ಈ ಪುಟವನ್ನು ಪ್ರಕಟಿಸಲಾಗಿದೆ

೧೪೪ |ಜಾಗರ

ಲಜ್ಜೆಗೇಡಿ, ಕೆಳಗಿಳಿ, ನಿನ್ನಲ್ಲಿ ಮರ್ಯಾದೆ ಎಂಬುದಿದೆಯೆ? (ಇತ್ಯಾದಿ)

ದೇವೇಂದ್ರ : ಎಲವೋ ನನ್ನನ್ನು ಗದರಿಸುತ್ತೀಯಾ?

ದೂತ  : ಹಾಗಲ್ಲ ಸ್ವಾಮಿ! ಅವರು ಹೇಳಿದ್ದನ್ನು ನಾನು ಅಭಿನಯಿಸಿದ್ದು.


ಹೀಗೆ ಶಬ್ದ ನಿಷ್ಟವಾಗಿ, ಅರ್ಥನಿಷ್ಟವಾಗಿ, ಸ್ವರನಿಷ್ಟವಾಗಿ ಹಾಗೂ ಅಭಿ ನಯ ನಿಷ್ಟವಾಗಿ ಹೊಮ್ಮುವ ಹಾಸ್ಯಗಾರನ ಹಲವು ಹಾಸ್ಯಗಳಿಗೆ ಇತರ ಸಹಪಾತ್ರ ಗಳ ಸಹಕಾರ, ಒತ್ತಾಸೆ ಬೇಕಾಗುತ್ತದೆ. ಇತರ ಪಾತ್ರಗಳ ಸಹಕಾರವಿಲ್ಲದೆ ಹಾಸ್ಯ ಗಾರನ ಮಾತಿಗೆ ಎಡೆ ಇಲ್ಲ. ಹಾಗಾಗಿ 'ಹಾ ಸ್ಯ ಗಾರ' ನ ಹಾಸ್ಯದ ಪ್ರಮಾಣ, ದಿಕ್ಕು, ಮಟ್ಟ ಇವು ಹಾಸ್ಯನಟ ನ ನ್ನೇ ಅವಲಂಬಿಸದೆ ಇತರರ ಪ್ರಶ್ನೆ, ಮತ್ತು ಮಾತಿನ ದಾರಿಯನ್ನು ಹೊ೦ದಿಕೊಳ್ಳುತ್ತವೆ. ಏಕೆ೦ದರೆ ಯಕ್ಷಗಾನವು ಆಶು ಭಾಷಣ ಮತ್ತು ಸಂಭಾಷಣೆಗಳುಳ್ಳದ್ದು. ಒಂದೇ ಪಾತ್ರವನ್ನು ಹತ್ತು ನಟರು ಹತ್ತು ಬಗೆಯಿಂದ ನಿರ್ವಹಿಸಬಲ್ಲರು.
ಹಾಸ್ಯಕ್ಕೆ ಅನುಕೂಲಿಸಿ, ಸಂಭಾಷಣೆ ಬೆಳೆಸುವುದಕ್ಕೆ 'ಹಾಸ್ಯಗಾರನನ್ನು ಮಾತಾಡಿಸುವುದು' ಅನ್ನುತ್ತಾರೆ. ಈ 'ಮಾತನಾಡಿಸುವವರು ( ಇತರ ನಟರು ) ಔಚಿತ್ಯವನ್ನು ಗಮನಿಸದೆ ಮಾತನಾಡಿಸಿದರೆ ಏನೇನೋ ಆಗುತ್ತದೆ. ಆಗ ಬರು ವುದು ನಗೆ ಅಲ್ಲ ಬೇಸರ.
ನಮ್ಮ ಆಟಗಳಲ್ಲಿ ಗಂಭೀರವಾದ ಸನ್ನಿವೇಶಗಳಲ್ಲಿ 'ಹಾಸ್ಯ' ಬಂದು ರಸ ಭಂಗ ಆಗುವುದು ಸಾಮಾನ್ಯ. ಆದುದರಿಂದ ಹಾಸ್ಯಕ್ಕೊಂದು ನಿಯಂತ್ರಣ ಅವಶ್ಯ. ಒಂದು ಸನ್ನಿವೇಶ ಹಾಸ್ಯದ್ದೇ ಇರಲಿ, ಆಗಲೂ 'ಹಾಸ್ಯಗಾರ' ಮತ್ತು ಸಹನಟರು ಈ ಕೆಳಗಿನ ಅಂಶಗಳ ಕುರಿತು ಯೋಚಿಸಬೇಕು.
೧ ಆ ಹಾಸ್ಯ ಯಾವ ಪ್ರಮಾಣದ್ದು ? ಯಾವ ಮಟ್ಟದ್ದು ?
೨ ಆ ಸನ್ನಿವೇಶದಲ್ಲಿ ಒಳಗೊಂಡ ಪಾತ್ರಗಳು ಯಾವುವು? ಅವುಗಳ ಗುಣಧರ್ಮ ಹಾಗೂ ಯೋಗ್ಯತೆ ಏನು?
೩ ಅಲ್ಲಿ ಬರಬಹುದಾದ ಪ್ರಶೋತ್ತರಗಳು ಆ ಪಾತ್ರಗಳಿಗೆ ಹೇಗೆ ಶೋಭೆಯ ನ್ನೀಯುತ್ತವೆ?
೪ ಕಥೆಯ ಕಾಲ ಹಾಗೂ ಸ್ವರೂಪಕ್ಕೆ ಆ ಹಾಸ್ಯ ಹೊಂದಿಕೆಯಾಗುವುದೆ?
೫ ಎಷ್ಟರ ಮಟ್ಟಿಗೆ ಅದನ್ನು ಬೆಳೆಯಿಸಬಹುದು? ಇತ್ಯಾದಿ. ಈ ಮೇಲಿನ ಸಂಗತಿಗಳನ್ನು ನಮ್ಮ ರಂಗವ್ಯವಸಾಯಿಗಳು ಯೋಚಿಸಿ