂದು ರಾಮನು ಭಾವಿಸಬೇಕಾಗಿಲ್ಲ. “ನೀನು ಹೇಳಿದಂತೆ ನಾವು ದುಃಖಿಗಳೇ ಹೌದಾದರೂ, ನಿರಾಶರಾಗಬೇಕಾಗಿಲ್ಲ, ರಾವಣನ ಮೋಸಕ್ಕೆ ನಾನು ಒಳಗಾದೆನೇ ಹೊರತು, ಪ್ರತ್ಯಕ್ಷ ಕಂಡರೆ ಬಿಡಲಾರೆ. ವಾಲಿಯಂತೂ ಅಡಗಿ ಕೊಂಡಿಲ್ಲವಲ್ಲ. ಅವನನ್ನು ನಾನು ಸಂಹರಿಸುತ್ತೇನೆ” – ಎಂಬ ಧೋರಣೆಯನ್ನಿರಿಸಿ ಅರ್ಥ ಹೇಳಬಹುದೆಂದು ತೋರುತ್ತದೆ.
ಇನ್ನೊಂದು ಸಂದರ್ಭ “ಕೃಷ್ಣ ಸಂಧಾನ' ಪ್ರಸಂಗದ್ದು, ಧರ್ಮರಾಜನು ಕೃಷ್ಣನನ್ನು ದುರ್ಯೋಧನನಲ್ಲಿ ಸಂಧಾನಕ್ಕಾಗಿ ದೂತನಾಗಿ ಹೋಗುವಂತೆ ಕೇಳಿ ಕೊಂಡ ಮೇಲೆ, ಕೃಷ್ಣನು, ಭೀಮನನ್ನು ಕರೆದು ಅಭಿಪ್ರಾಯವನ್ನು ಕೇಳುತ್ತಾನೆ. ಆಗ ಭೀಮನು ನೀಡುವ ಉತ್ತರದ ಪದ್ಯ ಹೀಗಿದೆ
ಅಣ್ಣನವರಿಗೆ ನೀತಿಯಾದರೆ | ನಿನ್ನ ಮನಕೊಪ್ಪಿದರೆ | ಭೂತಳ | ವನ್ನು ಕೌರವ ನಿತ್ತರೆನಗೆ | ನಿನ್ನು ದುಗುಡ |