ಈ ಪುಟವನ್ನು ಪ್ರಕಟಿಸಲಾಗಿದೆ

೫೦ | ಜಾಗರ
ಪ್ರದರ್ಶನಗಳಿಗೆ ಇಂದು ಯಕ್ಷಗಾನ ಎಂಬ ಹೆಸರಿದೆ. ಇನ್ನು ಕೆಲವು ವರ್ಷ ಕಳೆ ದಾಗ, ಯಕ್ಷಗಾನ ಕಂಪೆನಿ ನಾಟಕದ ಒಂದು ಪ್ರತಿ ಆಗುವ ಭಯ ಇದೆ. ಹೆಚ್ಚಿನ ಕಲಾವಿದರು, ನಿರುಪಾಯರಾಗಿ ಸಂಸ್ಕೃತಿಯೊಂದಿಗೆ ಸಂಧಾನ ಮಾಡಿಕೊಂಡಿದ್ದಾರೆ. ಯಕ್ಷಗಾನದ ಎಲ್ಲ ಅಂಗಗಳ ಕೆಲವು ನಿರ್ದಿಷ್ಟ ಮೂಲ ಸೂತ್ರಗಳ ಅ೦ಗೀಕಾ ರ ಈಗ ಅಗದೀ ಜರೂರಿನ ಅವಶ್ಯಕತೆ. ಕಲಾವಿದರು, ಕಲಾಭಿಜ್ಞರು, ಮೇಳಗಳ ಮಾಲಕರು ಒಂದೆಡೆ ಸೇರಿ ಸಮಾಲೋಚಿಸಬೇಕು. ವೇಷಭೂಷಣ, ಹಿಮ್ಮೇಳ, ಪ್ರದರ್ಶನಗಳ ಬಗ್ಗೆ ಕೆಲವು ನಿರ್ಣಯಗಳನ್ನು ಕೈಕೊಂಡು ಅನುಷ್ಠಾನಕ್ಕೆ ತರಬೇಕು.
ಹಾಗೇ, ಯಕ್ಷಗಾನದ ಹಲವಂಶಗಳಲ್ಲಿ ಸುಧಾರಣೆ ಆಗಬೇಕು. ಸ್ತ್ರೀವೇಷ ಕಿರಾತ ಮುಂತಾದ ಹಲವು ವೇಷಗಳ ಪುನಾರಚನೆ ಅವಶ್ಯ. ಬಡಗುತಿಟ್ಟಿನಲ್ಲಿ ಪುನಾ ರಚನೆಯ ಕೆಲವು ಯಶಸ್ವಿಯತ್ನಗಳಾಗಿವೆ. ಆದರೂ ಬಡಗುತಿಟ್ಟು ಕೂಡಾ ಮೆಲ್ಲ ಮೆಲ್ಲ ದಾರಿಬಿಡಹತ್ತಿದೆ. [ತೆಂಕುತಿಟ್ಟಿನಲ್ಲಿ ಅಳಕೆ ರಾಮಯ್ಯ ರೈ, ನಡೆ ನರಸಿಂಹ ಭಟ್ಟ, ಅಂಬು, ಬಣ್ಣದ ಮಹಾಲಿಂಗ, ಗೋವಿಂದ ಭಟ್ ಮೊದಲಾದವರೂ, ಬಲಿ ಪರಂತಹ ಭಾಗವತರೂ ಬಡಗಿನಲ್ಲಿ ರುವ ಹಿರಿಯ ಕಲಾವಿದರು, - ಒಟ್ಟಾಗಿ ಇಂದಿಗೂ ಸಮಗ್ರ ಪರಂಪರೆಯ ಚಿತ್ರ ನೀಡಬಲ್ಲವರು. ಆದರೆ ಮುಂದಿನ ತಲೆಮಾರಿ ನಲ್ಲಿ ಅದು ಉಳಿಯುವ ಭರವಸೆ ಇಲ್ಲ. ]
2 ದಿಗ್ದರ್ಶನದ ಅಭಾವ ಯಕ್ಷಗಾನದ ಸಾರ್ವಕಾಲಿಕ ಸಮಸ್ಯೆ. ಪ್ರದರ್ಶನಕ್ಕೆ ಮೊದಲು ಕಲಾವಿದರು ಮಾಡಿಕೊಳ್ಳುವ ಸಮಾಲೋಚನೆ ಪೂರ್ವತಯಾರಿ ಏನೇನೂ ಸಾಲದು.
ದಿಗ್ದರ್ಶನದ ಕ್ಷೇತ್ರದಲ್ಲಿ ತಮ್ಮದಾದ ಕ್ರಮದಿಂದ, ಸಮರ್ಥರೆನಿಸಿದ ಇಬ್ಬರು ಹಳಬರೆಂದರೆ, ದಿ| ಬಲಿಪ ನಾರಾಯಣ ಭಾಗವತರು ಮತ್ತು ಅ ಗರಿ ಶ್ರೀನಿವಾಸ ಭಾಗವತರು. ಇದಕ್ಕಿಂತಲೂ ಮುಂದೆ ಹೋಗಿ ದಿಗ್ದರ್ಶನದ ಬಗ್ಗೆ ಆಳ ವಾಗಿ ಯೋಚಿಸಿ ಪ್ರಯೋಗಗಳನ್ನು ಕೈಕೊಂಡು ಯಶಸ್ವಿಗಳಾದ ಮೂವರು ಭಾಗ ವತರುಗಳೆಂದರೆ, ಸರ್ವಶ್ರೀ ಕಡತೋಕ ಮಂಜುನಾಥ ಭಾಗವತ, ದಾಮೋದರ ಮಂಡೆ ಮತ್ತು ದಿ| ನಾರ್ಣಪ್ಪ ಉಳ್ಳೂರರು. ಆದರೆ ಈ ಬಗ್ಗೆ ಇನ್ನಷ್ಟು ಕೆಲಸ ಆಗಬೇಕಾಗಿದೆ. ಕ್ಷೇತ್ರದಲ್ಲಿರುವ ಹಲವು ಭಾಗವತರಿಗೆ ದಿಗ್ದರ್ಶನ ಕಾವ್ಯದ ಮಾಹಿತಿ ಸಾಲದು, ದಿಗ್ದರ್ಶನದ ಬಗ್ಗೆ ಬದಲಿ ವ್ಯವಸ್ಥೆಯೊಂದು ಆಗಲೇಬೇಕಾಗಿದೆ.
3 ಇಷ್ಟು ಬೃಹತ್ ಪ್ರಮಾಣದಲ್ಲಿ ಯಕ್ಷಗಾನ ಪ್ರಯೋಗಗಳು ಇದ್ದರೂ, ದೀಪ ವ್ಯವಸ್ಥೆ ಮತ್ತು ರಂಗಸ್ಥಳ ರಚನೆಯಲ್ಲಿ ಕಲಾತ್ಮಕತೆ ಬಗ್ಗೆ ಗಮನಕೊಟ್ಟಿರುವ ಉದಾ ಹರಣೆ ತೀರ ವಿರಳ, “ಭವಸ್ಟೀಲಿನ ರಂಗಮಂಟಪ”ದ ಆಕರ್ಷಣೆ ಯೇ ಮುಖ್ಯ ವಾಗಿದೆ. ಬೋಳಾದ ಬೆಳಕಿನ ಟ್ಯೂಬ್‌ಗಳು, ಅತಿಯಾದ ಬೆಳಕು, ಅತಿ ಅಲಂಕಾರದ