ಈ ಪುಟವನ್ನು ಪ್ರಕಟಿಸಲಾಗಿದೆ
ಅರ್ಥಗಾರಿಕೆ ವಾದದ ಮಿತಿ

ಕಲೆಗೆ ಸಂಬಂಧಿಸಿದಂತೆ ಸಾರ್ವತ್ರಿಕವಾಗಿ ಅಂಗೀಕೃತ ಮೂಲಭೂತ ಔಚಿತ್ಯದ ಸೀಮೆ ಯಕ್ಷಗಾನಕ್ಕೂ ಇದ್ದೇ ಇದೆ. ಆದರೆ ನಮ್ಮ ರಂಗದ ಅತ್ಯಂತ ಶ್ರೇಷ್ಠ ಕಲಾವಿದರೇ ಈ ಔಚಿತ್ಯದ ಸೀಮೆಯನ್ನು ಭಂಗಿಸಿ, ಕೆಟ್ಟ ಸಂಪ್ರದಾಯಗಳನ್ನು ಸೃಷ್ಟಿಸಿದ್ದಾರೆ. ಇದರಿಂದಾಗಿ ಪ್ರೇಕ್ಷಕರೊಂದಿಗೆ, ಕಲಾವಿದರೂ ದಾರಿ ತಪ್ಪುವ ಭಯವಿದೆ. ಯಕ್ಷಗಾನದ ಅರ್ಥಗಾರಿಕೆಯ ಬಗೆಗೆ ಇಂತಹ ಹಲವು ಸಮಸ್ಯೆಗಳಿವೆ.

ಯಕ್ಷಗಾನದ ಮಾತುಗಾರಿಕೆ ಆಶುಭಾಷಣವಾಗಿರುವುದರಿಂದ ನಾಲಗೆಯ ಚಾಪಲ್ಯ ಮತ್ತು ಮೇಲಾಟಗಳಿಂದ ಔಚಿತ್ಯ ಭಂಗಕ್ಕೆ ತುಂಬಾ ಆಸ್ಪದ ಇದೆ. ಮಾತಿಗೆ ಮಾತು ಬೆಳೆದಾಗ ಮಾತಿನ ಚಕಮಕಿ ಬೆಳೆದು, ಇದಿರಾಳಿಯನ್ನು ಭಂಗಿಸುವ ಕುತಂತ್ರವನ್ನು ಉಪಯೋಗಿಸುವ ಅರ್ಥಧಾರಿಯೇನೋ ಗೆಲ್ಲಬಹುದು, ಆದರೆ “ಪ್ರಸಂಗ” ಸಾಯುವುದು.

ಹಲವು ಅರ್ಥಧಾರಿಗಳೂ, ಪ್ರೇಕ್ಷಕರೂ ತರ್ಕನೈಪುಣ್ಯವನ್ನೇ ಯಕ್ಷಗಾನದ ಮಾತುಗಾರಿಕೆಯ ಏಕೈಕ ಮುಖ್ಯಾಂಶವಾಗಿ, ನಿಕಷವಾಗಿ ತಿಳಿಯುತ್ತಾರೆ. ಮಾತಿನಲ್ಲಿ ಯಾರು ಗೆದ್ದರು ಎನ್ನುವುದೇ ಮಾನದಂಡವಾಗಿ ಬಳಸಲ್ಪಡುತ್ತದೆ. ಏನಕೇನ ಪ್ರಕಾರೇಣ ಇದಿರಾಳಿಯ ಬಾಯಿಕಟ್ಟಿಸುವ ಮಾತುಗಾರನಿಗೆ ಪ್ರೇಕ್ಷಕರ ಬೆಂಬಲ ದೊರೆಯುವುದೂ ಉಂಟು.

ಯಕ್ಷಗಾನದ ಮಾತುಗಾರಿಕೆಯಲ್ಲಿ, ಬೇಕೆನಿಸಿದಲ್ಲಿ, ವಿವಾದಕ್ಕೂ ಧಾರಾಳ ಅವಕಾಶವಿದೆ. ಕೆಲವು ಬುದ್ಧಿವಂತರೆನಿಸಿಕೊಂಡವರು ಎಲ್ಲಾ ಪ್ರಸಂಗಗಳಲ್ಲಿ ಹಲವಾರು ವಾದಗಳನ್ನು ಸೃಷ್ಟಿಸಿದ್ದಾರೆ. ಗಂಡ - ಹೆಂಡಿರ ಪಾತ್ರಗಳಲ್ಲಿ, ಅಣ್ಣ - ತಮ್ಮಂದಿರ ಪಾತ್ರಗಳಲ್ಲಿ, ಹಾಗೆಯೇ ಹಲವಾರು 'ಸಹಪಾತ್ರ'ಗಳಲ್ಲೂ ರಂಗದಲ್ಲಿ ವ್ಯಗ್ರವಾದ ಪೈಪೋಟಿಯ ರೂಪದಲ್ಲಿ ಮಾತುಗಾರಿಕೆಯನ್ನು ಕಾಣುತ್ತೇವೆ. ವಾದ ಎಲ್ಲಿ ಬೇಡವೋ ಎಲ್ಲಿ ಸಲ್ಲದೋ ಅಲ್ಲಿಯೂ ಕೆಲವೊಮ್ಮೆ ಪ್ರೇಕ್ಷಕರು ವಾದವನ್ನು