ಈ ಪುಟವನ್ನು ಪ್ರಕಟಿಸಲಾಗಿದೆ
ಅರ್ಥಗಾರಿಕೆ ವಾದದ ಮಿತಿ

ಗಳೂ ಇವೆ. ಅದಕ್ಕೇನು ಮಾಡಲು ಸಾಧ್ಯ? ಇಂಥ ವಿಚಾರಗಳನ್ನೆತ್ತಬಾರದೆಂದಲ್ಲ ಆದರೆ ಅವನ್ನು ಜಾಗ್ರತೆಯಿಂದ ಸಂವಾದದಲ್ಲುರುಳಿಸಿ, ನಿಲುಗಡೆ ತಂದುಕೊಳ್ಳ ಬೇಕಾದುದೇ ಮಹತ್ವದ ವಿಚಾರ.
ಪುರಾಣಗಳು ವಾಸ್ತವಿಕ ಸಾಹಿತ್ಯವಲ್ಲ. ಅವು ರಮ್ಯಾದ್ಭುತ ಪ್ರಪಂಚಕ್ಕೆ ಸೇರಿದವುಗಳಾಗಿವೆ. ಅಲ್ಲಿಯ ಪ್ರತಿಯೊಂದು ಘಟನೆಗೂ ತರ್ಕಬದ್ದ ಕಾರ್ಯಕಾರಣ ಹುಡುಕುವುದು ತಪ್ಪು, ಹಾಗೆ ನೋಡಿದರೆ, ಶುದ್ಧ ತರ್ಕದ ಕಾರ್ಯಕಾರಣ ಭಾವ ಇಲ್ಲದಿರುವುದೇ ಪುರಾಣದ ಮುಖ್ಯ ಲಕ್ಷಣಗಳಲ್ಲಿ ಒಂದು. ಕಾರ್ಯಕಾರಣವನ್ನು ಮೀರಿದ “ದೈವಲೀಲೆ' ಪುರಾಣದ ಮುಖ್ಯ ಧರ್ಮ,
ಪುರಾಣದ ಹಲವು ಪಾತ್ರಗಳಿಗೆ ಉತ್ತರಿಸಲಾಗದ ದೌರ್ಬಲ್ಯಗಳಿವೆ; ಮೂಕತೆಗಳಿವೆ. ಇದಿರಾಳಿಯ ಬಾಯಿಯನ್ನು ಕಟ್ಟಲು ಇಂತಹ ದೌರ್ಬಲ್ಯಗಳನ್ನು ಹಿಡಿದು ಅಮುಕುವುದು ಯಕ್ಷಗಾನದ ಧರ್ಮವಲ್ಲ, ನಾಟಕಧರ್ಮವೂ ಅಲ್ಲ; ಔಚಿತ್ಯ ವೂ ಅಲ್ಲ. ಆದರೆ ಏನು ಮಾಡಲು ಸಾಧ್ಯ? ನಮ್ಮ ಅರ್ಥಗಾರಿಕೆ ಮಾತ್ರ ಇದನ್ನು ಗಮನಿಸದೆ ಇರುವುದುಂಟು.
ಯಾವುದೋ ಒಂದು ಪದ್ಯದಲ್ಲಿ ಯಾವುದೋ ಒಂದು ಆಧ್ಯಾತ್ಮಿಕ ಪಾರಿ ಭಾಷಿಕ-ಶಬ್ದ ದೊರೆತಾಗ ಅದರ ಬಗ್ಗೆ ತಾಸುಗಟ್ಟಲೆ ವಾದಿಸುತ್ತಾ ಕೂತರೆ ಅರ್ಥ ವಾಗದೆ, ನಿರರ್ಥವಾಗಿ, ಸಮಯದ ದುಂದುಗಾರಿಕೆಯೂ ಆದೀತು.
ಒಂದು ಪಾತ್ರಕ್ಕೆ ಬೇಕಾದ ವಿಷಯಗಳನ್ನು ಕಲೆಹಾಕಿ, ಇದಿರು ಪಾತ್ರದ ಹುಳುಕುಗಳನ್ನು ಕೂಡಿಸಿ, ಒಂದೊಂದಾಗಿ ಪುಂಖಾನುಪುಂಖ ಪ್ರಶ್ನೋತ್ತರ ಮಾಡುತ್ತ ಕೂತರೆ, ಅರ್ಥಗಾರಿಕೆ ಅಲ್ಲಿಗೇ ಮುಗಿಯಲಿಲ್ಲ. ಪ್ರಾಸಂಗಿಕ ಪದ್ಯ ಗಳು, ಪ್ರಸಂಗದ ರಚನೆ, ಅದಕ್ಕಿಂತಲೂ ಹೆಚ್ಚಾಗಿ ಪಾತ್ರಗಳ ಗಾತ್ರ ಪ್ರಮಾಣ ಗಳು ಎಷ್ಟು ಅವಕಾಶ ನೀಡುತ್ತವೆಯೋ, ಅಷ್ಟೇ ವಾದದ ಮೇರೆಯೂ ಇರುತ್ತದೆ.

ವಾದಕ್ಕೊಂದು ಉದ್ದೇಶ, ನಿಲುಗಡೆಯ ತಾಣ, ಮಾತಾಡುವ ಇಬ್ಬರಲ್ಲೂ ಮೊದಲೇ ಬೇಕು. ಇದಕ್ಕೆ ಪ್ರಸಂಗ ನಿಷ್ಠೆಯೂ ಅಗತ್ಯ, 'ಪ್ರಸಂಗ ಏನಾದರೇ ನಂತೆ! ಅದರ ವಿಚಾರ ನನಗೇಕೆ? ನಾನು ಪ್ರಶ್ನೆಗಳನ್ನು ಕೇಳಿ ಬಿಡುತ್ತೇನೆ” ಅನ್ನುವುದು ನ್ಯಾಯವಲ್ಲ. ದುಃಖದ ಸನ್ನಿವೇಶದಲ್ಲೋ, ಪಾತ್ರಗಳ ಅಂತಸ್ತಿನ ಕಾರಣದಿಂದಲೋ, ಅಥವಾ ಸನ್ನಿವೇಶದ ಬಿಗಿಯಿಂದಲೋ ಪ್ರಶ್ನೆ ಕೇಳಲಾಗದ ಸಂದರ್ಭಗಳು ಹಲವಿವೆ. ಕೆಲವೊಮ್ಮೆ ವಾದದಲ್ಲಿ ಸೋಲುವುದೇ ಪಾತ್ರ-ಚಿತ್ರಣಕ್ಕೆ ಹಾಗೂ ಪ್ರಸಂಗಕ್ಕೆ ಅವಶ್ಯ. ಆದರೆ ಹಲವು ಬಾರಿ ವಾದದ ಮಧ್ಯೆ ಪ್ರಸಂಗದ ಭಾವವೂ, ರಸವೂ, ಪ್ರಸಂಗ ಮಾಡಬೇಕಾದ ಒಟ್ಟು ಪರಿಣಾಮವೂ ದಿಕ್ಕು ಪಾಲಾಗು