ಈ ಪುಟವನ್ನು ಪ್ರಕಟಿಸಲಾಗಿದೆ

೮ | ಜಾಗರ

ಕಥೆ ಕಲ್ಪಿತವಾಗಿದ್ದರೂ ಅಡ್ಡಿಯಿಲ್ಲ. ಅದರಲ್ಲಿ 'ಪೌರಾಣಿಕ ರೂಪ' ಇರಬೇಕು. ಮೂಲೆ ಪಾಲಾಗಿ ಬಿದ್ದಿರುವ ಪ್ರಸಂಗಗಳು ಹಲವಿದ್ದು, ಅವು ಪ್ರಯೋಗಕ್ಕೆ ಬರಲು ಅರ್ಹವಾಗಿವೆ. ಯಕ್ಷಗಾನ ರಂಗ ಭೂಮಿಗೂ, ಪೌರಾಣಿಕ ಆವರಣಕ್ಕೂ ಭಂಗ ಬಾರದೆ ಆಧುನಿಕ ವಿಚಾರ, ತರ್ಕ, ಯುಗವಾಣಿಯೆನಿಸಿದ ಮಾನವ ಧರ್ಮದ ತಿರುಳು, ಸಮಾನತೆ ಮೊದಲಾದ ತತ್ವಗಳನ್ನೂ, ಬದುಕಿನ ಬಗ್ಗೆ ಹೊಸ ಚಿಂತನ, ಚಿತ್ರಣ ಗಳನ್ನೂ ಕೊಟ್ಟು ಪುರಾಣಕ್ಕೆ ಹೊಸ ಅರ್ಥ ನೀಡುವ ಯತ್ನ ಆಗಬೇಕು. ಇದು ಸುಧಾರಣೆಯ ಸಾಹಿತ್ಯಕ ಅಂಗದ ಮುಖ್ಯ ಭೂಮಿಕೆಯಾಗಬೇಕು. (ಉದಾ: ಅಮರೇಂದ್ರ ಪದ ವಿಜಯಿ) ಪೌರಾಣಿಕ ಮೌಲ್ಯಗಳಿಗೆ ಹೊಸ ತಿರುವು ಇಂದಿನ ಆವಶ್ಯಕತೆ.

ಹಿಮ್ಮೇಳದಲ್ಲಿ ಹಲವು ಸಮಸ್ಯೆಗಳಿವೆ. ಯಕ್ಷಗಾನದಲ್ಲಿ ಕೆಲವೇ ರಾಗಗಳ ಬಳಕೆ ಇದ್ದು ಇನ್ನಷ್ಟು ರಾ ಗ ಗ ಳ ನ್ನು ಯಕ್ಷಗಾನ ಶೈಲಿಗೆ ಒಗ್ಗಿಸಿ ಹಾಡಲು ಭಾಗವತರು ಮುಂದಾಗಬೇಕು. ಆದರೆ, ದಕ್ಷಿಣಾದಿಯನ್ನು ಯಕ್ಷಗಾನದಲ್ಲಿ ಹಾಡುವುದು ನಮ್ಮ ಶೈಲಿಯ ಸ್ವತಂತ್ರತೆಗೆ ಕೊಡಲಿ ಏಟಿನಂತೆ. ಅಕ್ಷರಗಳು, ಶಬ್ದಗಳು ಸ್ಪಷ್ಟವಾಗಿ ಕೇಳಿಸುವಂತೆ ಹಾಡುವುದು ಒಂದು ಮುಖ್ಯ ಧರ್ಮ, ಭಾವಾಭಿವ್ಯಕ್ತಿ, ಅಭಿನಯಕ್ಕೆ ಪೂರಕತೆ, ಪದಚ್ಛೇದಗಳಲ್ಲಿ ಸೂಕ್ಷ್ಮತೆಗೆ ಎಷ್ಟೋ ಅವಕಾಶ ಇದೆ. ಲಯ ನಿರ್ಣಯ, ರಾಗಗಳ ಬಳಕೆ ಇವುಗಳ ವೈಶಾಲ್ಯ, ಸೂಕ್ಷ್ಮತೆ ಗಳು ಬರಬೇಕು.

ಹಿಮ್ಮೇಳವು ಮುಮ್ಮೇಳವನ್ನು ನುಂಗಬಾರದು, ಅದು 'ಹಿಮ್ಮೇಳವೇ. ಭಾವಕ್ಕೂ, ನೃತ್ಯಕ್ಕೂ ಚಲನೆಗೂ ಅನುಸರಿಸಿ ವಾದನಗಳನ್ನು ಬಳಸಲು ನಾವು ಬಹಳಷ್ಟು ಸುಧಾರಣೆ ಮಾಡಬೇಕಾಗಿದೆ. ದಕ್ಷಿಣಾದಿ ಮೃದಂಗ ನಮ್ಮ ರಂಗ ಭೂಮಿಯ ನಾದರೂಪಕ್ಕೆ ಭಂಗ ತರುತ್ತದೆ. ಈಗ ಬಂದಿರುವ 'ಅರೆಮೃದಂಗ' ಒಂದು ಸ್ವಾಗತಾರ್ಹ ಯತ್ನ, ಎಲ್ಲ ಶ್ರುತಿಗಳಿಗೂ ಮದ್ದಲೆ, ಚೆಂಡೆಗಳ ರಚನೆ ಆಗಬೇಕು. ಕಪ್ಪು ಮೂರರ ಶ್ರುತಿಯ ಚೆಂಡೆಯನ್ನೆ ಎಲ್ಲ ಶ್ರುತಿಗಳಿಗೂ ಬಾರಿ ಸುವ ಕ್ರಮ ಹೋಗಬೇಕು.

ಶೈಲಿಯನ್ನು ಉಳಿಸಿ ನಾವೀನ್ಯವನ್ನು ತರುವಲ್ಲಿ ಅನೇಕ ಒಳ್ಳೆಯ ಪ್ರಯೋಗಗಳನ್ನು ಮಾಡಿದ ಕಲಾವಿದರಿದ್ದಾರೆ. ಆದರೆ ಇದರಲ್ಲಿ 'ನೂರು ತೂತಿಗೆ ಮೂರು ಹೊಲಿಗೆ' ಎಂಬ ಹಾಗಾಗಿದೆ. ಶೈಲಿಯನ್ನು ಉಳಿಸಿ, ಆರೋಗ್ಯಕರವಾದ ಸುಧಾರಣೆ ಮಾಡುವಲ್ಲಿ ಬಡಗುತಿಟ್ಟು ಮತ್ತು ಉತ್ತರ ಕನ್ನಡದ ರ೦ಗಭೂಮಿ ಹೆಚ್ಚು ಯಶಸ್ವಿಯಾಗಿದೆ.

ಯಕ್ಷಗಾನವೆಂಬುದು ಒಂದು ಅವಾಸ್ತವ ರಮ್ಯಾದ್ಭುತ (Fantasy)