ಈ ಪುಟವನ್ನು ಪ್ರಕಟಿಸಲಾಗಿದೆ

೧೨೮ | ಜಾಗರ
ಇಲ್ಲಿ ಭೀಮನ ಪಾತ್ರಧಾರಿ ಸಂಧಾನದ ಬಗೆಗೆ ತನಗಿರುವ, ಅಸಮಾಧಾನ ಔದಾ ಸೀನ್ಯಗಳನ್ನು ಮುಂದಿಟ್ಟು, ಅಥವಾ ಹಾಗೆ ಸೂಚ್ಯವಾಗಿ ಹೇಳುತ್ತ ಈ ಪದ್ಯಕ್ಕೆ ಅರ್ಥ ಹೇಳುವ ಸಂಪ್ರದಾಯ ಸಾರ್ವತ್ರಿಕವಾಗಿ ರೂಢಿಯಲ್ಲಿದೆ. “ಪಡೆ ಯುವ ನೀವಿದ್ದೀರಿ. ಕೊಡಲು ಅವನಿದ್ದಾನೆ. ನನಗೇನು? ಧರ್ಮನ್ಯಾಯಗಳೆಲ್ಲ ನಿಮ್ಮ ಗಲ್ಲವೆ ತಿಳಿದಿರುವು ದು” - ಈ ಧಾಟಿಯ ಮಾತು ಬರುವುದು ಸಾಮಾನ್ಯ. ಆದರೆ ಈ ಸಂದರ್ಭದಲ್ಲಿ ಭೀಮನ ಅಸಮಾಧಾನವಾಗಲಿ, ಅಸಮ್ಮತಿಯಾಗಲಿ ಸೂಚಿಸಲ್ಪಟ್ಟರೆ ಪ್ರಸಂಗದ ಬಂಧಕ್ಕೆ ವಿರುದ್ಧವಾಗುತ್ತದೆಯೆಂದು ತೋರುತ್ತದೆ. ಏಕೆಂದರೆ, ಮುಂದೆ ಭೀಮ - ದ್ರೌಪದಿ ಸಂವಾದದ ಕೊನೆಯಲ್ಲಿ, ಭೀಮನು ದ್ರೌಪದಿಯ ಚುಚ್ಚು ಮಾತಿನಿಂದ ಭುಗಿಲೆದ್ದು, ಕೃಷ್ಣನನ್ನು ಕರೆದು “ಯುದ್ಧವನ್ನ ನಿಶ್ಚಯಿಸಿ ಬಾ, ಸಂಧಾನವನ್ನು ಮುರಿದು ಬಾ” ಎಂದು ಹೇಳುವ ಪದ್ಯಗಳಿವೆ. ಭೀಮನ ನಿಲುವಿನಲ್ಲಾದ ಈ ಬದಲಾವಣೆಯಿಂದ ಕೃಷ್ಣನಿಗೆ ಆಶ್ಚರ್ಯವಾಗುತ್ತದೆ. “ಇದೇನು ಪವನಜ ದ್ರುಪದ ಸುತೆಯರ ಮತವು ಬೇರಾಯ್ತು” – ಎಂಬ ಪದ್ಯಭಾಗ ದಲ್ಲಿ ಇದು ಸ್ಪಷ್ಟವಾಗುತ್ತದೆ. ಕೃಷ್ಣನಲ್ಲಿ ಆರಂಭದಲ್ಲಿ “ಅಣ್ಣನವರಿಗೆ ನೀತಿಯಾ ದರೆ ” ಎಂಬ ಪದ್ಯಕ್ಕೆ ಅರ್ಥ ಹೇಳುವಾಗಲೇ ಭೀಮನು ಸಂಧಾನಕ್ಕೆ ವಿರುದ್ಧ ವಾದ ಮಾತುಗಳನ್ನಾಡಿದರೆ ಕೃಷ್ಣನ ಆಶ್ಚರ್ಯಕ್ಕೆ ಎಡೆಯಿಲ್ಲ. ಇದೇನು ಪವ ನಜ ದ್ರುಪದಸುತೆಯರ ಮತವು ಬೇರೆಯಾಯಿತು” - ಎನ್ನಲೂ ಅವಕಾಶವಿಲ್ಲ. ಹಾಗಾಗಿ ಭೀಮನ ಅಸಮ್ಮತಿ ಬರಬೇಕಾದುದೂ ಎರಡನೇ ಕೃಷ್ಣ ಭೀಮರ ಸಂವಾ ದದಲ್ಲಿ ಎಂದು ತೋರುತ್ತದೆ. ಕುಮಾರವ್ಯಾಸ ಭಾರತದಲ್ಲ, ಮೂಲಭಾರತ ದಲ್ಲೂ ಭೀಮನು ತಾನು ಶಾಂತಿಯನ್ನು ಬಯಸಿ, ಕುಲಕಲಹ ಬೇಡವೆಂಬುದಕ್ಕಾ ಗಿಯೇ ಸಂಧಾನಕ್ಕೆ ಸಮ್ಮತಿಸಿದುದಾಗಿ ಹೇಳಿದನೆಂದಿದೆ.
ಇಂತಹದೇ ಎರಡು ಗೊಂದಲಗಳು ಕರ್ಣಪರ್ವದ ಸರ್ಪಾಸ್ತ್ರ ಪ್ರಕರಣ ದಲ್ಲಿ ಬರುತ್ತವೆ. ಕರ್ಣನು ಸರ್ಪಾಸ್ತ್ರವನ್ನು ಹೂಡಿದಾಗ ಆಡಂಬರದೊಳಗಾ ಬಾಣದ ಗುರಿ | ನೋಡಿ ನರನಗಳಕೆ ಹೂಡುತ ಶಲ್ಯನ ಕಂಡರ್ಕಜ ಮಾ | ತಾಡಿದ ನಗ್ಗಳಿಕೆ” – ಎಂಬ ಪದವಿದೆ. ಅಂದರೆ, ಮುಂದೆ ಕರ್ಣನು ಶಲ್ಯನನ್ನು ಸಂಬೋ ಧಿಸಿ ಹೇಳುವ “ಏನು ಸಾರಥಿ ಸರಳು ಪಾಂಡವ / ಸೇನೆಯನು ಗೆಲಬಹುದೆ ಪಾರ್ಥನ ಮಾನಿನಿಗೆ ವೈಧವ್ಯ ದೀಕ್ಷಾವಿಧಿಯ ತರಬಹುದೆ || ಆನಲಮ್ಮುವರುಂಟೆ ನಿನಗಿದು | ಸಾನುರಾಗವೆ ಹೇಳೆನಲು ರವಿ | ಸೂನುವಿನ ಮೊಗನೋಡಿ ಮಾದ್ರಾಧೀಶನಿಂತೆಂದ” (ಅಥವಾ, ರವಿ ಸೂನುವಿನ ಸರ್ಪಾಸ್ತ್ರವನು ಹೊಗಳಿದನು ಮದ್ರೇಶ) ಎಂಬ ಪದ್ಯ ಪ್ರಸಂಗದಲ್ಲಿದೆ. ಇದು ಕುಮಾರವ್ಯಾಸ ಭಾರತದ ಪದ್ಯ. ಈ ಪದ್ಯಕ್ಕೆ ಅರ್ಥ ಹೇಳುವಾಗ ಕರ್ಣನು ಶಲ್ಯನೊಡನೆ, ತಾನು ಹೂಡಿದ ಸರ್ಪಾಸ್ತ್ರದ ಬಗೆಗೆ ಸಲಹೆ ಕೇಳುವ ಧಾಟಿಯಲ್ಲಿ, ಸಮಾಲೋಚನೆ ಮಾಡುವ ಕ್ರಮದಲ್ಲಿ ಅರ್ಥ ಹೇಳುವ ರೂಢಿ ವ್ಯಾಪಕವಾಗಿದೆ, ಆದರೆ ಕರ್ಣನ ಮನೋಧರ್ಮ, ಕರ್ಣಶಲ್ಯರೊಳಗೆ