ಈ ಪುಟವನ್ನು ಪ್ರಕಟಿಸಲಾಗಿದೆ

೧೩೨ | ಜಾಗರ
ಜಾಣೆಗೆ ಅವಕಾಶ ಇಲ್ಲದಂತೆ ಇದನ್ನು ಹೂಡಬೇಕಿತ್ತು. ಕರ್ಣನ ಪ್ರಯೋಗದಲ್ಲಿ ಈ ಅರಿವು ಇಲ್ಲ. ಅದೇ ನೆಲೆಯರಿಯದೆ ಹೂಡಿದ” ಗುರಿ, ಹೀಗೆ ನಮ್ಮ ತಪ್ಪು ಕೃಷ್ಣನಿಗೆ ಅನುಕೂಲ. ಕೃಷ್ಣನಂತಹ ಒಬ್ಬ ನಿಷ್ಣಾತ ಸಾರಥಿ ಈ ಅಚಾತುರವನ್ನು ಉಪ ಯೋಗಿಸಿ ಬಾಣವನ್ನು ವ್ಯರ್ಥಗೊಳಿಸಬಲ್ಲ. ಒಬ್ಬ ಮಹಾರಥಿಯೂ, ಸೇನಾಪತಿಯೂ, ಮಹಾ ಬಿಲ್ಲುಗಾರನೂ ಆದ ಕರ್ಣ ಇದನ್ನು ಮೊದಲೇ ಊಹಿಸ ದಿದ್ದುದು, ಬಾಣದ ಯೋಗ್ಯತೆಗೆ ತಕ್ಕ ಜಾಗ್ರತೆಯನ್ನು ವಹಿಸಲಿಲ್ಲ ಎಂಬುದನ್ನು ಸೂಚಿಸುತ್ತದೆ. ಹೀಗೆ ನೆಲೆ ಅರಿಯದೆ ಹೂಡಿದಾಗ, ಕೃಷ್ಣನು “ಗೆಲುವರೆ ಬಿಡು ವನೆ"? ಆದುದರಿಂದ ಆದ ತಪ್ಪನ್ನು ತಿದ್ದಿಕೊಂಡು, ಗುರಿ ಬದಲಾಯಿಸಿ ಕೃಷ್ಣನಿಗೆ ತನ್ನ ಸಾರಥ್ಯ ತಂತ್ರದ ಪ್ರಯೋಗಕ್ಕೆ ಅವಕಾಶವಾಗದಂತೆ ಹೂಡಬೇಕು. ಇದು ಶಲ್ಯನ ಮಾತಿನ ತಾತ್ಪರ್ಯ. ಆದುದರಿಂದ ಸಾರಥ್ಯದ ನೆಲೆಯಲ್ಲಿ ಕೃಷ್ಣನು ರಥ ವನ್ನು ತಗ್ಗಿಸುವ ಸಾಧ್ಯತೆ ಇದೆ ಎಂಬ ಮಾತನ್ನು ಶಲ್ಯನ ಪಾತ್ರದಲ್ಲಿ ಹೇಳ ಬೇಕಾದುದು ತರ್ಕಶುದ್ಧವಾಗುತ್ತದೆ.




ದುರ್ಗಾಪರಮೇಶ್ವರೀ ಕೃಪಾಪೋಷಿತ ಯಕ್ಷಗಾನ ಮಂಡಳಿ

ಮುಂಡ್ಕೂರು - ಇದರ ಬೆಳ್ಳಿಹಬ್ಬ ಸಂಚಿಕೆ

'ಯಕ್ಷಪ್ರಜ್ಞೆ' ಯಲ್ಲಿ ಪ್ರಕಟಿತ ಫೆಬ್ರವರಿ 1984