ಈ ಪುಟವನ್ನು ಪ್ರಕಟಿಸಲಾಗಿದೆ
ಹಾಸ್ಯ ಮತ್ತು ಔಚಿತ್ಯ

ಬೃಹಸ್ಪತಿ, ಶುಕ್ರ, ಪುರೋಹಿತ, ಜ್ಯೋತಿಷಿ ಹಾಗೂ ಬ್ರಾಹ್ಮಣ ಇತ್ಯಾದಿ ಪಾತ್ರ ಗಳು ಯಾವತ್ತೂ ಹಾಸ್ಯಪ್ರಧಾನವಾಗಿಲ್ಲ. ಇವುಗಳಲ್ಲಿ ಹಲವು ದುಃಖ ಪ್ರಧಾನ ಹಾಗೂ ಗಂಭೀರ ಪಾತ್ರಗಳು. ಆದರೆ ಹಾಸ್ಯಗಾರರು ಈ ಪಾತ್ರಗಳನ್ನು ಅಭಿನ ಯಿಸಿ, ಮಾಮೂಲಿ ಹಾಸ್ಯಗಳನ್ನು ತುರುಕಿಸಿ, ಕತೆಯ ಪಾತ್ರದ ಗಂಟಲು ಹಿಚುಕು ವುದನ್ನು ಕಂಡರೆ, ತಲೆ ತಿರುಗುತ್ತದೆ. ಈ ಪಾತ್ರಗಳನ್ನು 'ಹಾಸ್ಯಗಾರ'ನ ಬದಲು ಇತರ ನಟರೇ ನಟಿಸಬೇಕು; ಅಥವಾ 'ಹಾಸ್ಯಗಾರನೆಂಬವನು ಯಾವಾಗಲೂ ಹಾಸ್ಯವೊಂದಕ್ಕಾಗಿಯೇ ರಂಗ ಪ್ರವೇಶ ಮಾಡುವವನೆಂಬ ನಂಬಿಕೆ ತೊಲಗಬೇಕು. ಬಾಹುಕ, ಬೃಹಸ್ಪತಿ, ಬ್ರಹ್ಮ ಮುಂತಾದ ಪಾತ್ರಗಳನ್ನು ಧರಿಸಿ, ಹಾಸ್ಯದ ಮಾತು ಗಳನ್ನಾಡುವುದು ಬರೇ ಕೀಳು ಮಟ್ಟದ ಮನೋರಂಜನೆಯೇ ಅಲ್ಲದೆ, ಎಂದೂ ಕಲೆ ಎನಿಸದು. ಅದು ಪುರಾಣ ಹಾಗೂ ರಂಗದ ಕೊಲೆಯಲ್ಲದೆ ಮತ್ತೇನು?
ಹಾಸ್ಯದ ಹೆಸರಲ್ಲಾಗುವ ಇನ್ನೊಂದು ಔಚಿತ್ಯಭಂಗ ಪ್ರಕಾರವಿದೆ. ಒಂದು ಪಾತ್ರ ಸ್ವಭಾವದಿಂದ ಹಾಸ್ಯಪ್ರಧಾನವಾಗಿದ್ದು ಅದರ ಸನ್ನಿವೇಶವು ಹಾಸ್ಯಪ್ರಧಾನ ವಾಗಿರದೆ, ಗಂಭೀರವಾಗಿರುವುದು. ಉದಾ: ಸ್ವರ್ಗಲೋಕದ 'ದ್ವಾರದೂತ', ಸ್ವರ್ಗಕ್ಕೆ ರಾಕ್ಷಸರ ಆಕ್ರಮಣವಾಗಿದೆ ಎಂದು ತಿಳಿಯೋಣ.ಆ ದೂತನು ಬಂದಿ ರುವ ರಾಕ್ಷಸರಲ್ಲಿ ಹಾಸ್ಯದ ಮಾತಾಡಬಹುದು, ಅವರನ್ನು ಗೇಲಿಮಾಡಲಿಕ್ಕಾಗಿ, ಆದರೆ ಈ ವರ್ತಮಾನವನ್ನು ದೇವಸಭೆಗೆ ವರದಿ ಮಾಡುವಾಗ ಅವನದನ್ನು ಗಂಭೀರ ವಾಗಿ ತಿಳಿಸದಿದ್ದರೆ ಹೇಗೆ? “ತಾನು ಸೇವಕ ಪಾತ್ರಧಾರಿ, ತಾನು ಮಾತಾಡುತ್ತಿರು ವುದು ರಾಜನಲ್ಲಿ, ರಾಜಸಭೆಯಲ್ಲಿ” - ಎಂಬ ಪ್ರಾಥಮಿಕ ರಂಗಜ್ಞಾನ, ಔಚಿತ್ಯ ಪ್ರಜ್ಞೆಗಳು ಕೂಡಾ ನಮ್ಮ ಹೆಚ್ಚಿನ ಹಾಸ್ಯನಟರಿಗೆ ಇಲ್ಲ ಎಂಬುದು ಖೇದಕರ.
'ರಾಜಾ ಕಾರ್ತವೀರ್ಯ'ನು ಜಮದಗ್ನಿಯ ಆಶ್ರಮಕ್ಕೆ ಹೋಗುತ್ತಾ ನಂದಿಟ್ಟುಕೊಳ್ಳೋಣ. ಅವನೊಂದಿಗೆ ಒಬ್ಬ ಕಿರಾತ ಮುಖ್ಯಸ್ಥನೋ, ಸಖನೋ ಇರುತ್ತಾನೆ. ಅವನು ಆಶ್ರಮದಲ್ಲಿ ಆಡುವ ಮಾತು, ಮಾಡುವ ಅಂಗವಿನ್ಯಾಸ ಎಬ್ಬಿಸುವ ಆವಾಂತರ ಕಂಡರೆ ರಾಜನ ಮರ್ಯಾದೆ ಉಳಿಯದು. “ಕೂಡಲೇ ಇಲ್ಲಿಂದ ಹೊರಡಿ” - ಎನ್ನಬೇಕು ಋಷಿ, ಇದು ಯಕ್ಷಗಾನದಲ್ಲಿರುವ ಹಾಸ್ಯದ ರೀತಿ.
'ಇಂದ್ರಜಿತು ಕಾಳಗ' ದಲ್ಲಿ ಮಾಯಾ ಸೀತೆಯ ಮರಣ ಸನ್ನಿವೇಶ, ಜಾಂಬವಂತ - ಹನುಮಂತರ ದುಃಖ ಇದರಲ್ಲಿ ಸಾ ಮಾನ್ಯವಾಗಿ ಜಾಂಬವಂತನ ಪಾತ್ರವು ಹಾಸ್ಯನಟರ ಪಾಲಿಗೆ ಬರುತ್ತದೆ. ಇಂತಹ ಕರುಣರಸ ಸಂದರ್ಭದಲ್ಲಿಯೂ ಜಾಂಬವಂತ 'ಹಾಸ್ಯ' ಮಾಡುವುದನ್ನು ಕಂಡರೆ, ಇದು 'ಯಕ್ಷಗಾನ ಆಟ'ವೋ, ಹುಚ್ಚರ ಸಂತೆಯೋ ಎಂಬ ಸಂಶಯ ಮೂಡುತ್ತದೆ.
ಬಬ್ರುವಾಹನ ಕಾಳಗದಲ್ಲಿ ಬಬ್ರು ವಾಹನ - ಅರ್ಜುನರ ಭೇಟಿಯು