ಈ ಪುಟವನ್ನು ಪ್ರಕಟಿಸಲಾಗಿದೆ

೨೪ | ಜಾಗರ
ಕನ್ನಡ ಕಲೆಯಾದ ಯಕ್ಷಗಾನ ಹುಟ್ಟಿ ಬೆಳೆದಿರುವುದು ಅಸಂಭವ. ಹಾಗೇ ಉತ್ತರ ಕನ್ನಡದ ತಿಟ್ಟು ಈಗ ತೋರಿಸುವ ಅಭಿನಯ ಪ್ರೌಢಿಮೆ, ಪ್ರಯೋಗದ ಸೂಕ್ಷ್ಮತೆ, ಮೂಲರೂಪದಲ್ಲಿ ಇದ್ದಿರಲಾರದು. ಹಾಗಾಗಿ ಈಗಿನ ಬಡಗುತಿಟ್ಟು ಯಕ್ಷಗಾನದ ಹಿಂದಣ ರೂಪಕ್ಕೆ ಹೆಚ್ಚು ನಿಕಟ ಎನ್ನಬಹುದು.
ಬಡಗಿನ ಎರಡೂ ತಿಟ್ಟುಗಳಲ್ಲಿ ಭಾಗವತನು ತಾಳಧಾರಿಯಾದರೆ, ತಂಕಿ ನಲ್ಲಿ ಜಾಗಟೆ ಹಿಡಿಯುತ್ತಾನೆ. ಜಾಗಟೆಯನ್ನು ಎತ್ತಿ ಹೊಡೆಯುವಾಗ, ಅದರ ನಾದ ಗ೦ಭೀರವಾಗಿ, ಚೆಂಡೆ ಮದ್ದಳೆಗಳಿಗೆ ಎರಕವಾಗಿ ಬರುತ್ತದೆ. ಆದರೆ, ಕೆಳಗಿಟ್ಟು ಹೊಡೆಯುವಾಗ ಅದರ ಸ್ವರ ಅಷ್ಟು ಸುಖವಾಗಿಲ್ಲ. ಹಿಂದೆ ತೆಂಕು ಬಡಗು ಗಳಲ್ಲಿ ಒಂದೇ ತೆರನ ಮದ್ದಳೆ ಬಳಕೆಯಲ್ಲಿತ್ತು. ಈಗ ಬಡಗಿನಲ್ಲಿ ಚಿಕ್ಕದಾದ “ಏರು ಮದ್ದಲೆ' ಬಳಕೆ ಹೆಚ್ಚು. ಉತ್ತರ ಕನ್ನಡದಲ್ಲಿ ದೊಡ್ಡ ಗಾತ್ರದ ಮದ್ದಲೆ ಯೇ ಬಳಕೆ. ಬಡಗಿನ ಮದ್ದಲೆಗಳ ಎಡಭಾಗಕ್ಕೆ ಅನ್ನ ಯಾ 'ಬೋನ' ಇದ್ದರೆ ತೆಂಕಣ ಮದ್ದಲೆಗೆ 'ಕರ್ಣ' ಇರುತ್ತದೆ. ಇದೀಗ ದಕ್ಷಿಣಾದಿ ಪದ್ಧತಿಯ ಮೋಹ ದಿಂದ, ತೆಂಕಿನಲ್ಲಿ ಮೃದಂಗ ಬಳಕೆಯಲ್ಲಿದ್ದು ಇದು ಯಕ್ಷಗಾನ ಪದ್ಧತಿಯ ನುಡಿತ ಗಳಿಗೆ ಒದಗುವುದಿಲ್ಲ. ಯಕ್ಷಗಾನ ನೃತ್ಯಕ್ಕಾಗಲಿ, ಚೆಂಡೆ ಜಾಗಟೆಗಳ ನಾದಕ್ಕಾಗಲಿ ಎರಕವಾಗಿ ನುಡಿಯದೆ ಬೇರಾಗಿ ಕೇಳುತ್ತದೆ. ಆದರೆ ತೆಂಕಿನಲ್ಲಿ ಬಳಕೆಗೆ ಬಂದಿರುವ ಒಂದು ಬಗೆಯ ಅರೆ ಮೃದಂಗ' (ಮೃದಂಗ - ಮದ್ದಲೆಗಳ ಮಧ್ಯದ ರೂಪ) ಒಂದು ಒಳ್ಳೆಯ ಪ್ರಯೋಗವೆಂದು ಅನುಭವದಿಂದ ಕಂಡು ಬಂದಿದೆ.
ಬಡಗಿನ ಚೆಂಡೆ, 'ತಾಸೆ' ಎಂಬ ವಾದನದ ಸುಧಾರಿತ ರೂಪವೆನ್ನುತ್ತಾರೆ. ಇದನ್ನು ಬಾರಿಸಲು ನೀಟಾದ ಬೆತ್ತದ ಕೋಲುಗಳನ್ನು ಬಳಸುತ್ತಾರೆ. ತೆಂಕಣ ಚೆಂಡೆ ಈ ಕಡೆಯ ದೇವಾಲಯಗಳ ಚೆಂಡೆಯಂತೆ ಇದ್ದು, ಅದನ್ನು ಬಾರಿಸಲು ತುದಿ ಬಗ್ಗಿರುವ ಮರದ ಕೋಲುಗಳನ್ನು ಬಳಸುವರು. ತೆಂಕಣ ಚೆಂಡೆ ಮಧುರವೂ, ಗಂಭೀರವೂ ಆದ ನಾದದಿಂದ ಕೂಡಿದ ಒಂದು ಉತ್ಕೃಷ್ಟವಾದ್ಯ, ತೆಂಕಿನಲ್ಲಿ ದೊಡ್ಡ ಚಕ್ರತಾಳವನ್ನು ಬಳಸಿ, ಚೆಂಡೆಯ ನಾದಕ್ಕೆ ಹೆಚ್ಚಿನ ಮೆರುಗು ಕೊಡುತ್ತಾರೆ.
ಯಕ್ಷಗಾನದಲ್ಲಿ ಬಳಸುವ ರಾಗಗಳಲ್ಲಿ ದಕ್ಷಿಣಾದಿ ರಾಗಗಳೇ ಹೆಚ್ಚು. ಹಿಂದುಸ್ತಾನೀ ರಾಗಗಳ ಬಳಕೆ ಬಡಗಿನಲ್ಲಿ ಹೆಚ್ಚು. ತೆಂಕಿನ ಹಾಡಿಕೆ, ಹೆಚ್ಚಾಗಿ ಪದ್ಯದ ಕೊನೆಗೆ ತಾರಷಷ್ಟದಲ್ಲಿ ನಿಂತರೆ, ಬಡಗಿನಲ್ಲಿ ಮಧ್ಯ ಸ್ಥಾಯಿ ಪಂಚಮ ಯಾ ಷಡ್ವದಲ್ಲಿ ನಿಲ್ಲಿಸುತ್ತಾರೆ. ಹಾಡಿನ ಮಧ್ಯೆ ರಾಗವಿನ್ಯಾಸ, ತಾಳವಿನ್ಯಾಸದ ಪದ್ದತಿ ಬಡಗಿನಲ್ಲಿ ವಿಶಿಷ್ಟ.
ತೆಂಕುತಿಟ್ಟಿನಲ್ಲಿ ಬಳಸುವ ಬಿಡ್ತಿಗೆ (ಪದ್ಯದ ಮೊದಲ ಚರಣದ ನಂತರ