ಈ ಪುಟವನ್ನು ಪ್ರಕಟಿಸಲಾಗಿದೆ

೫೮| ಜಾಗರ
ಗಳಲ್ಲಿ ಹೊರಗಿನ ಸಮರ್ಥ ಕಲಾವಿದರ ಪ್ರವೇಶಕ್ಕೆ ತಡೆಯೊಡ್ಡುತ್ತಾರೆ. ಈ ರಾಜ ಕೀಯದಿಂದ ಸಂಘಗಳ ಪ್ರದರ್ಶನಗಳಲ್ಲಿ ಹೊಸತನ ಇಲ್ಲದಂತಾಗಿ, ಪರಿಸರದ ವ್ಯಕ್ತಿ ಗಳಿಗೆ ಸಂಘದ ಬಗ್ಗೆ ನಿರಾಸೆ, ನಿರಾಸಕ್ತಿ ಮೂಡುವುದು ಸ್ವಾಭಾವಿಕ.
5 ಹವ್ಯಾಸಿಗಳು ತಮ್ಮ ಸಲಕರಣೆಗಳ ಬಗ್ಗೆ ವಹಿಸುವ ಎಚ್ಚರ ಸಾಲದು. ಶ್ರುತಿ ಕೊಡದ ವಾದ್ಯಗಳು, ಅಚ್ಚು ಕಟ್ಟಿಲ್ಲದ ವೇಷಭೂಷಣಗಳು - ಇವುಗಳಿಂದ ಹಲವು ಪ್ರದರ್ಶನಗಳು ಉದ್ದೇಶರಹಿತವಾಗಿ, ಕೇವಲ ಹಾಸ್ಯಾಸ್ಪದವಾಗುತ್ತವೆ.
ಈ ಮೇಲಿನ ವಿಚಾರಗಳ ಹಿನ್ನೆಲೆಯನ್ನು ನೋಡಿದರೆ, ಈ ದೋಷಗಳನ್ನು ದೂರಮಾಡಿ, ತಮ್ಮದೇ ಆದ ದಾರಿಯಲ್ಲಿ ಸಾರ್ಥಕ ಪ್ರದರ್ಶನ ನೀಡಿದ ಎರಡು ಹವ್ಯಾಸಿ ಸಂಘಗಳ ಹೆಸರುಗಳು ಉಲ್ಲೇಖನೀಯ - 1 ದಿ| ವಿಠಲ ಶಾಸ್ತ್ರಿ- ಶಿಷ್ಯ ವೃಂದ 2 ಕನ್ಯಾನ ಮತ್ತು ಹಂಗಾರಕಟ್ಟೆಯ ಮೇಳಗಳು.
“ಹವ್ಯಾಸೀ ಸಂಸ್ಥೆ'ಗಳು ಏನು ಮಾಡ ಬಹುದು ಎಂಬುದನ್ನು ಈಗ ನೋಡೋಣ. 1. ಯಕ್ಷಗಾನದ ಬಗ್ಗೆ ಚರ್ಚೆ - ವಿಮರ್ಶೆ ಮುಂತಾದ ರೀತಿಯಲ್ಲಿ ವಿಚಾರ- ವಿನಿಮಯ ಬೆಳೆಸಲೋಸುಗ ಚರ್ಚಾಗೋಷ್ಠಿ, ಹಾಗೂ ಸೆಮಿನಾರುಗಳನ್ನು ಯೋಜಿಸಿ, ಸಾಕಷ್ಟು ಕೆಲಸ ಮಾಡಲು ಅವಕಾಶ ಇದೆ.
2. ಅಶಕ್ತ ಕಲಾವಿದರಿಗಾಗಿ ಒಂದು ಕಲ್ಯಾಣ ನಿಧಿಯು ಸ್ಥಾಪಿತ ವಾಗಬೇಕು. ನಾಲ್ಕಾರು “ಹವ್ಯಾಸೀ ತಂಡ” ಗಳ ಸಂಯುಕ್ತ ಪರಿಶ್ರಮದಿಂದ ಇದು ಸಾಧ್ಯ.
3, “ಬಯಲಾಟ” ತಾಳಮದ್ದಳೆಗಳಲ್ಲಿ ನವೀನ - ದೃಷ್ಟಿಯ ಪ್ರಯೋಗಗಳನ್ನು ವ್ಯವಸ್ಥಿತವಾಗಿ ಏರ್ಪಡಿಸುವ, ಹಾಗೂ ಆ ಮೂಲಕ ಜನರ ಅಭಿರುಚಿಯನ್ನು ತಿದ್ದುವ ಕೆಲಸ ಮಾಡಬಹುದು.
4. ಇಂದಿನ ಅವಶ್ಯಕತೆಗಳಲ್ಲಿ ಪ್ರೇಕ್ಷಕರ ಸಂಘಟನೆಯೂ ಒಂದು. ಪ್ರೇಕ್ಷಕರ ಸಂಘಟಿತ ಒತ್ತಡದಿಂದ ವ್ಯವಸಾಯಿ ಮೇಳಗಳ ಸಿಕ್ಕಾಬಟ್ಟೆ ಪ್ರದರ್ಶನಗಳ ಮೇಲೆ ಕಡಿವಾಣ ಹಾಕಿ, ಯಕ್ಷಗಾನ ಸಂಪ್ರದಾಯದ ಅಂದ ಕೆಡದಂತೆ ರಕ್ಷಿಸುವ ಹೊಣೆ ಹವ್ಯಾಸೀ ಸಂಸ್ಥೆಗಳದ್ದು.
5. ಯಕ್ಷಗಾನದ ಸಾಂಪ್ರದಾಯಿಕ “ವೇಷ ಭೂಷಣ” ತಯಾರಿಸುವ ಕಲೆ ಈಗ ನಶಿಸುತ್ತಿದೆ. ಈ ಬಗ್ಗೆ ಸಂಬಂಧಪಟ್ಟ ಕಲಾಗಾರರಿಗೆ ಯೋಗ್ಯ ಪ್ರೋತ್ಸಾಹ