ಈ ಪುಟವನ್ನು ಪ್ರಕಟಿಸಲಾಗಿದೆ

೪೪ / ಜಾಗರ

ಬಲು ದೊಡ್ಡ ಖಾಯಿಲೆ. ಇದರೊಂದಿಗೆ ಮಾರುಕಟ್ಟೆಯಲ್ಲಿ ಸಿಗುವ ಎಲ್ಲಾ ಬಗೆಯ ವಸ್ತುಗಳು, ಬಣ್ಣಗಳು, ಕಣ್ಣುಕಟ್ಟುವ ನೈಲೆಕ್ಸ್, ಟೈಂಕಲ್‌ಗಳೂ ಬಳಕೆಗೆ ಬಂದುವು.ವರ್ಣ ಸಂಯೋಜನೆಯ ತತ್ವಗಳು ಗಾಳಿ ಪಾಲಾದುವು.

3 ಮದ್ದಲೆಯ ಸ್ಥಾನದಲ್ಲಿ ದಕ್ಷಿಣಾದಿ ಪದ್ಧತಿಯ ಮೃದಂಗವೂ, ಯಕ್ಷಗಾನದ ಭಾಗವತಿಕೆಗಾಗಿ ದಕ್ಷಿಣಾದಿ ಗಾಯನ ಪದ್ಧತಿಯೂ ಅಲ್ಲಲ್ಲಿ ಬಳಕೆಗೆ ಬಂದಿದೆ.

4 ಆಟದ ಆಕರ್ಷಣೆ ಹೆಚ್ಚಿಸಲೆಂದು 1960ರ ದಶಕದಲ್ಲಿ ಆಟದ ಕಥಾಭಾಗ ಆರಂಭಕ್ಕೆ ಮೊದಲು ಭರತನಾಟ್ಯ, ಕರಗ ನೃತ್ಯ, ಸಂಗೀತ ಕಚೇರಿಗಳನ್ನು ಕೆಲವು ಮೇಳಗಳು ಪ್ರಯೋಗಿಸಿದುವು. ಈಗ ಅವನ್ನು ಕೈಬಿಡಲಾಗಿದೆ.

5 ಹಿಂದೆ ಜೋಡಾಟಗಳೆಂದರೆ ಕಲಾವಿದರಿಗೂ, ಜನರಿಗೂ ತುಂಬಾ ಆಸಕ್ತಿ. ಜೋಡಾಟಗಳಲ್ಲಿ ಸ್ಪರ್ಧೆ, ಜಗಳಗಳು ಸರ್ವಸಾಮಾನ್ಯ. ಅವು ಒಮ್ಮೆ ಮರೆಯಾಗಿದ್ದುವು. 1955-65ರ ಅವಧಿಯಲ್ಲಿ ಪುನಃ ಜೋಡಾಟಗಳ ಭರ.ಜೋಡಾಟ ವಷ್ಟೆ ಅಲ್ಲ. ಮೂರು ನಾಲ್ಕು ಮೇಳಗಳು ಒಂದೇ ಕಡೆ ಆಟ ಆಡಿದ ಸಂದರ್ಭಗಳೂ ಇವೆ. ಇತ್ತೀಚೆಗೆ ಸಾಲಿಗ್ರಾಮ - ಸುರತ್ಕಲ್ಲು ಮೇಳಗಳೂ, ಬಡಗು-ತೆಂಕು ಜೋಡಾಟ ಆಡಿದ್ದುವು. ಜೋಡಾಟವನ್ನು ಕಲೆ ಎಂದು ಒಪ್ಪಿಕೊಳ್ಳುವುದು ಕಷ್ಟವಾಗುತ್ತದೆ.

6 ಶ್ರೀ ಕೆ ವಿಠಲ ಶೆಟ್ಟರು ಮಂಗಳೂರಲ್ಲಿ ಟ್ರಾನ್‌ಫರ್ - ಸೀನು ಸೀನರಿಗಳುಳ್ಳ ಆಟಗಳನ್ನೂ, ರಾಜರಾಜೇಶ್ವರಿ ಮೇಳದಲ್ಲಿ ಅರ್ಧರಾತ್ರಿ ತೆಂಕು - ಆಟಗಳನ್ನೂ ನಡೆಸಿದ್ದಾರೆ. ಒಂದೇ ಕಥೆಯಲ್ಲಿ ತೆಂಕು - ಬಡಗು ವೇಷಗಳನ್ನು ಸೇರಿಸಿ ಆಟ ನಡೆಸಿದ್ದೂ ಇದೆ. (ತೆಂಕು-ಬಡಗು ಶೈಲಿಗಳನ್ನು ಬಲ್ಲ ಮರವಂತೆ ನರಸಿ೦ಹ ದಾಸ್ ಭಾಗವತರು ಈ ಆಟಗಳ ಭಾ ಗ ವ ತ ರು.) [ಈ ಆಟಗಳಿಂದಲೂ ಮಂಗಳೂರು ಪುರಭವನದಲ್ಲಿ ನಡೆದ ಇಂತಹ ಪ್ರದರ್ಶನಗಳಿಂದಲೂ, ಬಡಗಿನ ಕಲಾವಿದರಿಗೆ ಇನ್ನೊಂದು ತಿಟ್ಟಿನ ಬಗೆಗೆ ಪರಿಚಯ ಬೆಳೆಯಲು ಸಹಕಾರಿಯಾಯಿತು.]

7 ರಂಗಸ್ಥಳಗಳು ಎರಡು. ಕತೆ ಒಂದೇ. ಆಟ ಒಂದೇ. ಹಿಮ್ಮೇಳಗಳು ಮಾತ್ರ ಎರಡು, ವಿಶೇಷವಾಗಿ 'ಕುರುಕ್ಷೇತ್ರ' ಪ್ರಸಂಗ, ಪಾಂಡವ - ಕೌರವ ಪಕ್ಷಗಳಿಗೆ ಬೇರೆ ಬೇರೆ ಹಿಮ್ಮೇಳ, ಇಂತಹ ಪ್ರಯೋಗಗಳೂ ಆಗಿವೆ. ಇದಕ್ಕೂ ಶ್ರೀ ವಿಠಲಶೆಟ್ಟರೇ ಮೊದಲಿಗರು. ಈಗ ಅಮೃತೇಶ್ವರಿ ಮೇಳದಲ್ಲಿ ದ್ವಂದ್ವ ಹಿಮ್ಮೇಳ ಇದೆ. ಡಾ|ಕಾರಂತರ 'ಯಕ್ಷರಂಗಕ್ಕೂ ಇಬ್ಬರು ಭಾಗವತರು.