ಈ ಪುಟವನ್ನು ಪ್ರಕಟಿಸಲಾಗಿದೆ

೫೨ / ಜಾಗರ
ಗಳಾದರೂ ಸಮರ್ಥವಾಗಿವೆ. ನಿರ್ದಿಷ್ಟ ಪ್ರಮಾಣದ ಹೆಚ್ಚಳ, ನಿವೃತ್ತಿ ವೇತನ, ಪ್ರಾವಿಡೆಂಟ್ ಫಂಡುಗಳು ಕಲಾವಿದರಿಗೆ ದೊರಕಬೇಕು. ಇಂದು ಎಂತಹ ಶ್ರೇಷ್ಠ ಕಲಾವಿದನೇ ಆಗಲಿ, ನಿವೃತ್ತನಾದನೆಂದರೆ ಅವನು ರಸ ಹಿಂಡಿದ ಕಬ್ಬಿನ ಸಿಪ್ಪೆ, ಹಲವು ಕಲಾವಿದರ ವೃದ್ಧಾಪ್ಯದ ಸ್ಥಿತಿ ಕಂಡರೆ ಕರುಳು ಕತ್ತರಿಸುವಂತಿದೆ. ಈ స్థిತಿ ಹೋಗಬೇಕು.
2. ಅಶಕ್ತ ಕಲಾವಿದರಿಗೆ ಮೇಳಗಳೂ, ಸರಕಾರವೂ ಒಂದು ಸ್ಥಾಯಿ ನಿಧಿಯನ್ನು ನಿರ್ಮಿಸಬೇಕಾದ ಅವಶ್ಯಕತೆ ಇದೆ.
3. ಕಲಾವಿದರು ಉದ್ಯೋಗ ಮತ್ತು ಕಲೆಗೆ ಸಂಬಂಧಿಸಿದ ಚರ್ಚೆ ನಡೆಸಲು ಒಂದು ಕಲಾವಿದರ ಸಂಘಟನೆ ನಿರ್ಮಾಣವಾಗಬೇಕು. ಇದರಿಂದ ಕಲಾವಿದರಲ್ಲಿ ವಿಚಾರ ವಿನಿಮಯ ಸಾಧ್ಯವಾಗುತ್ತದೆ.
ಆಡಳಿತ - ಮತ್ತು ಇತರ ವಿಚಾರಗಳು:-
1. ಅನೇಕ ಹಳೆಪ್ರಸಂಗಗಳು ಮುದ್ರಿತವಾಗಿಲ್ಲ. ಮುದ್ರಿತವಾಗಿದ್ದ ಪ್ರಸಂಗ ಗಳ ಪ್ರತಿಗಳೂ ಈಗ ಸಿಗುತ್ತಿಲ್ಲ. ಹೊಸ ಪ್ರಸಂಗಗಳನೇಕ, ಇನ್ನೂ ಮುದ್ರಣದ ಬೆಳಕು ಕಂಡಿಲ್ಲ. ಈ ಬಗ್ಗೆ ಸಂಬಂಧಿತರು ಯೋಚಿಸಬೇಕಾಗಿದೆ.
2. ಆಟಕ್ಕೆ ಲೈಸನ್ಸ್ ನೀಡುವ ಪದ್ಧತಿಯಲ್ಲಿ ಕೆಲವೆಡೆ ಕ್ಲಿಷ್ಟ ಸಮಸ್ಯೆಗಳಿವೆ. ಈ ನಿಯಮಗಳ ಸರಳೀಕರಣ ಆಗಬೇಕಾಗಿದೆ.
3. ಹೊಸ ಭಾಗವತರು, ಸ್ತ್ರೀವೇಷಧಾರಿಗಳ ಕೊರತೆ ಎಲ್ಲೆಡೆ ಅನುಭವಕ್ಕೆ ಬರು ತಿರುವ ಒಂದು ಜರೂರು ಸಮಸ್ಯೆ.
4. ಯಕ್ಷಗಾನ ಪ್ರಸಂಗ ಯಾ ಪ್ರದರ್ಶನ ಗಳ ಬಗ್ಗೆ ಪ್ರಾಯೋಗಿಕ ವಿಮರ್ಶೆ ಆರಂಭವೇ ಆಗಿಲ್ಲ ಅನ್ನಬೇಕು. ಡಾ| ಕಾರಂತರ ಗ್ರಂಥ ಗಳನ್ನು ಬಿಟ್ಟರೆ, ಯಕ್ಷಗಾನದ ಸಮಗ್ರ ವಿವೇಚನೆ ಮಾಡುವ ಗ್ರಂಥಗಳು ಬಂದಿಲ್ಲ. ಹೆಚ್ಚಿನ ಲೇಖಕರು, ಯಕ್ಷಗಾನದ ಮೂಲ, ಯಕ್ಷಗಾನ ಶಬ್ದದ ಉತ್ಪತ್ತಿಗಳ ಬಗ್ಗೆ ಬರೆ ಯುತ್ತಿದ್ದಾರೆ. ಯಕ್ಷಗಾನ ವಿಮರ್ಶೆಗೆ ಇನ್ನೂ ಮೈಯೊಡ್ಡಿಲ್ಲ. ಕಲೆಯ ಪ್ರಗತಿ ಯಲ್ಲಿ ವಿಮರ್ಶೆಯ ಪಾಲು ಬಲು ದೊಡ್ಡದು. ಪ್ರಾಯೋ ಗಿ ಕ ವಿಮರ್ಶೆ ಈ ಕ್ಷೇತ್ರದ ಪ್ರಮುಖ ಅವಶ್ಯಕತೆ. (ಶ್ರೀ ವಿಶುಕುಮಾರರು 'ಉದಯವಾಣಿ'ಯಲ್ಲಿ, ಕೆಲವು ಆಟಗಳ ವಿಮರ್ಶೆ ಬರೆದಿದ್ದರು.)
ಈ ಮೇಲೆ ಹೇಳಿದ ಹಲವು ಸಮಸ್ಯೆಗಳಿಗೆ ಪರಿಹಾರ ಕಂಡು ಹಿಡಿಯು ವಲ್ಲಿ ಉಲ್ಲೇಖನೀಯ ಯತ್ನ ನಡೆಸಿದ ಏಕೈಕ ವ್ಯಕ್ತಿ ಅಂದರೆ ಡಾ| ಶಿವರಾಮ