ಈ ಪುಟವನ್ನು ಪ್ರಕಟಿಸಲಾಗಿದೆ

೪೬ | ಜಾಗರ
13 ಬರಿಯ ನೃತ್ಯದಿಂದಲೆ ಕತೆಯ ಕೆಲವು ಅಂಶಗಳನ್ನು ತೋರಿಸುವ ಪದ್ದತಿ ಕರ್ನಾಟಕ ಮೇಳದಲ್ಲಿ ಭಾಗವತ ಶ್ರೀ ದಾಮೋದರ ಮಂಡೆಚ್ಚರ ದಿಗ್ದರ್ಶನದಿಂದ ಬಂದಿದೆ. ಇದೊಂದು ಶ್ಲಾಘ್ಯ ಯತ್ನ.
14 ಅನೇಕ ಹೊಸ ಪ್ರಸಂಗಗಳು ಬಳಕೆಗೆ ಬಂದಿವೆ. ಕೋಟಿ ಚೆನ್ನಯ, ತುಳು ನಾಡಸಿರಿ, ಬೆಂಗ್‌ದ ಬಾಲೆನಾಗಿ, ರಾಣಿ ಕಿನ್ಯಗ, ಕೋಟಿ ಚೆನ್ನಯ, ತುಳು ಬೈಕಾಡ್ಡಿ ಪ್ರತಾಪ, ಪಂಜುರ್ಲಿ ಪ್ರತಾಪ, ಅಬ್ಬಕ್ಕ, ಕಾಂತುಕಬೇದಿ, ಮಾಯದ ದೈವ, ಧೂಮಕೇತು, ಸೊರ್ಕುದ ಸಿರಿಗಿಂಡೆ, ಮುಂತಾದ ತುಳು ಪ್ರಸಂಗಗಳು ಬಾಕ್ಸ್ ಆಫೀಸಿನಲ್ಲಿ ಭಾರೀ ಯಶಸ್ಸನ್ನು ಗಳಿಸಿದುವು. ಯಕ್ಷಗಾನದ ದೃಷ್ಟಿಯಿಂದ ಇವು ಯಕ್ಷಗಾನಕ್ಕೆ ಬಂದ ಆಘಾತಗಳು.'ತುಳು' ಭಾಷೆಯವು ಎಂಬ ಕಾರಣದಿಂದಲ್ಲ, ಅವನ್ನು ಪ್ರಯೋಗಿಸಿದ ರೀತಿ, ಯಕ್ಷಗಾನದ ಆವರಣಕ್ಕೆ ತೀರ ವ್ಯತಿರಿಕ್ತವಾದದ್ದು ಎಂಬುದರಿಂದ ಈ ಮಾತು ಬರೆದಿದ್ದೇನೆ.
ಜತೆಗೇ ಬಪ್ಪನಾಡು ಕಣ್ವಪುರ ; ತಿರುಪತಿ, ಧರ್ಮಸ್ಥಳ ಮುಂತಾದ ಕ್ಷೇತ್ರ ಚರಿತ್ರೆಗಳೂ ಬಂದುವು. ಇವು ಅರ್ಧ ಪೌರಾಣಿಕ ಪ್ರಸಂಗಗಳು. ಇವು ಪೌರಾಣಿಕವೆಂಬ ಭ್ರಮೆಯನ್ನು ಹುಟ್ಟಿಸುವ ಎಡೆಬಿಡಂಗಿ ಪ್ರಸಂಗಗಳು. ಇವುಗ ಳೊಂದಿಗೇ ಕನ್ಯಾಕುಮಾರಿ, ವಿ ನಾಯಕ ವಿಜಯ, ರಾ ಜಾ ಹೈ ಹ ಯ, ವಿಕ್ರಮೋರ್ವಶೀಯ, ಓಂ ಮಾಯಾ ಲೀಲಾ, ಯಕ್ಷಲೋಕ ವಿಜಯ, ರಾಜಾ ಪರೀಕ್ಷಿತ, ವೀರ ಚಂದ್ರ ಧ್ವಜ - ಮುಂತಾದ ಪೌರಾಣಿಕ ಕತೆಗಳೂ ಬಂದುವು. ಈ ಪ್ರಯತ್ನ ಯಕ್ಷಗಾನದ ಉಳಿವಿನ ಬಗ್ಗೆ ಭರವಸೆ ಹುಟ್ಟಿಸಿತು.
15 ಯಕ್ಷಗಾನದ ಆವರಣಕ್ಕೆ, ಅದರ ಸ್ವರೂಪಕ್ಕೆ ಭಂಗವಾಗದಂತೆ, ಪೌರಾಣಿಕ ವಲ್ಲದ ಪ್ರಸಂಗಗಳನ್ನೂ ಯಶಸ್ವಿಯಾಗಿ ಪ್ರಯೋಗಿಸಬಹುದೆಂದು ತೋರಿಸಿದ ಇನ್ನೊಂದು ಬಗೆಯ ಪ್ರಸಂಗಗಳೂ ಬಂದುವು. ಉದಾ; ಭಾಸವತಿ, ಧರ್ಮವಿಜಯ ರಾಜಮುದ್ರಿಕಾ, ವಸಂತಸೇನೆ, ಕಾಳಿದಾಸ, ಯಕ್ಷಲೋಕ ವಿಜಯ, ಸ್ವಪ್ನ ವಾಸವ ದತ್ತೆ, ಮಹಾಶ್ವೇತೆ, ಚಂದ್ರಗುಪ್ತ, ಇತ್ಯಾದಿ. ಇವುಗಳ ಕತೆ ಪುರಾಣಗಳದ್ದಲ್ಲ. ಆದರೂ ಇವು ಯಕ್ಷಗಾನದ ಕಲ್ಪನೆಗೆ ಹೋಲಿಕೆಯಾಗುತ್ತದೆ. ಯಕ್ಷಗಾನಕ್ಕೆ ಪೌರಾ ಣಿಕ ಪ್ರಸಂಗಗಳೇ ಆಗಬೇಕೆಂದಿಲ್ಲ. ಪೌರಾಣಿಕ ಪ್ರಸಂಗವನ್ನಾಡಿದೊಡನೆಯೇ, ಎಲ್ಲ ಸರಿಯಾಯ್ತು ಅನ್ನುವಂತೆಯೂ ಇಲ್ಲ. ಮುಖ್ಯವಾಗಿ ಯಕ್ಷಗಾನದ ವೇಷ, ನೃತ್ಯ, ರಂಗತಂತ್ರದ ಸ್ವಭಾವಕ್ಕೆ ಪ್ರಸಂಗ ಹೊರತಾಗಬಾರದು.
16 ಇತ್ತೀಚೆಗೆ ಹೊಸ ಪ್ರಸಂಗಗಳಲ್ಲಿ ಕಂಡು ಬಂದಿರುವ ಇನ್ನೊಂದು ಮುಖ ಅಂದರೆ ಹಳೆಯ ಪ್ರಸಂಗಗಳ ಹೊಸರೂಪದ ಸಂಯೋಜನೆ. ಉದಾ: ಸಂಪೂರ್ಣ ರಾಮಾಯಣ, ದಶಾವತಾರ, ತ್ರಿಜನ್ಮ ಮೋಕ್ಷ, ಚತುರ್ಜನ್ಮ ಮೋಕ್ಷ. ಗೀತೋಪ