ಈ ಪುಟವನ್ನು ಪ್ರಕಟಿಸಲಾಗಿದೆ

೧೪ / ಜಾಗರ

ಸ್ವಾತಂತ್ರ್ಯ ವಹಿಸಬಹುದಾದ ಬೇರೆ ರಂಗಗಳೂ ಕಲಾವಿದನಿಗೆ ಇದ್ದೇ ಇವೆಯಷ್ಟೇ? ಎಲ್ಲ ಹೊಸದನ್ನೂ ಯಕ್ಷಗಾನದ ಮೂಲಕವೇ ಅಭಿವ್ಯಕ್ತಿಸ ಬೇಕಾದ ಅನಿವಾರ್ಯತೆ ಇಲ್ಲವಷ್ಟೇ?

ಯಕ್ಷಗಾನದ ಯಕ್ಷಗಾನತ್ವವನ್ನು, ಅದರ ಕಲಾ ಮೌಲ್ಯ ಕ್ಕಾಗಿ, ಸೌಂದಯಂಶಗಳಿಗಾಗಿ ರಕ್ಷಿಸಿ, ಅದರ ಮಿತಿಯಲ್ಲಿ ನೂತನ ಆವಿಷ್ಕಾರಗಳನ್ನು ಮಾಡುವಲ್ಲಿ ಸೃಷ್ಟಿಶೀಲ ಕಲಾವಿದ, ಕಲಾಭಿಜ್ಞ, ವಿಮರ್ಶಕ - ಈ ಮೂವರಿಗೂ ನಿಜವಾದ ಪಂಥಾಹ್ವಾನ ಇದೆ. ಅದು ತಾಳ್ಮೆಯ ಸಮನ್ವಯವನ್ನ ಪೇಕ್ಷಿಸುವ ಕೆಲಸ. ಅಲ್ಲ ಮೊದಲು ಬೇಕಾಗಿರುವುದು ಯಕ್ಷಗಾನದ ಶೈಲಿಯ ಬಗೆಗಿನ ಪ್ರಾಮಾಣಿಕ ನಿಷ್ಠೆ, ಗೌರವ, ಶೈಲಿಯ ಆವಜ್ಞೆಯಾಗಲಿ, ಅಜ್ಞಾನವಾಗಲಿ ಶ್ರೀಮಂತ ಕಲಾ ಸಂಪ್ರದಾಯವೆಂಬುದನ್ನು - ಸುಧಾರಣೆಗಾಗಿ ಬಲಿ ಕೊಡುವ ದುರಂತಕ್ಕೆ ಕಾರಣವಾದೀತು.



ರಂಗವೈಖರಿ: ಮಾಂಬಾಡಿ ನಾರಾಯಣ ಭಾಗವತ ಅಭಿನಂದನಾ ಗ್ರಂಥ ಇದರಲ್ಲಿ ಪ್ರಕಟಿತ

ಪ್ರಕಾಶಕರು: ಸನ್ಮಾನ ಸಮಿತಿ ಮಿತ್ತನಡ್ಕ ಕರೋಪಾಡಿ 574 280 ದ ಕ